Narendra Modi: ಪ್ರಧಾನಿ ಮೋದಿ ರಷ್ಯಾ ಪ್ರವಾಸ: ರಾಜತಾಂತ್ರಿಕ ನೈಪುಣ್ಯಕ್ಕೆ ಸಾಕ್ಷಿ


Team Udayavani, Jul 11, 2024, 7:45 AM IST

Narendra Modi: ಪ್ರಧಾನಿ ಮೋದಿ ರಷ್ಯಾ ಪ್ರವಾಸ: ರಾಜತಾಂತ್ರಿಕ ನೈಪುಣ್ಯಕ್ಕೆ ಸಾಕ್ಷಿ

ಪ್ರಧಾನಿ ನರೇಂದ್ರ ಮೋದಿ ಅವರ ಬಲು ನಿರೀಕ್ಷಿತ ರಷ್ಯಾ ಪ್ರವಾಸ ಫ‌ಲಪ್ರದ ವಾಗಿ ಅಂತ್ಯಗೊಂಡಿದೆ. ಈ ಭೇಟಿಯ ವೇಳೆ ಪ್ರಧಾನಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರೊಂದಿಗೆ ದ್ವಿಪಕ್ಷೀಯ ಸಂಬಂಧ ವೃದ್ಧಿಯ ಜತೆಜತೆಯಲ್ಲಿ ಜಾಗತಿಕ ಸಮಸ್ಯೆ, ವಿದ್ಯಮಾನಗಳ ಕುರಿತಂತೆ ಮಹತ್ವದ ಚರ್ಚೆ ನಡೆಸಿದರು. ಇದೇ ವೇಳೆ ಕೆಲವು ಪ್ರಮುಖ ಒಪ್ಪಂದಗಳಿಗೆ ಅಂಕಿತ ಹಾಕಲಾಗಿದ್ದು ಇದ ರಿಂದ ಭಾರತ-ರಷ್ಯಾ ನಡುವಣ ಸಹಯೋಗ ಇನ್ನಷ್ಟು ಸದೃಢವಾದಂತಾಗಿದೆ.

ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷರೊಂದಿಗೆ ನಡೆಸಿದ ಮಾತುಕತೆ ವೇಳೆ ಭಾರತಕ್ಕೆ ಸಂಬಂಧಿಸಿದ ಕೆಲವು ಮಹತ್ತರ ವಿಷಯಗಳನ್ನು ನೇರವಾಗಿ ಪ್ರಸ್ತಾವಿಸಿ, ಪುತಿನ್‌ ಅವರಿಂದ ಸ್ಪಷ್ಟ ಭರವಸೆಯನ್ನು ಪಡೆದುಕೊಳ್ಳುವಲ್ಲಿ ಸಫ‌ಲರಾಗಿದ್ದಾರೆ. ರಷ್ಯಾ ಸೇನೆಗೆ ಭಾರತೀಯರ ಸಹಿತ ವಿದೇಶಿಯರನ್ನು ಅಕ್ರಮವಾಗಿ ಸೇರ್ಪಡೆಗೊಳಿಸಿ, ಅವರನ್ನು ಉಕ್ರೇನ್‌ನ ಯುದ್ಧಪೀಡಿತ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸುತ್ತಿರುವ ಕುರಿತಂತೆ ಭಾರತ ಹಲವು ಬಾರಿ ರಷ್ಯಾಕ್ಕೆ ತನ್ನ ಆಕ್ಷೇಪವನ್ನು ಸಲ್ಲಿಸಿತ್ತು. ರಾಜತಾಂತ್ರಿಕ ಮಟ್ಟದಲ್ಲಿ ಪ್ರಯತ್ನಗಳನ್ನು ನಡೆಸಿ ರಷ್ಯಾ ಸೇನೆಗೆ ಸೇರ್ಪಡೆಗೊಳಿಸಿದ್ದರೆನ್ನಲಾಗಿದ್ದ ಭಾರತೀಯರಲ್ಲಿ ಕೆಲವರನ್ನು ಸ್ವದೇಶಕ್ಕೆ ವಾಪಸು ಕರೆತರುವಲ್ಲಿ ಯಶಸ್ವಿಯೂ ಆಗಿತ್ತು. ಆದರೆ ಕಳೆದ ಮೂರ್‍ನಾಲ್ಕು ತಿಂಗಳುಗಳ ಅವಧಿಯಲ್ಲಿ ರಷ್ಯಾ ಸೇನೆಯಲ್ಲಿದ್ದ ನಾಲ್ವರು ಭಾರತೀಯರು ಯುದ್ಧಪೀಡಿತ ಪ್ರದೇಶದಲ್ಲಿ ಉಕ್ರೇನ್‌ ನಡೆಸಿದ ದಾಳಿಯ ವೇಳೆ ಸಾವನ್ನಪ್ಪಿದ ಬಳಿಕ ಭಾರತ, ರಷ್ಯಾ ಸೇನೆಯಲ್ಲಿನ ತನ್ನೆಲ್ಲ ಪ್ರಜೆಗಳನ್ನು ತತ್‌ಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಒತ್ತಡ ಹೇರುತ್ತಲೇ ಬಂದಿತ್ತು.

