High Court ಚೌಟರ ಅರಮನೆ ಸಮೀಪ ಮಾರುಕಟ್ಟೆ ವಿವಾದ: ಜು. 24ಕ್ಕೆ ಆದೇಶ


Team Udayavani, Jul 12, 2024, 1:22 AM IST

High Court ಚೌಟರ ಅರಮನೆ ಸಮೀಪ ಮಾರುಕಟ್ಟೆ ವಿವಾದ: ಜು. 24ಕ್ಕೆ ಆದೇಶ

ಬೆಂಗಳೂರು: ಸಂರಕ್ಷಿತ ಸ್ಮಾರಕ ವ್ಯಾಪ್ತಿಗೆ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಪ್ರಾಚೀನ ಚೌಟರ ಅರಮನೆ ಸಮೀಪ ಹಳೆ ಮಾರುಕಟ್ಟೆ ಕಟ್ಟಡ ನೆಲಸಮಗೊಳಿಸಿ ಬಹುಮಹಡಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಜು. 24ರಂದು ಆದೇಶಗಳನ್ನು ಹೊರಡಿಸುವುದಾಗಿ ಹೈಕೋರ್ಟ್‌ ಹೇಳಿದೆ.

ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುತ್ತಿರುವ ಮೂಡುಬಿದಿರೆ ಪುರಸಭೆಯ ಕ್ರಮ ಪ್ರಶ್ನಿಸಿ ಜೇಸನ್‌ ಮಾರ್ಷಲ್‌ ನವಾರೇಸ್‌ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರ (ಎನ್‌ಎಂಎ) ಕ್ರಮ ಪ್ರಶ್ನಿಸಿ ಮೂಡುಬಿದಿರೆ ಪುರಸಭೆ ಸಲ್ಲಿಸಿರುವ ಅರ್ಜಿಗಳು ಮುಖ್ಯ ನ್ಯಾ| ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದ್ದವು.

ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಕಾನೂನಿನಲ್ಲಿ ಇದ್ದರೂ ಪುರಾತನ ಚೌಟರ ಅರಮನೆಯ 190 ಮೀ. ವ್ಯಾಪ್ತಿಯಲ್ಲಿರುವ ಹಳೆಯ ಮಾರುಕಟ್ಟೆ ಕಟ್ಟಡವನ್ನು ನೆಲಸಮ ಮಾಡಿ ಸ್ಥಳೀಯ ಪುರಸಭೆ ಬಹುಮಹಡಿ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುತ್ತಿದೆ. ನೂರಾರು ಕೋಟಿ ಬೆಲೆ ಬಾಳುವ ಸಾರ್ವಜನಿಕ ಆಸ್ತಿಯನ್ನು ಪುರಸಭೆ ತನ್ನಿಚ್ಛೆಯಂತೆ ಬಳಸಿಕೊಳ್ಳುತ್ತಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಆರೋಪಿಸಿದರು.
ಸಂರಕ್ಷಿತ ಸ್ಮಾರಕ ಪ್ರದೇಶದ 100 ಮೀಟರ್‌ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧವಿದೆ. ಆದರೆ ಮಾರುಕಟ್ಟೆ ಸ್ಥಳವು ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಗೆ ಬರುವುದಿಲ್ಲ. ಮೇಲಾಗಿ ಕಟ್ಟಡ ನಿರ್ಮಾಣದಿಂದ ಸಂರಕ್ಷಿತ ಸ್ಮಾರಕಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ ಕೇಂದ್ರ ಸರಕಾರ ಸ್ವಾಮ್ಯದ ಇಂಡಿಯನ್‌ ನ್ಯಾಶನಲ್‌ ಟ್ರಸ್ಟ್‌ ಫಾರ್‌ ಆರ್ಟ್‌ ಆ್ಯಂಡ್‌ ಕಲ್ಚರಲ್‌ ಹೆರಿಟೇಜ್‌’ ವರದಿ ನೀಡಿದೆ.

ಈ ವರದಿ ಪರಿಶೀಲಿಸಿ ಎಂದು ನ್ಯಾಯಾಲಯದ ಆದೇಶವವಿದ್ದರೂ ಭಾರತೀಯ ಪುರಾ ತತ್ವ ಸರ್ವೇಕ್ಷಣಾಲಯ ಅದನ್ನು ಪರಿಗಣಿಸಿಲ್ಲ ಎಂದು ಮೂಡಬಿದಿರೆ ಪುರಸಭೆ ಪರ ವಕೀಲರು ವಾದಿಸಿದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಅನುಮತಿ ಇಲ್ಲದೆ ಗುತ್ತಿಗೆದಾರರು ನಿರ್ಮಾಣ ಕಾಮಗಾರಿ ಆರಂಭಿಸಿದ್ದಾದರೂ ಹೇಗೆ, ನ್ಯಾಯಾಲಯ ಆದೇಶ ನೀಡಿದ್ದರೂ ಸುಮ್ಮನೆ ಇದ್ದಿದ್ದೇಕೆ, ನೀವೇನು ನ್ಯಾಯಾಲಯಕ್ಕೂ ಮೀರಿದವರಾ? ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ಪರ ವಕೀಲರನ್ನು ಮತ್ತು ಗುತ್ತಿಗೆದಾರರ ಪರ ವಕೀಲರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.