Aparna Vastarey; ಮುಂದಿನ ನಿಲ್ದಾಣ…. ಇಹಲೋಕ ಪಯಣ ಮುಗಿಸಿದ ಕನ್ನಡದ ಕಂಠ!


Team Udayavani, Jul 12, 2024, 8:50 AM IST

aparna

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ, ನಮ್ಮ ಮೆಟ್ರೋ ಧ್ವನಿಯಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ ವಸ್ತಾರೆ (Aparna Vastarey) (58) ಅವರು ಗುರುವಾರ (ಜುಲೈ 11) ರಾತ್ರಿ ಅಸುನೀಗಿದ್ದಾರೆ. ಕಳೆದೆರಡು ವರ್ಷಗಳೊಂದಿಗೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಇಹಲೋಕದ ಯಾತ್ರೆ ಮುಗಿಸಿದ್ದಾರೆ.

1984ರಲ್ಲಿ ತೆರೆಕಂಡ ಪುಟ್ಟಣ ಕಣಗಾಲ್ ಅವರ ನಿರ್ದೇಶನದ ಮಸಣದ ಹೂವು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಅಪರ್ಣಾ ಬಳಿಕ ಬಹುಮುಖಿ ಪ್ರತಿಭೆಯ ಮೂಲಕ ಕನ್ನಡಿಗರ ಮನೆಮಾತಾದವರು.

ಅಂಬರೀಶ್‌, ಜಯಂತಿ ಮುಖ್ಯ ಭೂಮಿಕೆಯಲ್ಲಿದ್ದ ಈ ಚಿತ್ರದಲ್ಲಿ ಅಪರ್ಣಾ ಅವರಿಗೂ ಪ್ರಮುಖ ಪಾತ್ರವಿತ್ತು. ಚಿತ್ರದಲ್ಲಿ ಪಾರ್ವತಿ ಪಾತ್ರದಲ್ಲಿ ಅವರು ಮಿಂಚಿದ್ದರು. ಪುಟ್ಟಣ್ಣ ಅವರ ಗರಡಿಯಲ್ಲಿ ಬೆಳೆದ ಅಪರ್ಣಾ ಆ ನಂತರ ಕನ್ನಡದ ಬಹುತೇಕ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರು. ಸಂಗ್ರಾಮ, ಒಂಟಿ ಸಲಗ, ಇನ್ಸ್‌ಪೆಕ್ಟರ್‌ ವಿಕ್ರಮ್, ಒಲವಿನ ಆಸರೆ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ರಂಗದಲ್ಲಿ ಬೇಡಿಕೆ ಇದ್ದರೂ ನಿರೂಪಣೆಯತ್ತ ಅವರು ಹೆಚ್ಚು ಒಲವು ತೋರಿದ್ದರು.

ವಿಮಾನ ನಿಲ್ದಾಣ, ಮೆಟ್ರೋದಲ್ಲಿ ಧ್ವನಿ!

ಪ್ರಮುಖವಾಗಿ ನಮ್ಮ ಮೆಟ್ರೋದಲ್ಲಿ ನಿಲುಗಡೆ ಮತ್ತು ಇತರೆ ಮಾಹಿತಿ ನೀಡುವ ಧ್ವನಿಯೂ ಇವರದ್ದೇ ಆಗಿದೆ. ಇದರ ಜತೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಇವರ ಧ್ವನಿಯನ್ನು ಕೇಳಬಹುದು.

ರಿಯಾಲಿಟಿ ಶೋ ಸೇರಿ ಧಾರಾವಾಹಿಯಲ್ಲಿ ನಟನೆ

ಸಿನಿಮಾ, ನಿರೂಪಣೆಯ ಜತೆಗೆ ಕಿರುತೆರೆಯಲ್ಲೂ ಅಪರ್ಣಾ ತೊಡಗಿಸಿಕೊಂಡಿದ್ದರು. ಮೂಡಲ ಮನೆ, ಮುಕ್ತ ಸೇರಿದಂತೆ ಅನೇಕ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಇದರ ಜತೆಗೆ 2013ರಲ್ಲಿ ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲೂ ಸ್ಪರ್ಧಿಯಾಗಿದ್ದರು.

ಮಜಾ ಟಾಕೀಸ್‌ನ “ವರೂ’ ಎಂದೇ ಖ್ಯಾತಿ

2015 ಮತ್ತು 2021ರ ನಡುವೆ ನಟ ಸೃಜನ್‌ ಲೊಕೇಶ್‌ ಅವರು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನಡೆಸಿಕೊಡುತ್ತಿದ್ದ “ಮಜಾ ಟಾಕೀಸ್‌’ನಲ್ಲಿ ವರಲಕ್ಷ್ಮೀ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಸಿನಿಮಾ, ಧಾರಾವಾಹಿಯಿಂದ ಸಾಕಷ್ಟು ಅವಕಾಶಗಳು ಅಪರ್ಣಾ ಅವರಿಗೆ ಬರುತ್ತಿದ್ದರೂ ತಮ್ಮ ಆರೋಗ್ಯದ ಕಾರಣದಿಂದ ದೂರವೇ ಉಳಿದಿದ್ದರು.

ಸತತ 8 ಗಂಟೆ ನಿರೂಪಣೆ

1990ರ ದಶಕದಲ್ಲಿ ದೂರದರ್ಶನದಲ್ಲಿ ವಿವಿಧ ಕಾರ್ಯಕ್ರಮಗಳ ನಿರೂಪಕಿಯಾಗಿ ಅಪರ್ಣಾ ಕಾರ್ಯ ನಿರ್ವಹಣೆ ಮಾಡಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮವೊಂದನ್ನು ಸತತ 8 ಗಂಟೆ ನಿರೂಪಣೆ ಮಾಡಿ ಅಪರ್ಣಾ ದಾಖಲೆ ಬರೆದಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.