Dengue case ನೀರು ನಿಲ್ಲದಂತೆ ನಿಗಾ ವಹಿಸಿ: ಅಪರ ಜಿಲ್ಲಾಧಿಕಾರಿ
Team Udayavani, Jul 11, 2024, 6:45 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣ ಹೆಚ್ಚುತ್ತಿವೆ. ಡೆಂಗ್ಯೂ ನಿರ್ಮೂಲನೆಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನವಸತಿ ಪ್ರದೇಶ ಹಾಗೂ ತಮ್ಮ ಇಲಾಖಾ ವ್ಯಾಪ್ತಿಯ ಕಟ್ಟಡ, ಆವರಣಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್ ಕುಮಾರ್ ಹೇಳಿದರು.
ಡೆಂಗ್ಯೂ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ತುರ್ತು ಸಭೆಯಲ್ಲಿ ಮಾತ ನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು, ಪಾಲಿಕೆಯ ಎಂ.ಪಿ.ಡಬ್ಲ್ಯೂ ಸಿಬಂದಿ ಮುಂದಿನ ಎರಡು ದಿನಗಳಲ್ಲಿ ಪ್ರತಿ ವಾರ್ಡ್ಗಳಿಗೆ ಭೇಟಿ ನೀಡಿ ಲಾರ್ವ ಉತ್ಪತ್ತಿಗೆ ಕಾರಣವಾಗುವ ನೀರಿನ ಸಂಗ್ರಹಗಳನ್ನು ಗುರುತಿಸಿ ನಾಶಗೊಳಿ ಸಲು ಕ್ರಮ ಕೈಗೊಳ್ಳಬೇಕು ಎಂದರು.
ಎಲ್ಲ ತಹಶೀಲ್ದಾರ್, ಕಾರ್ಯ ನಿರ್ವಾಹಕ ಅಧಿಕಾರಿ, ಕಮಿಷನರ್ಗಳು ಹಾಗೂ ಆಯಾ ತಾಲೂಕಿನ ಆರೋಗ್ಯಾಧಿಕಾರಿಗಳು ಕೂಡಲೇ ಸಭೆ ನಡೆಸಿ ತಮ್ಮ ವ್ಯಾಪ್ತಿಯ ಪ್ರದೇಶ ಗಳಿಗೆ ಭೇಟಿ ನೀಡಿ ಲಾರ್ವಾ ಉತ್ಪತ್ತಿ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಜಾಲತಾಣ, ಕರಪತ್ರಗಳ ಮೂಲಕವೂ ಜಾಗೃತಿ ಮೂಡಿಸಬೇಕು ಎಂದರು.
ಶಾಲಾ ಮುಖ್ಯಸ್ಥರ ಜತೆ ಸಭೆ
ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದ್ದು, ಶಿಕ್ಷಣ ಇಲಾಖೆಯಿಂದ ಆಯಾ ಪ್ರದೇಶ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಶಾಲಾ ಕಾಲೇಜುಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ, ಡೇ ಕೇರ್ ಸೆಂಟರ್ಗಳು ಹಾಗೂ ಗರ್ಭಿಣಿಯರಿಗೆ ಡೆಂಗ್ಯೂ ರೋಗ ಹರಡದಂತೆ ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರಿಂದ ಗರ್ಭಿಣಿ
ಯರ ಅರೋಗ್ಯ ಸ್ಥಿತಿಗತಿಗಳ ಬಗ್ಗೆ ಗಮನಹರಿಸುವಂತೆ ಸೂಚನೆ ನೀಡ ಬೇಕು. ಕಹಿ ಬೇವಿನ ಎಣ್ಣೆ ಯನ್ನು ಹಚ್ಚುವುದರಿಂದ ಸೊಳ್ಳೆ ಕಡಿತದಿಂದಪಾರಾಗಬಹುದು ಎಂದರು.
