Valmiki Corporation case: ನಾಗೇಂದ್ರ ಆಪ್ತರಿಗೆ ನೊಟೀಸ್ ನೀಡಿದ ಇಡಿ ಅಧಿಕಾರಿಗಳು
Team Udayavani, Jul 11, 2024, 12:52 PM IST
ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಗೈರಾದ ಮಾಜಿ ಸಚಿವ ನಾಗೇಂದ್ರ ಆಪ್ತರಿಗೆ ಸಂಕಷ್ಟ ಎದುರಾಗಿದೆ. ಬಳ್ಳಾರಿಯಲ್ಲಿ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಂಡ ನಾಲ್ವರು ನಾಗೇಂದ್ರ ಆಪ್ತರಿಗೆ ಇಡಿ ಅಧಿಕಾರಿಗಳು ನೊಟೀಸ್ ಕೊಟ್ಟಿದ್ದಾರೆ.
ಬುಧವಾರ ಬಳ್ಳಾರಿಯ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ಮಾಡಿದ್ದರು. ಹತ್ತು ಇಡಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿತ್ತು. ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸುದೀರ್ಘ ಪರಿಶೀಲನೆ ನಡೆಸಿತ್ತು. ಇಡಿ ಅಧಿಕಾರಿಗಳ ದಾಳಿ ವೇಳೆ ನಾಗೇಂದ್ರ ಕುಟುಂಬಸ್ಥರು ಯಾರೂ ಮನೆಯಲ್ಲಿ ಇರಲಿಲ್ಲ. ಆಪ್ತ ಸಹಾಯಕ ಚೇತನ್ ಹಾಗೂ ಮಾಧ್ಯಮ ಸಲಹೆಗಾರ ನಾಗರಾಜ್ ವಿಚಾರಣೆ ನಡೆಸಲಾಗಿತ್ತು.
ಇವರಷ್ಟೇ ಅಲ್ಲದೇ ನಾಗೇಂದ್ರ ಅವರ ಇನ್ನು ನಾಲ್ವರು ಆಪ್ತರಿಗೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಹೇಳಿದ್ದರು. ಆದರೆ ನಾಗೇಂದ್ರ ಅವರ ನಾಲ್ಕು ಜನ ಆಪ್ತರು ಇಡಿ ಅಧಿಕಾರಿಗಳ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದಾರೆ. ಇದೀಗ ವಿಚಾರಣೆಗೆ ಗೈರಾದವರಿಗೆ ಇಡಿ ನೊಟೀಸ್ ಕೊಟ್ಟಿದೆ.
ಬೆಂಗಳೂರಿನ ಇಡಿ ಕಚೇರಿಗೆ ಬಂದು ವಿಚಾರಣೆ ಎದುರಿಸುವಂತೆ ಸೂಚಿಸಲಾಗಿದೆ. ಖಾಸಗಿ ಆಪ್ತ ಸಹಾಯಕ ವಿಜಯ್ ಕುಮಾರ್ ಸೇರಿದಂತೆ ನಾಲ್ಕು ಜನರಿಗೆ ಇಡಿ ಬುಲಾವ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.