Wimbledon: ಇಟಲಿಯ ಜಾಸ್ಮಿನ್‌ ಪೌಲಿನಿ ಫೈನಲಿಗೆ

ದೀರ್ಘ‌ ಅವಧಿಯ ಸೆಮಿಫೈನಲ್‌ ಪಂದ್ಯವಾಗಿ ದಾಖಲೆ... 2 ತಾಸು 51 ನಿಮಿಷ

Team Udayavani, Jul 12, 2024, 12:47 AM IST

1-aaaee

ಲಂಡನ್‌: ಶ್ರೇಯಾಂಕರಹಿತ ಆಟಗಾರ್ತಿ ಕ್ರೊವೇಶಿಯದ ಡೋನಾ ವೆಕಿಕ್‌ ಅವರನ್ನು ಮೂರು ಸೆಟ್‌ಗಳ ಕಠಿನ ಹೋರಾಟದಲ್ಲಿ ಸೋಲಿಸಿದ ಇಟಲಿಯ ಜಾಸ್ಮಿನ್‌ ಪೌಲಿನಿ ಅವರು ವಿಂಬಲ್ಡನ್‌ ಟೆನಿಸ್‌ ಕೂಟದ ಫೈನಲ್‌ ಹಂತಕ್ಕೇರಿದರು. ಶನಿವಾರ ನಡೆಯುವ ಫೈನಲ್‌ ಹೋರಾಟದಲ್ಲಿ ಅವರು ಎಲೆನಾ ರಿಬಕಿನಾ ಅಥವಾ ಬಾಬೊìರಾ ಕ್ರೆಜಿಕೋವಾ ಅವರ ಸವಾಲನ್ನು ಎದುರಿಸಲಿದ್ದಾರೆ.

ಮೊದಲ ಸೆಟ್‌ ಮತ್ತು ನಿರ್ಣಾಯಕ ಮೂರನೇ ಸೆಟ್‌ನಲ್ಲಿ ಎರಡು ಬಾರಿ ಹಿನ್ನಡೆ ಅನುಭವಿಸಿದರೂ ವಿಚಲಿತರಾಗದ ಪೌಲಿನಿ ಅವರು 2-6, 6-4, 7-6 (8) ಸೆಟ್‌ಗಳಿಂದ ಸೋಲಿಸಿ ಸಂಭ್ರಮಿಸಿದರು. ಈ ಪಂದ್ಯ ಎರಡು ತಾಸು 51 ನಿಮಿಷಗಳವರೆಗೆ ಸಾಗಿತ್ತು. ಇದು ವಿಂಬಲ್ಡನ್‌ ಕೂಟದ ಅತೀ ದೀರ್ಘ‌ವಾದ ವನಿತಾ ಸೆಮಿಫೈನಲ್‌ ಪಂದ್ಯವಾಗಿ ದಾಖಲೆ ಬರೆಯಿತು.

ಏಳನೇ ಶ್ರೇಯಾಂಕದ ಪೌಲಿನಿ ಮೊದಲ ಸೆಟ್‌ ಅನ್ನು ಬೇಗನೇ ಕಳೆದುಕೊಂಡಿದ್ದರು. ಆದರೆ ದ್ವಿತೀಯ ಸೆಟ್‌ ಗೆದ್ದು ತಿರುಗೇಟು ನೀಡಿದರು. ನಿರ್ಣಾಯಕ ಸೆಟ್‌ ಸಮಬಲಗೊಂಡ ಬಳಿಕ ಟೈಬ್ರೇಕರ್‌ನಲ್ಲಿ ಅವರು 10-8 ಅಂತರದಿಂದ ಪಂದ್ಯ ಗೆದ್ದರು.

2015 ಮತ್ತು 16ರಲ್ಲಿ ಸೆರೆನಾ ವಿಲಿಯಮ್ಸ್‌ ಬಳಿಕ 28ರ ಹರೆಯದ ಪೌಲಿನಿ ಸತತ ಎರಡನೇ ಗ್ರ್ಯಾನ್‌ ಸ್ಲಾಮ್‌ನಲ್ಲಿ ಫೈನಲಿಗೇರಿದ ಮೊದಲ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರ ರಾಗಿದ್ದಾರೆ. ಅವರು ಕಳೆದ ತಿಂಗಳು ನಡೆದ ಫ್ರೆಂಚ್‌ ಓಪನ್‌ನ ಫೈನಲ್‌ನಲ್ಲಿ ಇಗಾ ಸ್ವಿಯಾಟೆಕ್‌ಗೆ ಶರಣಾಗಿ ರನ್ನರ್‌ ಅಪ್‌ ಸ್ಥಾನ ಪಡೆದಿದ್ದರು.

