![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 13, 2024, 6:00 AM IST
ಮುಂಬಯಿ: ಭಾರೀ ರಾಜಕೀಯ ಜಿದ್ದಾಜಿದ್ದಾಗಿ ಸಾಕ್ಷಿಯಾಗಿದ್ದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಎನ್ಸಿಪಿ-ಶಿವಸೇನೆ ನೇತೃತ್ವದ “ಮಹಾಯುತಿ’ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ 11 ಸ್ಥಾನಗಳ ಚುನಾವಣೆಯಲ್ಲಿ 9 ಸ್ಥಾನಗಳನ್ನು ಮಹಾಯುತಿ ಗೆದ್ದು ಬೀಗಿದೆ. 11 ಸ್ಥಾನಗಳಿಗೆ 12 ಅಭ್ಯರ್ಥಿಗಳು ಕಣದಲ್ಲಿದ್ದರು.
ಪಂಕಜಾ ಮುಂಢೆ ಸೇರಿದಂತೆ 5 ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿದರೆ, ಶಿಂಧೆ ಶಿವಸೇನೆ ಮತ್ತು ಅಜಿತ್ ಪವಾರ್ ಎನ್ಸಿಪಿ ತಲಾ ಇಬ್ಬರನ್ನು ಕಣಕ್ಕಿಳಿಸಿತ್ತು. ಈ ಎಲ್ಲ 9 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮತ್ತೂಂದೆಡೆ ಮಹಾ ವಿಕಾಸ್ ಅಘಾಡಿಯ ಕಾಂಗ್ರೆಸ್, ಉದ್ಧವ್ ಶಿವಸೇನೆ ಮತ್ತು ಶರದ್ ಪವಾರ್ ಎನ್ಸಿಪಿ ತಲಾ ಒಬ್ಬೊಬ್ಬರನ್ನು ಕಣಕ್ಕಿಳಿಸಿತ್ತು. ಈ ಪೈಕಿ ಕಾಂಗ್ರೆಸ್ ಹಾಗೂ ಉದ್ಧವ್ ಶಿವಸೇನೆ ಅಭ್ಯರ್ಥಿಗಳು ಗೆಲುವು ಕಂಡರೆ, ಶರದ್ ಎನ್ಸಿಪಿ ಬೆಂಬಲಿತ ಪೆಸೆಂಟ್ಸ್ ಆ್ಯಂಡ್ ವರ್ಕ್ಸ್ ಪಾರ್ಟಿ ಅಭ್ಯರ್ಥಿ ಸೋಲು ಕಂಡಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಎಂಎಲ್ಸಿ ಚುನಾವಣೆಯನ್ನು ಸೆಮಿಫೈನಲ್ ಎಂದು ಕರೆಯಲಾಗುತ್ತಿತ್ತು. ಅಡ್ಡ ಮತದಾನ ತಪ್ಪಿಸುವುದಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ಹೊಟೇಲ್ಗಳಿಗೆ ಸ್ಥಳಾಂತರಿಸಿದ್ದವು.
ಕಾಂಗ್ರೆಸ್ ಪಕ್ಷದ 7 ಶಾಸಕರಿಂದ ಅಡ್ಡಮತ!
ಚುನಾವಣೆಗೂ ಮುಂಚೆ ಅಜಿತ್ ನೇತೃತ್ವದ ಎನ್ಸಿಪಿ ಶಾಸಕರು ವಿಪಕ್ಷಗಳ ಅಭ್ಯರ್ಥಿಗಳಿಗೆ ಅಡ್ಡಮತದಾನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್ನ 7 ಶಾಸಕರು ಆಡಳಿತ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿರುವುದು ಆರಂಭದ ಮಾಹಿತಿಯಲ್ಲಿ ತಿಳಿದು ಬಂದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.