ಸಿದ್ದಾಪುರ: ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನ


Team Udayavani, Jul 11, 2024, 1:37 PM IST

ಸಿದ್ದಾಪುರ: ವಾರಾಹಿ ನೀರಿಗಾಗಿ ಗ್ರಾಮ ಮಟದಲ್ಲಿ ಜನಾಂದೋಲನ

ಸಿದ್ದಾಪುರ: ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಸಿದ್ಧತೆಯ ಬಗ್ಗೆ ಶಾಸಕ ಗುರುರಾಜ್‌ ಗಂಟಿಹೊಳೆ ನೇತೃತ್ವದಲ್ಲಿ ಸಿದ್ದಾಪುರ ಶ್ರೀರಂಗನಾಥ ಸಭಾಭವನದಲ್ಲಿ ಸಭೆ ನಡೆಯಿತು. ವಾರಾಹಿ ನೀರು ಬೈಂದೂರಿನ ಗ್ರಾಮಗಳ ಕೃಷಿ ಚಟುವಟಿಕೆಗೆ ಒದಗಿಸಲು ಆ.15ರ ಅನಂತರ ತೀವ್ರ ಹೋರಾಟದ ಬಗ್ಗೆ ಹೋರಾಟ ಸಮಿತಿ ರಚನೆ ತಯಾರಿಯ ಬಗ್ಗೆ ಚರ್ಚಿಸಲಾಯಿತು.

ವಾರಾಹಿ ನದಿ ನೀರು ಒದಗಿಸುವ ಯೋಜನೆ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದರೂ ಇಲ್ಲಿನ ಯಾವುದೇ ಗ್ರಾಮಕ್ಕೆ ಇದರ ನೀರು ಸಿಗುತ್ತಿಲ್ಲ. ಕಾಲುವೆಗಳ ಮೂಲಕ ಬೈಂದೂರು ಕ್ಷೇತ್ರದ ಹೆಚ್ಚಿನ ಗ್ರಾಮಗಳ ಕೃಷಿ ಚಟುವಟಿಕೆಗೆ ವಾರಾಹಿ ನೀರು ಒದಗಿಸುವಂತೆ ಮಾಡುವಲು ರಾಜ್ಯ ಸರಕಾರದ ವಿರುದ್ಧ ಜನಾಂದೋಲನ ರೂಪಿಸಲು ಬೈಂದೂರು ಕ್ಷೇತ್ರದ 4 ಜಿ.ಪಂ. ಕ್ಷೇತ್ರದ ಪ್ರಮುಖರ ಪೂರ್ವ ಸಿದ್ಧತ ಸಭೆ ನಡೆಯಿತು.

ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮಾತನಾಡಿ, ಯೋಜನೆ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದರೂ, ವಾರಾಹಿ ನೀರು ಬೈಂದೂರಿನ ಗ್ರಾಮಗಳ ರೈತರ ಕೃಷಿ ಚಟುವಟಿಕೆಗೆ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಜನಾಂದೋಲನದ ಮಾದರಿಯಲ್ಲಿ ಹೋರಾಟ ನಡೆಸುವ ಅಗತ್ಯವಿದೆ ಎಂದರು.

ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಗೂ ವೇಗ ಸಿಗಬೇಕು. ವಾರಾಹಿ ಬಲದಂಡೆ ಯೋಜನೆಯ ಅನುಷ್ಠಾನದ ಮೂಲಕ ಕಾಲುವೆಗಳಿಂದ ಬೈಂದೂರಿನ ಗ್ರಾಮಗಳಿಗೆ ವಾರಾಹಿ ನೀರು ಪೂರೈಕೆ ಆಗಬೇಕು ಎಂದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬೈಂದೂರು ಕ್ಷೇತ್ರದ ರೈತ ಮೋರ್ಚದ ಪ್ರಕಾಶ್ಚಂದ್ರ ಶೆಟ್ಟಿ, ಸಿದ್ದಾಪುರ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್‌ಕುಮಾರ ಶೆಟ್ಟಿ ಕೊಡ್ಲಾಡಿ, ಕವ್ರಾಡಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಎಚ್‌. ಸತೀಶ್‌ ಶೆಟ್ಟಿ ಹಡಾಳಿ, ವಂಡ್ಸೆ ಮಹಾ ಶಕ್ತಿ ಕೇಂದ್ರದ ಪ್ರಮುಖ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಿಲ್ಲಾ ಪಂಚಾಯತ್‌
ಮಾಜಿ ಸದಸ್ಯ ರೋಹಿತ್‌ ಶೆಟ್ಟಿ, ಯುವ ಮೋರ್ಚದ ಅಧ್ಯಕ್ಷ ಗಜೇಂದ್ರ, ಮುಖಂಡರಾದ ಬಾಲಚಂದ್ರ ಭಟ್‌ ಕಮಲಶಿಲೆ, ಸಮ್ರಾಟ ಶೆಟ್ಟಿ, ಸುರೇಶ ಹೆಬ್ಬಾರ್‌ ಆಜ್ರಿ, ವೇಣುಗೋಪಾಲ ಶೆಟ್ಟಿ ಆಜ್ರಿ, ರವಿ ಕುಲಾಲ ಶಂಕರನಾರಾಯಣ, ಅಶೋಕ ಕೆ.ಅಂಪಾರು, ರಾಜೇಶ ಹೆಬ್ಟಾರ್‌ ಉಳ್ಳೂರು, ಪ್ರಸಾದ ಶೆಟ್ಟಿ ಕಟ್ಟಿನಬೈಲು, ಪ್ರಾಣೇಶ್‌ ಯಡಿಯಾಳ, ರವಿ ಶೆಟ್ಟಿ ಹೊಸಂಗಡಿ, ಪ್ರಭಾಕರ ಕುಲಾಲ್‌, ಹಟ್ಟಿಯಂಗಡಿ ರಾಜೀವ್‌ ಶೆಟ್ಟಿ, ಹಕ್ಲಾಡಿ ಶುಭಾಶ್‌ ಶೆಟ್ಟಿ, ಹರ್ಕುರು ಮಂಜಯ್ಯ ಶೆಟ್ಟಿ, ಸಿದ್ದಾಪುರ ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣ ಪೂಜಾರಿ ಮತ್ತು ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಆ.15ರ ಬಳಿಕ ಬೃಹತ್‌ ಹೋರಾಟ
ಆರಂಭದಲ್ಲಿ ಪ್ರತೀ ಗ್ರಾಮದಲ್ಲೂ ಸಭೆ ನಡೆಸುವ ಮೂಲಕ ವಾರಾಹಿ ಯೋಜನೆಯಡಿ ಬೈಂದೂರಿಗೆ ಆಗಿರುವ ಅನ್ಯಾಯ, ನಿರ್ಲಕ್ಷ್ಯದ ಬಗ್ಗೆ ಮಾಹಿತಿ ನೀಡಲಾಗುವುದು. ಆ.15ರ ಅನಂತರ ರಾಜ್ಯ ಸರಕಾರದ ವಿರುದ್ಧ ಬೃಹತ್‌ ಹೋರಾಟ ಅಥವಾ ಜನಾಂದೋಲನ ನಡೆಸಲಾಗುವುದು. ಕಾಲುವೆಗಳ ಮೂಲಕ ಬೈಂದೂರಿನ ಗ್ರಾಮಗಳಿಗೆ ವಾರಾಹಿ ನೀರು ಒದಗಿಸುವುದು, ವಾರಾಹಿ ಬಲದಂಡೆ ಯೋಜನೆ ಮತ್ತು ಸಿದ್ದಾಪುರ ಏತ ನೀರಾವರಿ ಯೋಜನೆ ಶಕ್ತಿ ತುಂಬುವುದು ಇದರ ಉದ್ದೇಶವಾಗಿದೆ ಎಂದು
ಶಾಸಕರು ಹೇಳಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗೊಳ್ಳಿ: ಉಸಿರಾಟದ ತೊಂದರೆಯಿಂದ ಮೀನುಗಾರ ಸಾವು

Gangolli: ಉಸಿರಾಟದ ತೊಂದರೆಯಿಂದ ಮೀನುಗಾರ ಸಾವು

Kundapura: ಜಾಲತಾಣದಿಂದಾಗಿ ಲೈಂಗಿಕ ದೌರ್ಜನ್ಯ ಹೆಚ್ಚಳ

Kundapura: ಜಾಲತಾಣದಿಂದಾಗಿ ಲೈಂಗಿಕ ದೌರ್ಜನ್ಯ ಹೆಚ್ಚಳ

Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ

Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ

Accident-Logo

Kundapura: ಖಾಸಗಿ ಬಸ್‌ಗಳ ಢಿಕ್ಕಿ: 7 ಮಂದಿಗೆ ಗಾಯ

Kundapura: ಪೆಟ್ರೋಲ್‌ ಹಾಕಿಸಿ ಹಲ್ಲೆ: ದೂರು

Kundapura: ಪೆಟ್ರೋಲ್‌ ಹಾಕಿಸಿ ಹಲ್ಲೆ: ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.