Mudhol: ವೇಶ್ಯಾವಾಟಿಕೆ ದಂಧೆ; 10 ಯುವತಿಯರ ರಕ್ಷಣೆ
ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ ಖಾಕಿ ಪಡೆ
Team Udayavani, Jul 12, 2024, 7:50 PM IST
ಮುಧೋಳ : ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಲಾಡ್ಜ್ ಗಳ ಮೇಲೆ ದಾಳಿ ನಡೆಸಿದ ಪೊಲೀಸರು 10 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ನಗರದ ಶಿವದುರ್ಗಾ, ಸುರಭಿ, ಓಂಕಾರ ಹಾಗೂ ಸಪ್ತಗಿರಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮುಧೋಳ ನಗರ ಠಾಣೆಯಲ್ಲಿ 11ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ದಾಳಿ ಕಾರ್ಯದಲ್ಲಿ ಪಾಲ್ಗೊಂಡಿದ್ದ ಡಿವೈಎಸ್ಪಿ ಶಾಂತವೀರ ಈ., ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐಗಳಾದ ಅಜಿತಕುಮಾರ ಹೊಸಮನಿ, ಕೆ.ಬಿ.ಮಾಂಗ, ಸಿದ್ದಪ್ಪ ಯಡಹಳ್ಳಿ ಪೊಲೀಸ್ ಸಿಬ್ಬಂದಿ ಆರ್.ಬಿ.ಕಟಗೇರಿ, ಜೆ.ಸಿ. ದಳವಾಯಿ, ಎನ್.ಎಂ. ಜಮಖಂಡಿ, ಬಿ.ಡಿ. ಕುರಿ, ಎಸ್.ಪಿ. ರಾಠೋಡ, ಪಿ.ಎಂ. ಅಗಸರ, ಹನಮಂತ ಮಾದರ, ಎಂ.ಬಿ.ದಳವಾಯಿ, ಆರ್.ಎಂ.ಹೆಗ್ಗೋಡ, ಎಂ.ಕೆ.ಯೆಳೆಂಟಿ, ಆರ್.ಎಸ್.ಕೋಲಕಾರ, ಡಿ.ಎಲ್.ನದಾಫ, ಜಿ.ಎಂ.ನಾಯ್ಕರ, ದಾದಾಪೀರ ಅತ್ರಾವತ, ಎಸ್.ಪಿ. ಕೆಸರಗೊಪ್ಪ, ಎಚ್.ವೈ.ಕೋಳಿ, ಆರ್.ಆರ್. ಮುನ್ಯಾಳ, ಆರ್.ಎಸ್.ತಳವಾರ,ಶ್ರೀಕಾಂತ ಬೆನಕಟ್ಟಿ, ಎಸ್.ಎಂ.ಭದ್ರಶೆಟ್ಟಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸಿಬ್ಬಂದಿಗೆ ಸೂಕ್ತ ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.