Youtuber: ಡ್ರಗ್ಸ್ ಕುರಿತು ವಿಡಿಯೋ; ʼವಿಕ್ಕಿಪೀಡಿಯಾ’ ವಿಕಾಸ್ಗೆ ಪೊಲೀಸರಿಂದ ಎಚ್ಚರಿಕೆ
Team Udayavani, Jul 11, 2024, 6:04 PM IST
ಬೆಂಗಳೂರು: ಯೂಟ್ಯೂಬ್ ಹಾಗೂ ಫೇಸ್ ಬುಕ್ನಲ್ಲಿ ಕಂಟೆಂಟ್ ಕ್ರಿಯೇಟರ್ (Content creator) ಆಗಿ ಗುರುತಿಸಿಕೊಂಡಿರುವ ʼವಿಕ್ಕಿಪೀಡಿಯಾ’(Vickypedia) ವಿಕಾಸ್ ಅವರನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ವಿಕಾಸ್(Vikas) ತನ್ನ ವಿಡಿಯೋದಲ್ಲಿ ಯುವಜನರು ಹಾಗೂ ಮಾದಕ ವಸ್ತು ಬಗ್ಗೆ ಮಾತನಾಡಿದ್ದರು ಈ ಕಾರಣದಿಂದ ಬೈಯಪ್ಪನಹಳ್ಳಿ ಪೊಲೀಸರು ಅವರನ್ನು ಠಾಣೆಗೆ ಕರೆಸಿ ಕೆಲವೊಂದು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಹಾಸ್ಯಮಯ ವಿಡಿಯೋಗಳಿಂದ ಜನಪ್ರಿಯರಾಗಿರುವ ವಿಕಾಸ್, ʼನಾನು ನಂದಿನಿʼ ಎನ್ನುವ ಹಾಡಿನ ಮೂಲಕ ಇತ್ತೀಚೆಗೆ ಎಲ್ಲೆಡೆ ವೈರಲ್ ಆಗಿದ್ದರು.
ವಿಕಾಸ್ ಇತ್ತೀಚೆಗಿನ ಅವರ ವಿಡಿಯೋದಲ್ಲಿ “ಇಂದಿನ ಯುವಕರು ಎಂಜಾಯ್ಮೆಂಟ್ಗೆ ಅಂತ ಮದ್ಯಪಾನ ಮಾಡೋದು, ಸಿಗರೇಟ್ ಸೇದೋದು, ಹುಡುಗೀರ್ ಹಿಂದೆ ಹೋಗ್ತಾರೆ. ಆದರೆ, ನಾನು ಎಂಜಾಯ್ಮೆಂಟ್ ಮಾಡಲು ಡ್ರಗ್ಸ್ ತಗೋತೀನಿ” ಎಂದು ಹೇಳುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಇದು ಯುವಜನರನ್ನು ದಾರಿ ತಪ್ಪಿಸುತ್ತದೆ ಎನ್ನುವ ಕಾರಣದಿಂದ ಪೊಲೀಸರು ವಿಕಾಸ್ ಅವರನ್ನು ಠಾಣೆಗೆ ಕರೆದು ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ ವಿಡಿಯೋ ಮಾಡುವಾಗ ಅನುಸರಿಸಬೇಕಾದ ಕೆಲವೊಂದು ನಿಯಮದ ಬಗ್ಗೆ ಪೊಲೀಸರು ಪಾಠ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಕಾಸ್ ಹಾಗೂ ಅಮಿತ್ ಈ ವಿಡಿಯೋ ಮಾಡಿದ್ದರು. ಪೊಲೀಸರು ವಿಕಾಸ್ ರಿಂದ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK-11: ಕೊನೆಗೂ ಬಿಗ್ ಬಾಸ್ ಆ್ಯಂಕರ್ ಮುಖ ರಿವೀಲ್… ಶೋ ಆರಂಭಕ್ಕೆ ಡೇಟ್ ಫಿಕ್ಸ್
Bigg Boss 18: ಬಿಗ್ಬಾಸ್ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?
Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್ ಮೇಲೆ ಕೇಸ್
Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !
BBK-11: ಕಿಚ್ಚನ ಹೆಸರು ತೆಗೆದು ಹಾಕಿದ ವಾಹಿನಿ; ಬಿಗ್ ಬಾಸ್ಗೆ ಸುದೀಪ್ ಅನುಮಾನ?
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.