Government Employees ವರ್ಗಾವಣೆ: ಜು.15 ರವರೆಗೆ ಅವಧಿ ವಿಸ್ತರಣೆ
ಆರೋಗ್ಯ ಇಲಾಖೆ, ಆಯುಷ್ ಇಲಾಖೆ: 31ರವರೆಗೆ ಕಾಲಾವಕಾಶ
Team Udayavani, Jul 10, 2024, 11:04 PM IST
ಬೆಂಗಳೂರು: ಇದೇ 9 ರಂದು ಕೊನೆಗೊಳ್ಳಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜು.15 ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅದೇ ರೀತಿ ಆರೋಗ್ಯ ಇಲಾಖೆ ಹಾಗೂ ಆಯುಷ್ ಇಲಾಖೆಯ ವರ್ಗಾವಣೆ ಪ್ರಕ್ರಿಯೆಗೆ ಆಗಸ್ಟ್ 31 ರವರೆಗೆ ಕಾಲಾವಕಾಶ ನೀಡಿದೆ.
ಸಾರ್ವತ್ರಿಕ ವರ್ಗಾವಣೆಗೆ ನೀಡಿದ್ದ ಅವಧಿ ಅತ್ಯಂತ ಕಡಿಮೆಯಾಗಿದ್ದು, ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ರಾಜ್ಯ ಸರ್ಕಾರಿ ನೌಕರರು ಮನವಿ ಮಾಡಿದ್ದರು. ಇದನ್ನು ಮನಗಂಡ ಸರ್ಕಾರ, ಅವಧಿ ವಿಸ್ತರಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಹಿಂದೆ ಇದ್ದ ಷರತ್ತುಗಳಿಗೆ ಒಳಪಟ್ಟು ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಆದೇಶ ಹೊರಡಿಸಿದ್ದು, ಆಯಾ ಇಲಾಖಾ ಸಚಿವರಿಗೆ ನೀಡಿದ್ದ ವರ್ಗಾವಣೆ ಅಧಿಕಾರವೂ ಜು.15 ರವರೆಗೆ ವಿಸ್ತರಣೆಯಾದಂತಾಗಿದೆ. ಅದೇ ರೀತಿ ಜು.30 ಕ್ಕೆ ಕೊನೆಗೊಳ್ಳಬೇಕಿದ್ದ ಆರೋಗ್ಯ ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಮತ್ತಿತರ ವೃಂದದ ಸಿಬ್ಬಂದಿ ವರ್ಗಾವಣೆಯ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿ ಆಯಾ ಇಲಾಖೆಗಳು ಆದೇಶಿಸಿದ್ದು, ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಪ್ರಕ್ರಿಯೆ ಮುಂದುವರಿಯಲಿದೆ.
ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ವೆಂಕಟೇಶ್ ಅವರ ಆದೇಶದ ಮೇರೆಗೆ ಐವರು ಅಧೀಕ್ಷಕರು, ಪ್ರಥಮ ದರ್ಜೆ ಸಹಾಯಕರು, 14 ದ್ವಿತೀಯದರ್ಜೆ ಸಹಾಯಕರು, 16 ಜಾನುವಾರು ಅಭಿವೃದ್ಧಿ ಅಧಿಕಾರಿ, 13 ಜಾನುವಾರು ಅಧಿಕಾರಿ, 55 ಹಿರಿಯ ವೈದ್ಯಕೀಯ ಪರೀಕ್ಷಕರು, 52 ವೈದ್ಯಕೀಯ ಪರೀಕ್ಷಕರು, 90 ಮಂದಿ ಕಿರಿಯ ವೈದ್ಯಕೀಯ ಪರೀಕ್ಷಕ, ಓರ್ವ ವಾಹನ ಚಾಲಕ, 27 ಜನ ಡಿ ದರ್ಜೆ ನೌಕರರನ್ನು ವರ್ಗಾವಣೆ ಮಾಡಲಾಗಿದೆ.
ಅಂತೆಯೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿದ್ದ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ಸಚಿವ ಶಿವರಾಜ್ ತಂಗಡಗಿ ಆದೇಶ ಮೇರೆಗೆ ವರ್ಗಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.