Shirvaದ ಬಾಲ ಪ್ರತಿಭೆ- 70 ದೇಶಗಳ ರಾಷ್ಟ್ರಧ್ವಜ ಗುರುತಿಸುವ 5ರ ಪೋರ!

ಶಿರ್ವ ಮೂಲದ ಬಾಲಕನಿಗೆ ಕ್ರಿಕೆಟಿಗರು, ವಾಹನಗಳು, ಲೋಗೋಗಳೂ ಗೊತ್ತು

Team Udayavani, Jul 11, 2024, 1:05 PM IST

Shirvaದ ಬಾಲ ಪ್ರತಿಭೆ- 70 ದೇಶಗಳ ರಾಷ್ಟ್ರಧ್ವಜ ಗುರುತಿಸುವ 5ರ ಪೋರ!

ಶಿರ್ವ: ಮೊಬೈಲ್‌ ಗೀಳಿನಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದೆ ಎಂಬ ವಾದಗಳ ನಡುವೆಯೇ ಪುಟ್ಟ ಪೋರನೊಬ್ಬ ಮೊಬೈಲನ್ನೇ ಬಳಸಿಕೊಂಡು ವಿಶೇಷ ಪ್ರತಿಭೆಯನ್ನು ರೂಢಿಸಿಕೊಂಡಿದ್ದಾನೆ. ಅವನು 70ರಷ್ಟು ದೇಶಗಳ ರಾಷ್ಟ್ರಧ್ವಜಗಳನ್ನು ಗುರುತಿಸುತ್ತಾನೆ.

50ಕ್ಕೂ ಹೆಚ್ಚು ಪ್ರಾಡಕ್ಟ್/ಕಂಪೆನಿಯ ಲೋಗೋ ಗುರುತಿಸುತ್ತಾನೆ. ಅವನಿಗೆ ಕ್ರಿಕೆಟಿಗರೂ ಗೊತ್ತು, ವಾಹನ ನೋಡಿದ ಕೂಡಲೇ ಅದನ್ನು ಗುರುತಿಸುತ್ತಾನೆ! ದುಬೈಯಲ್ಲಿ ಎಚ್‌ಎಸ್‌ಬಿಸಿ ಬ್ಯಾಂಕ್‌ ಉದ್ಯೋಗಿಯಾಗಿರುವ ಶಿರ್ವದ ಪ್ರಶಾಂತ್‌ ಕುಂದರ್‌ ಮತ್ತು ಖಾಸಗಿ ಕಂಪೆನಿಯಲ್ಲಿ ಫೈನಾನ್ಸ್‌ ಮ್ಯಾನೇಜರ್‌ ಆಗಿರುವ ಶ್ವೇತಾ ಕುಂದರ್‌ ಅವರ ಪುತ್ರ ವ್ಯೋಮ್‌ ಕುಂದರ್‌ ಎಂಬ ಐದು ವರ್ಷದ ಪೋರನೇ ಈ ಸಾಧಕ ಪ್ರತಿಭೆ.

ವ್ಯೋಮ್‌ ದುಬೈಯಲ್ಲಿ ಹುಟ್ಟಿ ಅಲ್ಲೇ ಯುಕೆಜಿಯಲ್ಲಿ ಕಲಿಯುತ್ತಿದ್ದಾನೆ. ಪಟಪಟನೆ ಮಾತನಾಡುತ್ತಾ ಶಾಲೆಯ ಪ್ರತೀ
ಚಟುವಟಿಕೆಯಲ್ಲಿಯೂ ಭಾಗವಹಿಸುವ ಈತ ಶಿಕ್ಷಕಿಯರಿಗೂ ಅಚ್ಚುಮೆಚ್ಚು. ತುಳು ಕಲಿಯಲು ಊರಿಗೆ ಬಂದಿದ್ದಾನೆ!

