![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 12, 2024, 5:59 PM IST
ಬಳ್ಳಾರಿ : ನಗರದ ರಾಯಲ್ ಸರ್ಕಲ್ ನಲ್ಲಿರುವ ಮಹಾನಗರ ಪಾಲಿಕೆ ಮುಂಭಾಗದಲ್ಲೆ ಕಾಂಗ್ರೆಸ್ ಕಾರ್ಪೊರೇಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಕಾಂಗ್ರೆಸ್ ಮಹಿಳಾ ಕಾರ್ಪೊರೇಟರ್ ಮೈದುನ ಮತ್ತು ಬೆಂಬಲಿಗರು 38 ನೇ ವಾರ್ಡ್ ಪಾಲಿಕೆ ಕಾಂಗ್ರೆಸ್ ಕಾರ್ಪೊರೇಟರ್ ಕುಬೇರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮೇಯರ್ ಚೇಂಬರ್ನಲ್ಲಿ ಕುಬೇರ ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ರವಿ 39 ನೇ ವಾರ್ಡ್ ಪಾಲಿಕೆ ಕಾಂಗ್ರೆಸ್ ಸದಸ್ಯೆ ಶಶಿಕಲಾರ ಮೈದುನ ಎಂದು ತಿಳಿದು ಬಂದಿದೆ.
ಗಲಾಟೆ ಮಾಡಿ ಪಾಲಿಕೆ ಕಚೇರಿಯಿಂದ ಹೊರಬರುತ್ತಿದ್ದಂತೆ ಕುಬೇರ ಮತ್ತು ಸ್ನೇಹಿತ ನಾಗರಾಜ ಮೇಲೆ ರವಿ ಮತ್ತು ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಹಲ್ಲೆ ಬಳಿಕ ವಿಮ್ಸ್ನ ಟ್ರಾಮಾ ಕೇರ್ ಗೆ ಕುಬೇರ ದಾಖಲಾಗಿದ್ದು, ಅಲ್ಲಿಯೂ ಕುಬೇರ ಮತ್ತವರ ಸ್ನೇಹಿತರಾದ ನಾಗರಾಜು, ವೀರೇಂದ್ರ ಮೇಲೆ ಗುಂಪು ಕಟ್ಟಿಕೊಂಡು ಬಂದು ಮತ್ತೆ ರವಿ ಆ್ಯಂಡ್ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಹಲ್ಲೆ ಹಿಂದೆ ಹಳೆ ದ್ವೇಷದ ಶಂಕೆ ಇದ್ದು ,ಗಾಂಧಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.