ಮುಸೆಟ್ಟಿ ಸೆಮಿಗೆ
ಐದು ಸೆಟ್‌ಗಳ ಮ್ಯಾರಥಾನ್‌ ಹೋರಾಟದಲ್ಲಿ ಅಮೆರಿಕದ ಟಯ್ಲರ್‌ ಫ್ರಿಟ್ಜ್ ಅವರನ್ನು ಕೆಡಹಿದ ಇಟಲಿಯ ಲೊರೆಂಜೊ ಮುಸೆಟ್ಟಿ ಅವರು ಇದೇ ಮೊದಲ ಬಾರಿ ಗ್ರ್ಯಾನ್‌ ಸ್ಲಾಮ್‌ ಕೂಟದ ಸೆಮಿಫೈನಲ್‌ ಹಂತಕ್ಕೇರಿದ ಸಂಭ್ರಮ ಆಚರಿಸಿಕೊಂಡರು. ಶುಕ್ರ ವಾರ ನಡೆಯುವ ಸೆಮಿಫೈನಲ್‌ ಹೋರಾಟದಲ್ಲಿ ಅವರು ಇನ್ನೊಂದು ಕಠಿನ ಹೋರಾಟಕ್ಕೆ ಸಿದ್ಧರಾಗಬೇಕಾಗಿದೆ. ಅಲ್ಲಿ ಅವರು ಏಳು ಬಾರಿ ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ ಆಗಿರುವ ನೋವಾಕ್‌ ಜೊಕೋವಿಕ್‌ ಅವರ ಸವಾಲನ್ನು ಎದುರಿಸಬೇಕಾಗಿದೆ.

ತನ್ನ ದೇಶದವರೇ ಆದ ವಿಶ್ವದ ನಂಬರ್‌ ವನ್‌ ಜಾನ್ನಿಕ್‌ ಸಿನ್ನರ್‌ ಈಗಾ ಗಲೇ ಪತನಗೊಂಡಿದ್ದರಿಂದ ಮುಸೆಟ್ಟಿ ಇಲ್ಲಿ ಚಾಂಪಿಯನ್‌ ಎನಿಸಿಕೊ ಳ್ಳಲು ಶಕ್ತಮೀರಿ ಪ್ರಯತ್ನಿಸುವ ಸಾಧ್ಯತೆ ಯನ್ನು ಮುಂದಿನ ಪಂದ್ಯದಲ್ಲಿ ಜೊಕೋ ಅವರನ್ನು ಕೆಡಹಿದರೆ ಅವರು ಚಾಂಪಿ ಯನ್‌ ಪಟ್ಟಕ್ಕೇರುವ ಸಾಧ್ಯತೆಯಿದೆ.

ಸುಮಾರು ಮೂರುವರೆ ತಾಸುಗಳ ಸುದೀರ್ಘ‌ ಹೋರಾಟ ನಡೆಸಿದ ಮುಸೆಟ್ಟಿ ಅವರು ಅಂತಿಮವಾಗಿ ಫ್ರಿಟ್ಜ್ ಅವರನ್ನು 3-6, 7-6 (5), 6-2, 3-6, 6-1 ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ ತಲುಪಿದರು. ಜೊಕೋವಿಕ್‌ ಅವರು ನನಗಿಂತ ಚೆನ್ನಾಗಿ ಸೆಂಟರ್‌ ಕೋರ್ಟ್‌ನ ಮೈದಾನ, ಅಂಗಣವನ್ನು ಚೆನ್ನಾಗಿ ತಿಳಿದಿದ್ದಾರೆ. ಅವರೊಬ್ಬ ಎಲ್ಲಿಗೆ ಹೋದರೂ ಲೆಜೆಂಡ್‌ ಆಗಿದ್ದಾರೆ ಎಂದು ಮುಸೆಟ್ಟಿ ಹೇಳಿದ್ದಾರೆ. ಮುಸೆಟ್ಟಿ ಅವರು ಶುಕ್ರವಾರ ಸೆಂಟರ್‌ ಕೋರ್ಟ್‌ ನಲ್ಲಿ ಮೊದಲ ಬಾರಿ ಆಡಲಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.