ಎಲ್ಲ ಸರಕಾರಿ ಹಾಸ್ಟೆಲ್ಗಳಲ್ಲೂ ಶುಚಿತ್ವ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಮಿಕರಿಗೆ ಮಾಹಿತಿ ನೀಡಿ
ಕಟ್ಟಡ ನಿರ್ಮಾಣ ಕಾರ್ಯಕ್ಕೆ ಹೊರ ರಾಜ್ಯದಿಂದ ಬಂದಂತಹ ವಲಸೆ ಕಾರ್ಮಿಕರು ಇರುವ ಜಾಗದಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ತಿಳಿಸಬೇಕು. ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರಿಗೆ ಡೆಂಗ್ಯೂ ಬಗ್ಗೆ ಮಾಹಿತಿ ನೀಡಬೇಕು. ಕೃಷಿ ಇಲಾಖೆಯಿಂದ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೃಷಿಕರ ಸಭೆ ನಡೆಸಿ ಮಾಹಿತಿಯನ್ನು ನೀಡುವಂತೆ ಅವರು ಸೂಚಿಸಿದರು.
ಸರಕಾರಿ ಕಟ್ಟಡಗಳನ್ನು ಪರಿಶೀಲಿಸಿ
ಸರಕಾರಿ ಕಟ್ಟಡಗಳ ಮೇಲ್ಛಾವಣಿ ಯಲ್ಲಿ ನೀರು ನಿಲ್ಲದೆ ಇರುವಂತೆ ನೋಡಿಕೊಳ್ಳಬೇಕು, ಪ್ರತಿ ಶುಕ್ರವಾರ ಕಡ್ಡಾಯವಾಗಿ ಹಾಗೂ ಪ್ರತಿದಿನ ಖುದ್ದು ಇಲಾಖೆಯ ಅಧಿಕಾರಿಗಳೇ ತಮ್ಮ ಇಲಾಖೆಯ ಸುತ್ತಮುತ್ತಲೂ ನೀರು ಸಂಗ್ರಹವಾಗಿದೆಯೇ ಎಂಬುದರ ಬಗ್ಗೆ ಪರೀಕ್ಷಿಸಬೇಕು ಎಂದು ಡಾ| ಜಿ. ಸಂತೋಷ್ ಅವರು ಹೇಳಿದರು.
ಜಿಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ನವೀನ್ಚಂದ್ರ ಕುಲಾಲ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಸಿಬಂದಿ ವರ್ಗದವರು ಸಭೆಯಲ್ಲಿದ್ದರು.
ವೈದ್ಯರ ಸಲಹೆಯಿಲ್ಲದೆ ಪ್ಯಾರಸಿಟಾಮೋಲ್ ಸೇವನೆ ಅಪಾಯಕಾರಿ: ಡಿಎಚ್ಒ
ಜ್ವರ ಕಾಣಿಸಿಕೊಂಡರೆ ಹೆಚ್ಚಾಗಿ ನೋವು ನಿವಾರಕಗಳನ್ನು (ಪ್ಯಾರಸಿಟಾಮೋಲ್) ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಡೆಂಗ್ಯೂ ಜ್ವರದಲ್ಲಿ ಬಿಳಿ ರಕ್ತ ಕಣ ಕಡಿಮೆಯಾಗುತ್ತದೆ. ಆದ್ದರಿಂದ ಜ್ವರ ಇರುವ ಸಂದರ್ಭದಲ್ಲಿ ವೈದ್ಯರ ಸಲಹೆ ಇಲ್ಲದೆ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡಲ್ಲಿ ಸಾವು ಸಂಭವಿಸಬಹುದು ಅಥವಾ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು. ಡೆಂಗ್ಯೂ ಸಂದರ್ಭದಲ್ಲಿ ಪಪ್ಪಾಯಿ ಎಲೆಯ ಜ್ಯೂಸ್ ಸೇವಿಸುವುದು ಕೂಡ ಹಾನಿಕಾರಕ. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ಯಾವುದೇ ಸ್ವಯಂ ಚಿಕಿತ್ಸೆಯನ್ನು ಮಾಡಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್.ಆರ್. ತಿಮ್ಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.