BJP ಮೇಲುಗೈ; ಮತ್ತೊಮ್ಮೆ ಧಾರವಾಡ ಕೆಎಂಎಫ್ಗೆ ಶಂಕರ ಮುಗದ ಅಧ್ಯಕ್ಷ
ಉಪಾಧ್ಯಕ್ಷರಾಗಿ ಶಿರಸಿಯ ಸುರೇಶಚಂದ್ರ ಹೆಗಡೆ... ವಿನಯ್ ಕುಲಕರ್ಣಿ ಪತ್ನಿಗೆ ಸೋಲು
Team Udayavani, Jul 12, 2024, 6:52 PM IST
ಧಾರವಾಡ : ಕೈ ಮತ್ತು ಕಮಲ ಪಡೆಯ ಜಿದ್ದಾಜಿದ್ದಿನ ರಾಜಕಾರಣದ ತಾಣವಾಗಿದ್ದ ಧಾರವಾಡ ಕೆಎಂಎಫ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮತ್ತೊಮ್ಮೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಂಕರ ಮುಗದ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಿರಸಿಯ ಸುರೇಶಚಂದ್ರ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಇಬ್ಬರು ಮುಂದಿನ ಐದು ವರ್ಷಗಳ ಅವಧಿಗೆ ಧಾರವಾಡ ಕೆಎಂಎಫ್ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ.
ಬಿಜೆಪಿ ಪಡೆಗೆ ತೀವ್ರ ರಾಜಕೀಯ ಸ್ಪರ್ಧೆ ಒಡ್ಡಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರು 6ಮತಗಳನ್ನು ಪಡೆದುಕೊಳ್ಳುವ ಮೂಲಕ ಚುನಾವಣೆಯಲ್ಲಿ ಪರಾಭವಗೊಂಡರು.
ಮಧ್ಯಾಹ್ನ ನಾಮಪತ್ರ ಸಲ್ಲಿಕೆಗೂ ಮುಂಚೆಯೇ ಬಿಜೆಪಿಯ ಎಲ್ಲಾ ಎಂಟು ಜನ ಸದಸ್ಯರು ಕೂಡ ಒಟ್ಟಾಗಿಯೇ ಬಂದಿದ್ದು, ಚುನಾವಣೆ ಮುಗಿದು ಜಯ ಸಾಧಿಸುವ ವರೆಗೂ ಒಗ್ಗಟ್ಟಿನಿಂದಲೇ ಇದ್ದಿದ್ದು ಬಿಜೆಪಿ ಬೆಂಬಲಿತರ ಗೆಲುವಿಗೆ ಕಾರಣವಾಯಿತು. ಕಾಂಗ್ರೆಸ್ ಬೆಂಬಲಿತರು ಕೂಡ ಒಟ್ಟಾಗಿಯೇ ಬಂದು ಶಿವಲೀಲಾ ಕುಲಕರ್ಣಿ ಅವರ ನಾಮಪತ್ರ ಸಲ್ಲಿಸಿದರು.ಅಂತಿಮವಾಗಿ ಚುನಾವಣೆಯಲ್ಲಿ ನಿರೀಕ್ಷೆ ಯಂತೆ ಬಿಜೆಪಿ ಬೆಂಬಲಿತರು ಎಂಟು ಮತಗಳನ್ನು ಪಡೆದು ಆಯ್ಕೆ ಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.