ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

ಇದೊಂದು ಅಲ್ಲಿನ ಸರಕಾರಿ ನಿಯಂತ್ರಣ ಮೀನುಮಾರುಕಟ್ಟೆ

Team Udayavani, Jul 14, 2024, 9:05 AM IST

ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

ಮೀನು ತಿನ್ನುವವರು ಮೀನು ಮಾರುಕಟ್ಟೆಗೆ ಹೇೂಗಲೇಬೇಕು ತಾನೆ?.ಅಂತೂ ಅಬುಧಾಬಿಗೆ ಬಂದ ನನಗೆ ಮೀನು ತಂದು ತಿನ್ನಬೇಕೆಂಬ ಆಸೆಯಿಂದ ಮೀನು ಮಾರುಕಟ್ಟೆಯನ್ನು ಹುಡುಕಿ ಹೊರಟೆ..ಅಬುಧಾಬಿಯ ಇಲೆಕ್ಟ್ರೇೂ ಸ್ಟ್ರೀಟ್‌ ನಿಂದ ಅಣತಿ ದೂರದಲ್ಲೊಂದು ಮೀನು ಮಾರುಕಟ್ಟೆ. ಹತ್ತಿರ ಹೇೂದಾಗ ಅದೊಂದು ಭವ್ಯ ಕಟ್ಟಡದ ಒಳಗೆ ಹೇೂದ ಅನುಭವ. ಪ್ರವೇಶಿಸಿದ ತಕ್ಷಣವೇ ತಂಪಾಗಿಸುವ ಹವಾ.ಇಡೀ ಮಾರುಕಟ್ಟೆಯೇ ಕೇಂದ್ರಿಕೃತವಾದ ಹವಾ ನಿಯಂತ್ರಣ ವ್ಯವಸ್ಥೆ.ಬಿಸಿಲಿನ ತಾಪದಿಂದ ಒಳಗೆ ಹೇೂದ ನನಗೆ ಇದೆಂತಹ ಹೈಟೆಕ್ ಹೇೂಟೆಲ್ ಒಳಗೆ ಪ್ರವೇಶ ಮಾಡಿದ ಹಾಗೆ ಅನ್ನಿಸಿತು.

ವಿಸ್ತಾರವಾದ ಜಾಗ ಎಲ್ಲಾ ಕಡೆ ವಿವಿಧ ಗಾತ್ರದ ವಿವಿಧ ರೂಪದ ಮೀನುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಇಟ್ಟಿದ್ದರು ಅನ್ನುವುದಕ್ಕಿಂತ ಅಷ್ಟೇ ವ್ಯವಸ್ಥಿತವಾಗಿ ಜೇೂಡಿಸಿ ಇಟ್ಟಿದ್ದರು ಅನ್ನುವುದು ಸೂಕ್ತ. ಅಬುಧಾಬಿಯ ಮಾರುಕಟ್ಟೆಯಲ್ಲಿ ಸಿಗುವ ಮೀನುಗಳನ್ನು ನೇೂಡಿದಾಗ ನಮ್ಮಲ್ಲಿ ಸಿಗುವ ಮೀನುಗಳು ಅಲ್ಲಿ ಲಭ್ಯ. ಬಗುಂಡೆ; ಬುತಾಯಿ; ಕಂಡಿಕೆ(ಕಾಣಿ) ಅಂಜಲ್ ;ಪಾಂಪ್ಲೇಟ್‌ ನಲ್ಲಿ ಬಿಳಿ ಕಪ್ಪು..ಈ ಎಲ್ಲಾ ಮೀನುಗಳ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ಇಟ್ಟಿರುವ ಪರಿ ಚೆನ್ನಾಗಿದೆ.ಮೀನು ಮಾರುವವರ ತಲೆಯ ಮೇಲು ಜರಿಯ ಕ್ಯಾಪ್ ಇರುತ್ತದೆ. ಮೀನುಮಾರುಕಟ್ಟೆ ಅಂದರೆ ಗೌಜಿ ಗದ್ದಲ ಇರಲೇ ಬೇಕು ಅಲ್ವಾ?ಆದರೆ ಇಲ್ಲಿ ಅದೇನು ಇಲ್ಲ ಎಲ್ಲವೂ ಶಾಂತ ಪ್ರಶಾಂತ.

ನಮ್ಮಲ್ಲಿ ಒಂದು ಕ್ರಮವಿದೆ. ಮೀನು ಮಾರುಕಟ್ಟೆಗೆ ಹೇೂದವ ಕಾಲುತೊಳೆದೆ ಮನೆಯ ಒಳಗೆ ಬರಬೇಕು. ಅಲ್ಲಿ ಹಾಗಲ್ಲ..ಕಾಲು ತೊಳೆದೆ ಮೀನು ಮಾರುಕಟ್ಟೆಗೆ ಕಾಲುಹಾಕುವಷ್ಟು ಸ್ವಚ್ಛತೆ ಕಾಪಾಡಿಕೊಂಡು ಬಂದಿರುವುದು ಅವರು ಸ್ವಚ್ಛತೆ ಕೊಟ್ಟ ಆದ್ಯತೆ ಎದ್ದು ಕಾಣುವಂತಿದೆ. ಇದನ್ನು ಪರಿಶೀಲಿಸುವ ಅಧಿಕಾರಿಗಳು ಕೂಡಾ ವೀಕ್ಷಣೆ ಮಾಡುವುದನ್ನು ಗಮನಿಸ ಬಹುದು.

