Budget; ಆರ್ಥಿಕ ತಜ್ಞರ ಜತೆ ಮೋದಿ ಸಮಾಲೋಚನೆ
Team Udayavani, Jul 12, 2024, 1:22 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪ್ರಮುಖ ಆರ್ಥಿಕ ತಜ್ಞರ ಜತೆ ಸಮಾಲೋಚನೆ ನಡೆಸಿ, ಬಜೆಟ್ ಸಂಬಂಧಿಸಿದಂತೆ ಸಲಹೆಗಳನ್ನು ಪಡೆದುಕೊಂಡರು. ಜು.23ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.
ಆರ್ಥಿಕ ತಜ್ಞರು ಮಾತ್ರವಲ್ಲದೇ, ವಿವಿಧ ವಲಯದ ತಜ್ಞರು, ನೀತಿ ಆಯೋಗದ ಉಪಾಧ್ಯಕ್ಷ ಹಾಗೂ ಸದಸ್ಯರೂ ಈ ಸಭೆಯಲ್ಲಿ ಪಾಲ್ಗೊಂಡರು, ತಮ್ಮ ಸಲಹೆಗಳನ್ನು ನೀಡಿದರು ಎನ್ನಲಾಗಿದೆ. ಉದ್ಯೋಗ ಸೃಷ್ಟಿ ಕೂಡ ಈ ಸಭೆಯ ಪ್ರಮುಖ ಅಜೆಂಡಾ ಆಗಿತ್ತು ಎಂದು ಮೂಲಗಳು ತಿಳಿಸಿವೆ. ಜು.23ರಂದು ಮಂಡನೆಯಾಗಲಿರುವ ಬಜೆಟ್, ಮೋದಿ 3.0 ಸರಕಾರದ ಮೊದಲ ಬಜೆಟ್ ಆಗಿದ್ದು, 2047ರ ವಿಕಸಿತ ಭಾರತದ ಗುರಿ ಸಾಧನೆಗೆ ಪ್ರಮುಖವಾಗಿರಲಿದೆ ಎನ್ನಲಾಗಿದೆ. ಈ ಸಭೆಗೂ ಮೊದಲು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ವಿವಿಧ ವಲಯಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಸಾಮಾನ್ಯರಿಗೆ ಹೊರೆಯಾಗಿರುವ ತೆರಿಗೆ ವಿನಾಯಿತಿ ನೀಡುವುದು ಮತ್ತು ಹಣದುಬ್ಬರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಸಭೆಯಲ್ಲಿ ಆರ್ಥಿಕ ತಜ್ಞರಾದ ಸುರ್ಜಿತ್ ಬಲ್ಲಾಳ್, ಅಶೋಕ್ ಗುಲಾಟಿ, ಹಿರಿಯ ಬ್ಯಾಂಕರ್ ಕೆ.ವಿ.ಕಾಮತ್ ಸಹಿತ ಇತರರಿದ್ದರು. ಲೋಕಸಭೆ ಚುನಾವಣೆ ಮುನ್ನ ಫೆಬ್ರವರಿಯಲ್ಲಿ ವಿತ್ತ ಸಚಿವೆ ಮಧ್ಯಾಂತರ ಬಜೆಟ್ ಮಂಡಿಸಿದ್ದರು.
ರೋಬೋಟ್ ತೆರಿಗೆ ವಿಧಿಸಲು ಮನವಿ
ಕೃತಕ ಬುದ್ಧಿಮತ್ತೆ(ಎಐ) ಪ್ರೇರಿತ ಉದ್ಯೋಗ ನಷ್ಟದ ಮೇಲೆ ರೋಬೋಟ್ ತೆರಿಗೆ ವಿಧಿಸಬೇಕೆಂದು ಆರ್ಎಸ್ಎಸ್ ಸಂಬಂಧಿ ಸಂಸ್ಥೆ ಸ್ವದೇಶಿ ಜಾಗರಣ ಮಂಚ್ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿನಂತಿ ಮಾಡಿದೆ. ಈ ರೋಬೋಟ್ ತೆರಿಗೆಯನ್ನು ಉದ್ಯೋಗವನ್ನು ಕಳೆದುಕೊಳ್ಳುವ ಕಾರ್ಮಿಕರ ಉನ್ನತಿಗೆ ಬಳಸಬಹುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.