Uppinangady: ಲಾಟರಿ ವದಂತಿ: ಹೈರಾಣಾದ ಟೈಲರ್!
ಸಹಾಯ ಯಾಚನೆಯ ಕರೆಗೆ ಟೈಲರ್ ಹೈರಾಣಾ
Team Udayavani, Jul 12, 2024, 12:27 PM IST
ಉಪ್ಪಿನಂಗಡಿ: ಕೇರಳ ರಾಜ್ಯ ಲಾಟರಿಯ ಒಂದು ಕೋಟಿ ರೂಪಾಯಿ ಬಹುಮಾನವು ಇಲ್ಲಿನ ಟೈಲರ್ ಒಬ್ಬರಿಗೆ ಒಲಿದಿದೆ ಎಂಬ ಸುದ್ದಿ ಹರಡಿ ಅಭಿನಂದನೆಯ ಕರೆ, ಸಹಾಯ ಯಾಚನೆಯ ಕರೆಗೆ ಟೈಲರ್ ಹೈರಾಣಾಗುವಂತಾಗಿದೆ.
ಇಲ್ಲಿನ ರಥಬೀದಿಯಲ್ಲಿರುವ ಗಣಪತಿ ಮಠದ ಬಳಿಯಲ್ಲಿ ಟೈಲರ್ ವೃತ್ತಿ ಮಾಡಿಕೊಂಡಿರುವ ಕೂಸಪ್ಪ ಅವರಿಗೆ ಒಂದು ಕೋಟಿ ರೂಪಾಯಿ ಒಲಿದಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು.
ಮಾತ್ರವಲ್ಲದೆ ಅದರಲ್ಲಿ 30 ಲಕ್ಷ ರೂಪಾಯಿ ತೆರಿಗೆ ನೆಲೆಯಲ್ಲಿ ಕಡಿತಗೊಂಡು 70 ಲಕ್ಷ ರೂಪಾಯಿ ಅವರ ಖಾತೆಗೆ ಜಮೆಯಾಗಿದೆ ಎಂಬ ವಿವರ ಸೇರಿಸಿ ಬಾಯಿಯಿಂದ ಬಾಯಿಗೆ ಸಾಗಿತು.
ಈ ಬಗ್ಗೆ ಅವರನ್ನು ಮಾಧ್ಯಮದವರು ಭೇಟಿಯಾದಾಗ ಅವರಿಗೆ ಲಾಟರಿ ಬಹುಮಾನ ಬಂದಿಲ್ಲ ಎಂಬುದು ತಿಳಿಯಿತು. ತನಗೆ
ಯಾವ ಲಾಟರಿಯೂ ಲಭಿಸಿಲ್ಲ. ಇಂಥ ಸುದ್ದಿ ಹೇಗೆ ಸೃಷ್ಟಿಯಾಯಿತು ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆದರೆ ನನಗೆ ದೂರವಾಣಿ ಕರೆಗಳಿಗೆ ಉತ್ತರಿಸಿ ಸಾಕುಸಾಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.