Dhananjaya: ಕೆಲವೊಂದನ್ನು ನಾವು ಒಂಟಿಯಾಗಿಯೇ ಫೈಟ್‌ ಮಾಡಬೇಕು.. ದರ್ಶನ್‌ ಬಗ್ಗೆ ಡಾಲಿ ಮಾತು


Team Udayavani, Jul 11, 2024, 12:55 PM IST

Dhananjaya: ಕೆಲವೊಂದನ್ನು ನಾವು ಒಂಟಿಯಾಗಿಯೇ ಫೈಟ್‌ ಮಾಡಬೇಕು.. ದರ್ಶನ್‌ ಬಗ್ಗೆ ಡಾಲಿ ಮಾತು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ನಟ ದರ್ಶನ್‌(Actor Darshan) ಬಂಧನದ ಬಳಿಕ ಅವರ ಅಭಿಮಾನಿಗಳು ಶಾಕ್‌ ನಲ್ಲಿದ್ದಾರೆ. ಸ್ಟಾರ್‌ ನಟನೊಬ್ಬ ಇಂತಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ಇನ್ನೂ ಕೂಡ ಕೆಲ ಜನರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.

ದರ್ಶನ್‌ ಬಂಧನದ ಬಳಿಕ ನೂರಾರು ಮಂದಿ ಈ ಪ್ರಕರಣದಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ. ಆದರೆ ದರ್ಶನ್‌ ಅಭಿಮಾನಿಗಳು ಹಾಗೂ ಚಿತ್ರರಂಗದ ಕೆಲವೊಂದಿಷ್ಟು ಮಂದಿ ದರ್ಶನ್‌ ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ಇದೇ ವಿಚಾರವನ್ನು ಪದೇ ಪದೇ ಹೇಳುತ್ತಿರುವುದು ಸರಿಯಲ್ಲ, ಅವರು ಆದಷ್ಟು ಬೇಗ ಎಲ್ಲ ಆರೋಪಗಳಿಂದ ಮುಕ್ತವಾಗಿ ಹೊರಬರಲಿ ಎಂದು ಆಶಿಸಿದ್ದಾರೆ.

ಇದೀಗ ನಟ ಡಾಲಿ ಧನಂಜಯ(Daali Dhananjaya) ಕೂಡ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಈ ಹಿಂದೆ ʼಕೋಟಿʼ ಸಿನಿಮಾದ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಗ್ಗೆ ಪ್ರಶ್ನೆ ಕೇಳಿದಾಗ ಅವರು, ಸಿನಿಮಾದ ವಿಚಾರ ಮಾತನಾಡಿ ಎಂದಿದ್ದರು, ಇದೀಗ ಅವರಿಗೆ ಮತ್ತೆ ಅದೇ ಪ್ರಶ್ನೆಯನ್ನು ಕೇಳಲಾಗಿದೆ. ಈ ಬಾರಿ ಅವರು ಉತ್ತರಿಸಿದ್ದಾರೆ.

“ಈ ಪ್ರಕರಣದಲ್ಲಿ ಎಷ್ಟರ ಮಟ್ಟಿಗೆ ಅವರು ಭಾಗಿಯಾಗಿದ್ದಾರೆ ಅದು ಗೊತ್ತಿಲ್ಲ. ಖಂಡಿತ ಅವರ ಕಡೆಯಿಂದ ತಪ್ಪು ಆಗಿದ್ದರೆ ಶಿಕ್ಷೆಯಾಗಲಿ ನಾನು ಅವರ ಸಹೋದರನಾಗಿ ಹೇಳುತ್ತಿದ್ದೇನೆ. ಇಲ್ಲದಿದ್ರೆ ಕಾನೂನಾತ್ಮಕವಾಗಿ ಏನು ಆಗಬೇಕು ಅದಾಗಲಿ. ಅದನ್ನೇ ಪದೇ ಪದೇ ಹೇಳುತ್ತಾ ಇರುವುದು ಸರಿಯಲ್ಲ. ಈ ಕೃತ್ಯಕ್ಕೆ ಯಾರೂ ಸಪೋರ್ಟ್‌ ಮಾಡುತ್ತಿಲ್ಲ. ಅಲ್ಲಿ ನಡೆದಿರುವ ಘಟನೆಗೆ ಯಾರೂ ಕೂಡ ಸಮರ್ಥನೆ ನೀಡಿಲ್ಲ. ನಮ್ಮ ಮನೆಯವರೇ ಮಾಡಿದ್ದರೆ ಇದರ ಪರ ವಹಿಸಲು ಆಗುವುದಿಲ್ಲ. ಅಲ್ಲಿ ತಪ್ಪಾಗಿರುವುದು ನಿಜ. ಕಾನೂನಾತ್ಮಕವಾಗಿ ಏನು ಆಗಬೇಕೋ ಅದು ಆಗುತ್ತದೆ” ಎಂದಿದ್ದಾರೆ.

ಕೆಲವೊಂದು ಪೈಟ್‌ ಗಳನ್ನು, ಹೋರಾಟಗಳನ್ನು ನಾವೇ ಮಾಡಿಕೊಂಡಿರುವುದು ಆಗಿರುತ್ತದೆ ಅಥವಾ ನಮಗೆ ಗೊತ್ತಿಲ್ಲದೆ ಆಗಿರುತ್ತದೆ. ಕೆಲವೊಂದನ್ನು ನಾವು ಒಂಟಿಯಾಗಿಯೇ ಫೈಟ್‌ ಮಾಡಬೇಕು. ಈ ಬಗ್ಗೆ ನಾವ್ಯಾರು ಏನನ್ನೂ ಹೇಳುವುದಕ್ಕೆ ಅಥವಾ ಜಡ್ಜ್‌ ಮೆಂಟ್‌ ಕೊಡೋಕೆ ಆಗಲ್ಲ. ಆ ಕೃತ್ಯವನ್ನು ಖಂಡಿಸಬಹುದಷ್ಟೇ. ಅವರಿಂದ ತಪ್ಪು ಆಗಿದ್ದರೆ ಶಿಕ್ಷೆ ಆಗಲಿ. ಇಲ್ಲದಿದ್ರೆ ಬದುಕು ಯಾವಾಗಲೂ ಅವಕಾಶವನ್ನು ಕೊಟ್ಟೇ ಕೊಡುತ್ತದೆ. ಮತ್ತೆ ಆ ಥರದ ಕೃತ್ಯದಿಂದ ದೂರವಿದ್ದು, ಮತ್ತೆ ಪ್ರೇಕ್ಷಕರನ್ನು ರಂಜಿಸಲಿ” ಎಂದು ಅವರು ಹೇಳಿದ್ದಾರೆ.

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಜು.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.