ಕೈಯಲ್ಲಿ ಪಿಸ್ತೂಲ್ ಹಿಡಿದು ಪೂಜಾ ಖೇಡ್ಕರ್ ತಾಯಿ ರೈತರನ್ನು ಬೆದರಿಸುವ ವಿಡಿಯೋ ವೈರಲ್


Team Udayavani, Jul 12, 2024, 1:57 PM IST

ಕೈಯಲ್ಲಿ ಪಿಸ್ತೂಲ್ ಹಿಡಿದು ಪೂಜಾ ಖೇಡ್ಕರ್ ತಾಯಿ ರೈತರನ್ನು ಬೆದರಿಸುವ ವಿಡಿಯೋ ವೈರಲ್

ಮಹಾರಾಷ್ಟ್ರ: ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್‌ ಅವರ ಪ್ರಕರಣ ದೇಶದೆಲ್ಲೆಡೆ ತೀವ್ರ ಸಂಚಲನ ಸೃಷ್ಟಿಸಿದ್ದು, ಪೂಜಾ ಖೇಡ್ಕರ್‌ ವಿರುದ್ಧ ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಿಕೊಂಡ ಗಂಭೀರ ಆರೋಪ ಕೂಡ ಕೇಳಿ ಬಂದಿದೆ. ಇದರ ನಡುವೆ ಪೂಜಾ ತಾಯಿ ಕೈಯಲ್ಲಿ ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುತ್ತಿರುವ ಹಳೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಸದ್ಯ ವೈರಲ್ ಆಗಿರುವ ವಿಡಿಯೋ 2023ರಲ್ಲಿ ಚಿತ್ರೀಕರಿಸಲಾಗಿರುವುದು ಎಂದು ಹೇಳಲಾಗುತ್ತಿದ್ದು ಪೂಜಾ ಸುದ್ದಿ ಮುನ್ನೆಲೆಗೆ ಬರುತ್ತಿದ್ದಂತೆ ರೈತರಿಗೆ ಬೆದರಿಕೆ ಹಾಕುತ್ತಿರುವ ತಾಯಿಯ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಹಾರಾಷ್ಟ್ರದಾದ್ಯಂತ ಆಸ್ತಿ ಹೊಂದಿರುವ ಖೇಡ್ಕರ್ ಕುಟುಂಬ ಪುಣೆಯ ಮುಲ್ಶಿ ತಹಸಿಲ್‌ನಲ್ಲಿ 25 ಎಕರೆ ಭೂಮಿಯನ್ನು ಖರೀದಿಸಿತ್ತು. ಇದೀಗ ಈ ಜಾಗದ ಅಕ್ಕಪಕ್ಕದಲ್ಲಿ ರೈತರ ಜಮೀನುಗಳು ಇದ್ದು ಇದೀಗ ಖೇಡ್ಕರ್ ಕುಟುಂಬ ಆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಇದರ ಕುರಿತು ರೈತರು ಆಕ್ಷೇಪ ವ್ಯಕ್ತಪಡಿಸಿದಾಗ ಖೇಡ್ಕರ್ ಅವರ ತಾಯಿ ಮನೋರಮಾ, ಬೌನ್ಸರ್ ಸಮೇತ ಸ್ಥಳಕ್ಕೆ ಆಗಮಿಸಿ ಪಿಸ್ತೂಲ್ ತೋರಿಸಿ ರೈತರಿಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ವೈರಲ್ ಆಗಿರುವ ವಿಡಿಯೋದಲ್ಲಿ ಮನೋರಮಾ ಜಮೀನು ತನ್ನ ಹೆಸರಿನಲ್ಲಿದೆ ಎಂದು ರೈತರ ಮರಾಠಿ ಭಾಷೆಯಲ್ಲಿ ಹೇಳುತ್ತಿರುವುದು ಕಾಣಬಹುದು. ಅಲ್ಲದೆ ಈ ಕುರಿತು ರೈತರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ಅವರು ನೀಡಿದ ದೂರನ್ನು ಸ್ವೀಕರಿಸದೆ ಹಿಂದೆ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ ಪುಣೆಯ ಸಹಾಯಕ ಜಿಲ್ಲಾಧಿಕಾರಿಯಾಗಿದ್ದ ಪೂಜಾ ಖೇಡ್ಕರ್ ತಮ್ಮ ಖಾಸಗಿ ಕಾರಿನಲ್ಲಿ ಮೇಲೆ ಐಎಎಸ್​ ಅಧಿಕಾರಿಗಳಿಗೆ ಸಿಗುವ ಕೆಂಪು ನೀಲಿ ಬಣ್ಣದ ದೀಪವನ್ನು ಅಳವಡಿಸಿಕೊಂಡಿದ್ದರು. ಜೊತೆಗೆ ಕಾರಿನ ನಂಬರ್ ಪ್ಲೇಟ್​ ಮೇಲೆ ‘ಮಹಾರಾಷ್ಟ್ರ ಸರ್ಕಾರ’ ಎಂದು ಬರೆಸಿಕೊಂಡಿದ್ದರು. ಇದ್ಯಾವುದೂ ಪ್ರೊಬೇಷನರಿ ಅವಧಿಯಲ್ಲಿರುವ ಅಧಿಕಾರಿಗಳಿಗೆ ಸಿಗುವ ಸೌಲಭ್ಯಗಳಲ್ಲ. ಆದರೂ ಪೂಜಾ ಈ ಎಲ್ಲ ನಿಯಮಗಳನ್ನು ಉಲ್ಲಂಘಿಸಿದ್ದರು.

ಪೂಜಾ ಖೇಡ್ಕರ್ ಭಾರತೀಯ ಆಡಳಿತ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಪ್ರೊಬೇಷನರಿ ಅವಧಿಯಲ್ಲಿರುವ ಐಎಎಸ್​ ಅಧಿಕಾರಿ ಪೂಜಾ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸದ್ಯ ನಿಯೋಜಿಸಲಾಗಿರುವ ಇಲಾಖೆಯಿಂದ ಮತ್ತೊಂದು ಇಲಾಖೆಗೆ ವರ್ಗ ಮಾಡಲಾಗಿದೆ. ಇದರೊಂದಿಗೆ ಪೂಜಾ ಪೂರ್ಣಾವಧಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಎತ್ತಂಗಡಿ ಶಿಕ್ಷೆ ಅನುಭವಿಸಿದಂತಾಗಿದೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.