ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

ಇದೊಂದು ಅಲ್ಲಿನ ಸರಕಾರಿ ನಿಯಂತ್ರಣ ಮೀನುಮಾರುಕಟ್ಟೆ

Team Udayavani, Jul 14, 2024, 9:05 AM IST

ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

ಮೀನು ತಿನ್ನುವವರು ಮೀನು ಮಾರುಕಟ್ಟೆಗೆ ಹೇೂಗಲೇಬೇಕು ತಾನೆ?.ಅಂತೂ ಅಬುಧಾಬಿಗೆ ಬಂದ ನನಗೆ ಮೀನು ತಂದು ತಿನ್ನಬೇಕೆಂಬ ಆಸೆಯಿಂದ ಮೀನು ಮಾರುಕಟ್ಟೆಯನ್ನು ಹುಡುಕಿ ಹೊರಟೆ..ಅಬುಧಾಬಿಯ ಇಲೆಕ್ಟ್ರೇೂ ಸ್ಟ್ರೀಟ್‌ ನಿಂದ ಅಣತಿ ದೂರದಲ್ಲೊಂದು ಮೀನು ಮಾರುಕಟ್ಟೆ. ಹತ್ತಿರ ಹೇೂದಾಗ ಅದೊಂದು ಭವ್ಯ ಕಟ್ಟಡದ ಒಳಗೆ ಹೇೂದ ಅನುಭವ. ಪ್ರವೇಶಿಸಿದ ತಕ್ಷಣವೇ ತಂಪಾಗಿಸುವ ಹವಾ.ಇಡೀ ಮಾರುಕಟ್ಟೆಯೇ ಕೇಂದ್ರಿಕೃತವಾದ ಹವಾ ನಿಯಂತ್ರಣ ವ್ಯವಸ್ಥೆ.ಬಿಸಿಲಿನ ತಾಪದಿಂದ ಒಳಗೆ ಹೇೂದ ನನಗೆ ಇದೆಂತಹ ಹೈಟೆಕ್ ಹೇೂಟೆಲ್ ಒಳಗೆ ಪ್ರವೇಶ ಮಾಡಿದ ಹಾಗೆ ಅನ್ನಿಸಿತು.

ವಿಸ್ತಾರವಾದ ಜಾಗ ಎಲ್ಲಾ ಕಡೆ ವಿವಿಧ ಗಾತ್ರದ ವಿವಿಧ ರೂಪದ ಮೀನುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಇಟ್ಟಿದ್ದರು ಅನ್ನುವುದಕ್ಕಿಂತ ಅಷ್ಟೇ ವ್ಯವಸ್ಥಿತವಾಗಿ ಜೇೂಡಿಸಿ ಇಟ್ಟಿದ್ದರು ಅನ್ನುವುದು ಸೂಕ್ತ. ಅಬುಧಾಬಿಯ ಮಾರುಕಟ್ಟೆಯಲ್ಲಿ ಸಿಗುವ ಮೀನುಗಳನ್ನು ನೇೂಡಿದಾಗ ನಮ್ಮಲ್ಲಿ ಸಿಗುವ ಮೀನುಗಳು ಅಲ್ಲಿ ಲಭ್ಯ. ಬಗುಂಡೆ; ಬುತಾಯಿ; ಕಂಡಿಕೆ(ಕಾಣಿ) ಅಂಜಲ್ ;ಪಾಂಪ್ಲೇಟ್‌ ನಲ್ಲಿ ಬಿಳಿ ಕಪ್ಪು..ಈ ಎಲ್ಲಾ ಮೀನುಗಳ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ಇಟ್ಟಿರುವ ಪರಿ ಚೆನ್ನಾಗಿದೆ.ಮೀನು ಮಾರುವವರ ತಲೆಯ ಮೇಲು ಜರಿಯ ಕ್ಯಾಪ್ ಇರುತ್ತದೆ. ಮೀನುಮಾರುಕಟ್ಟೆ ಅಂದರೆ ಗೌಜಿ ಗದ್ದಲ ಇರಲೇ ಬೇಕು ಅಲ್ವಾ?ಆದರೆ ಇಲ್ಲಿ ಅದೇನು ಇಲ್ಲ ಎಲ್ಲವೂ ಶಾಂತ ಪ್ರಶಾಂತ.

ನಮ್ಮಲ್ಲಿ ಒಂದು ಕ್ರಮವಿದೆ. ಮೀನು ಮಾರುಕಟ್ಟೆಗೆ ಹೇೂದವ ಕಾಲುತೊಳೆದೆ ಮನೆಯ ಒಳಗೆ ಬರಬೇಕು. ಅಲ್ಲಿ ಹಾಗಲ್ಲ..ಕಾಲು ತೊಳೆದೆ ಮೀನು ಮಾರುಕಟ್ಟೆಗೆ ಕಾಲುಹಾಕುವಷ್ಟು ಸ್ವಚ್ಛತೆ ಕಾಪಾಡಿಕೊಂಡು ಬಂದಿರುವುದು ಅವರು ಸ್ವಚ್ಛತೆ ಕೊಟ್ಟ ಆದ್ಯತೆ ಎದ್ದು ಕಾಣುವಂತಿದೆ. ಇದನ್ನು ಪರಿಶೀಲಿಸುವ ಅಧಿಕಾರಿಗಳು ಕೂಡಾ ವೀಕ್ಷಣೆ ಮಾಡುವುದನ್ನು ಗಮನಿಸ ಬಹುದು.

