![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 13, 2024, 2:45 PM IST
ಕುಷ್ಟಗಿ: ಇಲ್ಲಿನ ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ್ರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಅಶೋಕ ಶಿಗ್ಗಾವಿ ನೇಮಕಗೊಂಡಿದ್ದಾರೆ.
ಕುಷ್ಟಗಿ ತಹಶೀಲ್ದಾರರಾಗಿ ಸೇವೆಯಲ್ಲಿದ್ದ ಶ್ರುತಿ ಮಳ್ಳಪ್ಪಗೌಡ್ರು, ವಿಜಯನಗರ ಜಿಲ್ಲೆ ಹೊಸಪೇಟೆಗೆ ವರ್ಗಾವಣೆಗೊಂಡಿದ್ದಾರೆ. ಅವರ ಸ್ಥಾನಕ್ಕೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ತಹಶೀಲ್ದಾರ ಅಶೋಕ ಶಿಗ್ಗಾವಿ ನೇಮಕಗೊಂಡಿದ್ದಾರೆ.
ಲೋಕಸಭೆ ಚುನಾವಣೆಯ ಪೂರ್ವದಲ್ಲಿ ತಹಶೀಲ್ದಾರ ಸೇವೆಯಲ್ಲಿದ್ದ ಶ್ರುತಿ ಅವರನ್ನು ಹೊಸಪೇಟೆಗೆ ವರ್ಗಾಯಿಸಲಾಗಿತ್ತು. ಅವರ ಸ್ಥಾನಕ್ಕೆ ರವಿ ಅಂಗಡಿ ನೇಮಕಗೊಂಡು ಲೋಕಸಭಾ ಚುನಾವಣಾ ಪ್ರಕ್ರಿಯೆ ನಿಭಾಯಿಸಿದ ಬಳಿಕ ರವಿ ಅಂಗಡಿ ಮೂಲ ಸ್ಥಳಕ್ಕೆ ವರ್ಗವಾಗಿದ್ದರಿಂದ ಅವರ ಸ್ಥಾನಕ್ಕೆ ಇತ್ತೀಚೆಗೆ ತಹಶೀಲ್ದಾರ ಶ್ರುತಿ ಮಳ್ಳಪ್ಪಗೌಡ್ರು ವಾಪಸ್ಸಾಗಿದ್ದರು. ಇದೀಗ ಮತ್ತೇ ಶ್ರುತಿ ಮಳ್ಳಪ್ಪಗೌಡ್ರು ಅವರನ್ನು ಹೊಸಪೇಟೆಗೆ ವರ್ಗಾಯಿಸಲಾಗಿದೆ. ಅವರ ಸ್ಥಾನದಲ್ಲಿ ಕುಂದಗೋಳ ತಾಲೂಕಿನಲ್ಲಿ ಸೇವೆಯಲ್ಲಿದ್ದ ಅಶೋಕ ಶಿಗ್ಗಾವಿ ನೇಮಕಗೊಂಡಿದ್ದಾರೆ.
ಸರ್ಕಾರ ಗ್ರೇಡ್-1 ಹಾಗೂ ಗ್ರೇಡ್-2 ವಿವಿಧ ತಾಲೂಕುಗಳಲ್ಲಿ ಸೇವೆಯಲ್ಲಿರುವ 62 ಜನ ತಹಶೀಲ್ದಾರನ್ನು ವರ್ಗಾಯಿಸಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.