ಪಟಪಟನೆ ಇಂಗ್ಲಿಷ್‌ ಮಾತನಾಡುವ ಈತನಿಗೆ ತುಳು ಸರಿಯಾಗಿ ಬರುವುದಿಲ್ಲ. ರಜಾದಿನದಲ್ಲಿ ತುಳು ಕಲಿಯುವ ಸಲುವಾಗಿ ಊರಿಗೆ ಬಂದಿದ್ದಾನೆ. ಅಜ್ಜ ಗೋವಿಂದ ಕುಂದರ್‌ ಮತ್ತು ಅಜ್ಜಿ ರಾಜೀವಿ ಕುಂದರ್‌ ಅವರಿಂದ ತುಳು ಕಲಿಯುತ್ತಿದ್ದಾನೆ. ಅವನಿಗೆ ಅಜ್ಜಿ ಜತೆ ತುಳು ಮಾತನಾಡಲು ಕಷ್ಟವಾಗುವಾಗ ಅಜ್ಜಿಯೇ ಇಂಗ್ಲಿಷ್‌ ಕಲಿಯಲಿ, ನಾನ್ಯಾಕೆ ತುಳು ಕಲಿಯಲಿ ಎಂದು ಮುಗ್ಧವಾಗಿ ಕೇಳುತ್ತಾನೆ.

ಏನೇನು ಮಾಡ್ತಾನೆ ವ್ಯೋಮ್‌?
*ಕ್ರಿಕೆಟ್‌, ಕ್ವಿಜ್‌, ವಿವಿಧ ವಾಹನಗಳು, ಬಣ್ಣಗಳು ಸೇರಿದಂತೆ ಆಸಕ್ತಿದಾಯಕ ವಿಷಯಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದಾನೆ.
*ಕಳೆದ ಆರು ತಿಂಗಳಿನಿಂದ ಯಾರದೇ ಸಹಾಯವಿಲ್ಲದೆ ರಾಷ್ಟ್ರ ಧ್ವಜ ಗುರುತಿಸುವುದು, ವಾಹನಗಳು, ಕ್ರಿಕೆಟಿಗರು, ಯಾವುದೇ ಪ್ರಾಡಕ್ಟ್/ಕಂಪೆನಿಯ ಲೋಗೋ ತೋರಿಸಿದಲ್ಲಿ ಪಟಪಟನೆ ಹೇಳುವ ಚತುರತೆ ಇದೆ.
*ಐಪಿಎಲ್‌ ಟೀಮ್‌ ಗಳ ಬಹುತೇಕ ಆಟಗಾರ ರನ್ನು ಗುರುತಿಸುತ್ತಾನೆ.
*ಫುಟ್‌ಬಾಲ್‌ ಮತ್ತು ಕ್ರಿಕೆಟ್‌ನ ಸ್ಟಾರ್‌ ಆಟಗಾರರ ಹೆಸರು ಮತ್ತು ಅವರ ದೇಶವನ್ನು ಹೇಳುತ್ತಾನೆ.
*ಯಾವುದೇ ವಿಷಯದ ಬಗ್ಗೆ ಪ್ರಶ್ನೆ ಮಾಡುವ ಅಭ್ಯಾಸ ಬೆಳೆಸಿಕೊಂಡು ಕುತೂಹಲ ತೋರುತ್ತಾನೆ.

ನಾವೇನೂ ಹೇಳಿಕೊಡಲಿಲ್ಲ
ವ್ಯೋಮ್‌ ಮೊಬೈಲ್‌ನಲ್ಲಿ ನೋಡಿಯೇ ಕಲರ್, ಎಬಿಸಿಡಿ ಕಲಿತಿದ್ದಾನೆ. ನಾವೇನೂ ಹೇಳಿಕೊಡಲಿಲ್ಲ. ರಾಷ್ಟ್ರ ಧ್ವಜ,
ಕಂಪೆ‌ನಿಗಳನ್ನು ಗುರುತಿಸುವುದು ಸೇರಿದಂತೆ ಹಲವು ವಿಷಯದಲ್ಲಿ ಆಸಕ್ತಿ ಇದೆ. ಅವನಿಗೆ ಎಲ್ಲ ಮಕ್ಕಳಂತೆ ಕಾರ್ಟೂ ನ್‌ ಆಸಕ್ತಿ ಕಡಿಮೆ.
*ಶ್ವೇತಾ ಕುಂದರ್‌,
ವ್ಯೋಮ್‌ನ ತಾಯಿ

*ಸತೀಶ್‌ಚಂದ್ರ ಶೆಟ್ಟಿ ಶಿರ್ವ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.