ಮೀನು ಖರೀದಿಸಿದ ಅನಂತರದಲ್ಲಿ ಮೀನು ಕಟ್ಟಿಂಗ್ ಪ್ರತ್ಯೇಕವಾದ ಸ್ಥಳ. ಅಲ್ಲಿಯೂ ಅಷ್ಟೇ ಮೆಾದಲಿಗೆ ನಮ್ಮ ಹೆಸರನ್ನು ನೋಂದಾಯಿಸಿಕೊಂಡು ಒಂದು ನಂಬರ್ ಕೊಡುತ್ತಾರೆ. ನಾವು ಖರೀದಿಸಿದ ಮೀನು ನೇರವಾಗಿ ಹವಾ ನಿಯಂತ್ರಿತ ಕೊಠಡಿಗೆ ಹೇೂಗುತ್ತದೆ..ಅಲ್ಲಿ ಮೀನು ಕಟ್ಟಿಂಗ್  ಮಾಡುವವರು ಅಷ್ಟೇ ಆಸ್ಪತ್ರೆಯಲ್ಲಿನ ಆಪರೇಷನ್ ಥಿಯೇಟರ್ ಹಾಗಿದೆ.‌ ತಲೆ ಕೈಗೆ ನೀಲಿ ಪ್ಲ್ಯಾಸ್ಟಿಕ್ ಬಟ್ಟೆ ಕಟ್ಟಿಕೊಂಡು ಚಾಕು ಚೂರಿಯಿಂದ ಕೆಲಸ ಮಾಡುವಾಗ ಹೊರಗೆ ಕೂತ ನಮಗೆ ಅವರು ನಮ್ಮ ಮೀನು ಯಾವ ರೀತಿಯಲ್ಲಿ ಕಟ್ಟಿಂಗ್ ಮಾಡುತ್ತಿದ್ದಾರೆ ಅನ್ನುವುದನ್ನು ಕಾಣ ಬಹುದು..ಹತ್ತಿರ ಹೇೂಗಲು ಅವಕಾಶವಿಲ್ಲ. ಹೊರಗಿನಿಂದಲೇ ಕೈ ಸನ್ನೆಯಲ್ಲಿಯೇ ಮಾಹಿತಿ ನೀಡಬಹುದು. ನಮ್ಮ ಟೇೂಕನ್ ನಂಬರ್ ಸ್ಕ್ರೀನ್‌ ನಲ್ಲಿ ಡಿಸ್ ಪ್ಲೇ ಆದ ತಕ್ಷಣವೇ ಕೌಂಟರ್ ನಲ್ಲಿ ನಮ್ಮ ಮೀನನ್ನು ಸಂಗ್ರಹಿಸಬೇಕು.

ಅಲ್ಲಿನ ಇನ್ನೊಂದು ವಿಶೇಷ ಅಂದರೆ ನಾವು ಖರೀದಿಸುವ ಮೀನಿನ ಕ್ವಾಲಿಟಿ ಬಗ್ಗೆ ಸಂಶಯವಿದ್ದರೆ ಅಲ್ಲಿಯೇ ಅದಕ್ಕೆ ಸಂಬಂಧಿಸಿದ ಡಾಕ್ಟರ್ ಕೂಡಾ ಲಭ್ಯವಿದ್ದಾರೆ. ಇದೊಂದು ಅಲ್ಲಿನ ಸರಕಾರಿ ನಿಯಂತ್ರಣ ಮೀನುಮಾರುಕಟ್ಟೆ ಅನ್ನುವುದು ನಮ್ಮ ಅನುಭವಕ್ಕೆ ಬಂತು. ಅಂತೂ ಅಬುಧಾಬಿ ಪ್ರವಾಸಕ್ಕೆ ಹೇೂದವರಲ್ಲಿ ಮೀನು ತಿನ್ನುವ ಅಭ್ಯಾಸ ವಿದ್ದವರಿಗೆ ಅಬುಧಾಬಿಯ ಈ ಮೀನುಮಾರುಕಟ್ಟೆಯ ನೇೂಟ ಒಂದು ವಿಶೇಷವಾದ ಅನುಭವ ನೀಡುವ ತಾಣವು ಹೌದು..

ಯುನೈಟೆಡ್ ಅರಬಿಕ್ ಎಮಿರೇಟ್ಸ್ ರಾಷ್ಟ್ರದ ತೈಲ ಸಂಪತ್ತು ಬಿಟ್ಟರೆ ಇನ್ನೊಂದು ಪ್ರಮುಖ ಆದಾಯ ತರುವ ಉದ್ಯಮವೆಂದರೆ ಮತ್ಸೇೂಧ್ಯಮ ಅನ್ನುವುದನ್ನು ಇಲ್ಲಿ ಪ್ರಮುಖವಾಗಿ ಗಮನಿಸ ಬೇಕಾದ ಅಂಶ. ಆದುದರಿಂದ ಅಲ್ಲಿನ ಸರ್ಕಾರ ಮೀನುಗಾರಿಕೆಗೆ ಹೆಚ್ಚು ಆದ್ಯತೆ ನೀಡುತ್ತಾ ಬಂದಿದೆ ಅನ್ನುವುದು ಸೂಕ್ತ.

ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ .ಉಡುಪಿ (ಅಬುಧಾಬಿಯಿಂದ)

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paris ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ? ಇಲ್ಲಿದೆ ವಿವರ

Olympics Vs Para; ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ?

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

Non Veg:ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.