ಇದರ ಹೊರತಾಗಿಯೂ ರಷ್ಯಾದಿಂದ ಖಚಿತ ಭರವಸೆ ಲಭಿಸದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ಈ ವಿಷಯವನ್ನು ರಷ್ಯಾ ಅಧ್ಯಕ್ಷರ ಮುಂದೆ ಪ್ರಸ್ತಾವಿಸಿದ್ದರು. ಇದರ ಫ‌ಲವಾಗಿ ತನ್ನ ಸೇನೆಯಲ್ಲಿರುವ ಎಲ್ಲ ಭಾರತೀಯರನ್ನು ಕರ್ತವ್ಯದಿಂದ ಮುಕ್ತಗೊಳಿಸುವುದಷ್ಟೇ ಅಲ್ಲದೆ ಅವರೆಲ್ಲರನ್ನೂ ಸುರಕ್ಷಿತವಾಗಿ ಭಾರತಕ್ಕೆ ವಾಪಸು ಕಳುಹಿಸಿ ಕೊಡಲು ರಷ್ಯಾ ಸಮ್ಮತಿಸಿದೆ. ಇದರಿಂದ ರಷ್ಯಾ ಸೇನೆಗೆ ಬಲವಂತವಾಗಿ ಸೇರ್ಪಡೆಗೊಂಡಿರುವರೆನ್ನಲಾದ ಭಾರತೀಯರ ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ರಷ್ಯಾದ ರೋಸ್ಟಾಮ್‌ನೊಂದಿಗೆ ಮಹತ್ವದ ಒಪ್ಪಂದಕ್ಕೆ ಅಂಕಿತ ಹಾಕಲಾಗಿದ್ದು,

ಬಿಎಚ್‌ಇಎಲ್‌ ಮತ್ತು ಪವರ್‌ವೆುಕ್‌ ಸಂಸ್ಥೆಗಳು ಜಂಟಿಯಾಗಿ ಭಾರತದಲ್ಲಿ ವಿದ್ಯುತ್‌ ಉತ್ಪಾದನೆಗಾಗಿ ಆರು ಅಣು ಶಕ್ತಿ ಸ್ಥಾವರಗಳನ್ನು ಸ್ಥಾಪಿಸಲು ಸಮ್ಮತಿಸಿವೆ. ಇದರಿಂದ ಭಾರತದಲ್ಲಿನ ವಿದ್ಯುತ್‌ ಕೊರತೆಯ ಸಮಸ್ಯೆಗೆ ಬಲುದೊಡ್ಡ ಪರಿಹಾರ ಸಿಗಲಿದೆ.

ರಷ್ಯಾ-ಉಕ್ರೇನ್‌ ನಡುವೆ ಯುದ್ಧ ಆರಂಭವಾದಾಗಿನಿಂದಲೂ ಉಭಯ ರಾಷ್ಟ್ರಗಳಿಗೂ ಸಂಧಾನ ಮಾತುಕತೆಯಷ್ಟೇ ಯಾವುದೇ ಸಮಸ್ಯೆಗಳಿಗೆ ಪರಿಹಾರವೇ ಹೊರತು ಯುದ್ಧ ಎಂದಿಗೂ ಪರಿಹಾರವಾಗಲಾರದು ಎಂದು ಕಿವಿಮಾತು ಹೇಳುತ್ತಲೇ ಬಂದಿರುವ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷರೊಂದಿಗಿನ ಮುಖಾಮುಖೀ ಭೇಟಿಯ ಸಂದರ್ಭದಲ್ಲೂ ಇದನ್ನು ಪುನರುಚ್ಚರಿಸಿದ್ದೇ ಅಲ್ಲದೆ ಸಂಘರ್ಷ ತಡೆಯುವಲ್ಲಿ ಯಾವುದೇ ತೆರನಾದ ಪಾತ್ರ ವಹಿಸಲು ಭಾರತ ಸನ್ನದ್ಧವಾಗಿದೆ ಎನ್ನುವ ಮೂಲಕ ಯುದ್ಧ, ಸಂಘರ್ಷದ ವಿಷಯಗಳಲ್ಲಿ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಾಗತಿಕ ಸಮುದಾಯಕ್ಕೆ ಸಾರಿ ಹೇಳಿದರು.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಈ ರಷ್ಯಾ ಪ್ರವಾಸ ಅಭೂತಪೂರ್ವ ಯಶಸ್ಸು ಕಂಡಿದೆ. ರಾಜತಾಂತ್ರಿಕ, ವಾಣಿಜ್ಯ-ವ್ಯವಹಾರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವೃದ್ಧಿಯ ಜತೆಜತೆಯಲ್ಲಿ ಯುದ್ಧದ ಕುರಿತಾಗಿನ ತನ್ನ ಕಠಿನ ನಿಲುವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಲವಾಗಿ ಪ್ರತಿಪಾದಿಸುವಲ್ಲಿ ಮೋದಿ ಯಶ ಕಂಡಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಅವರು ವಿದೇಶಿ ರಾಜತಾಂತ್ರಿಕತೆಯಲ್ಲಿ ತಮ್ಮ ನೈಪುಣ್ಯವನ್ನು ಮತ್ತೂಮ್ಮೆ ಜಗಜ್ಜಾಹೀರುಗೊಳಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.