ಮೀನು ಖರೀದಿಸಿದ ಅನಂತರದಲ್ಲಿ ಮೀನು ಕಟ್ಟಿಂಗ್ ಪ್ರತ್ಯೇಕವಾದ ಸ್ಥಳ. ಅಲ್ಲಿಯೂ ಅಷ್ಟೇ ಮೆಾದಲಿಗೆ ನಮ್ಮ ಹೆಸರನ್ನು ನೋಂದಾಯಿಸಿಕೊಂಡು ಒಂದು ನಂಬರ್ ಕೊಡುತ್ತಾರೆ. ನಾವು ಖರೀದಿಸಿದ ಮೀನು ನೇರವಾಗಿ ಹವಾ ನಿಯಂತ್ರಿತ ಕೊಠಡಿಗೆ ಹೇೂಗುತ್ತದೆ..ಅಲ್ಲಿ ಮೀನು ಕಟ್ಟಿಂಗ್  ಮಾಡುವವರು ಅಷ್ಟೇ ಆಸ್ಪತ್ರೆಯಲ್ಲಿನ ಆಪರೇಷನ್ ಥಿಯೇಟರ್ ಹಾಗಿದೆ.‌ ತಲೆ ಕೈಗೆ ನೀಲಿ ಪ್ಲ್ಯಾಸ್ಟಿಕ್ ಬಟ್ಟೆ ಕಟ್ಟಿಕೊಂಡು ಚಾಕು ಚೂರಿಯಿಂದ ಕೆಲಸ ಮಾಡುವಾಗ ಹೊರಗೆ ಕೂತ ನಮಗೆ ಅವರು ನಮ್ಮ ಮೀನು ಯಾವ ರೀತಿಯಲ್ಲಿ ಕಟ್ಟಿಂಗ್ ಮಾಡುತ್ತಿದ್ದಾರೆ ಅನ್ನುವುದನ್ನು ಕಾಣ ಬಹುದು..ಹತ್ತಿರ ಹೇೂಗಲು ಅವಕಾಶವಿಲ್ಲ. ಹೊರಗಿನಿಂದಲೇ ಕೈ ಸನ್ನೆಯಲ್ಲಿಯೇ ಮಾಹಿತಿ ನೀಡಬಹುದು. ನಮ್ಮ ಟೇೂಕನ್ ನಂಬರ್ ಸ್ಕ್ರೀನ್‌ ನಲ್ಲಿ ಡಿಸ್ ಪ್ಲೇ ಆದ ತಕ್ಷಣವೇ ಕೌಂಟರ್ ನಲ್ಲಿ ನಮ್ಮ ಮೀನನ್ನು ಸಂಗ್ರಹಿಸಬೇಕು.

ಅಲ್ಲಿನ ಇನ್ನೊಂದು ವಿಶೇಷ ಅಂದರೆ ನಾವು ಖರೀದಿಸುವ ಮೀನಿನ ಕ್ವಾಲಿಟಿ ಬಗ್ಗೆ ಸಂಶಯವಿದ್ದರೆ ಅಲ್ಲಿಯೇ ಅದಕ್ಕೆ ಸಂಬಂಧಿಸಿದ ಡಾಕ್ಟರ್ ಕೂಡಾ ಲಭ್ಯವಿದ್ದಾರೆ. ಇದೊಂದು ಅಲ್ಲಿನ ಸರಕಾರಿ ನಿಯಂತ್ರಣ ಮೀನುಮಾರುಕಟ್ಟೆ ಅನ್ನುವುದು ನಮ್ಮ ಅನುಭವಕ್ಕೆ ಬಂತು. ಅಂತೂ ಅಬುಧಾಬಿ ಪ್ರವಾಸಕ್ಕೆ ಹೇೂದವರಲ್ಲಿ ಮೀನು ತಿನ್ನುವ ಅಭ್ಯಾಸ ವಿದ್ದವರಿಗೆ ಅಬುಧಾಬಿಯ ಈ ಮೀನುಮಾರುಕಟ್ಟೆಯ ನೇೂಟ ಒಂದು ವಿಶೇಷವಾದ ಅನುಭವ ನೀಡುವ ತಾಣವು ಹೌದು..

ಯುನೈಟೆಡ್ ಅರಬಿಕ್ ಎಮಿರೇಟ್ಸ್ ರಾಷ್ಟ್ರದ ತೈಲ ಸಂಪತ್ತು ಬಿಟ್ಟರೆ ಇನ್ನೊಂದು ಪ್ರಮುಖ ಆದಾಯ ತರುವ ಉದ್ಯಮವೆಂದರೆ ಮತ್ಸೇೂಧ್ಯಮ ಅನ್ನುವುದನ್ನು ಇಲ್ಲಿ ಪ್ರಮುಖವಾಗಿ ಗಮನಿಸ ಬೇಕಾದ ಅಂಶ. ಆದುದರಿಂದ ಅಲ್ಲಿನ ಸರ್ಕಾರ ಮೀನುಗಾರಿಕೆಗೆ ಹೆಚ್ಚು ಆದ್ಯತೆ ನೀಡುತ್ತಾ ಬಂದಿದೆ ಅನ್ನುವುದು ಸೂಕ್ತ.

ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ .ಉಡುಪಿ (ಅಬುಧಾಬಿಯಿಂದ)

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.