Cancerಗೆ ಪತಿ ಬಲಿ: ಪತ್ನಿ, ಪುತ್ರ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಪತ್ತೆ
ನೇಣಿನಿಂದ ಪುತ್ರನನ್ನು ಕೆಳಗಿಳಿಸಿ ಅದೇ ಕುಣಿಕೆಗೆ ಕೊರಳೊಡ್ಡಿದ ಅಮ್ಮ!, 3 ತಿಂಗಳ ಹಿಂದೆ ಪತಿ ಸಾವು
Team Udayavani, Jul 14, 2024, 7:15 AM IST
ಬೆಂಗಳೂರು: ಕ್ಯಾನ್ಸರ್ನಿಂದ ಪತಿ ಸಾವನ್ನಪ್ಪಿದ್ದರಿಂದ ಮನನೊಂದು ಪತ್ನಿ ಮತ್ತು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕದ ಆರ್ಎನ್ಜೆಡ್ ಅಪಾರ್ಟ್ಮೆಂಟ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಮ್ಯಾ ಶ್ರೀಧರ್ (43) ಮತ್ತು ಪುತ್ರ ಭಾರ್ಗವ್ (23) ಆತ್ಮಹತ್ಯೆ ಮಾಡಿಕೊಂಡವರು. ಪ್ರಾಥಮಿಕ ತನಿಖೆಯಲ್ಲಿ ಕೆಲವು ತಿಂಗಳ ಹಿಂದೆ ರಮ್ಯಾ ಅವರ ಪತಿ ಶ್ರೀಧರ್ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಅದರಿಂದ ತಾಯಿ, ಮಗ ಮಾನಸಿಕ ಖನ್ನತಗೊಳ
ಗಾಗಿದ್ದರು. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಹೇಳಲಾಗಿದೆ. ಯಲ ಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶ ಮೂಲದ ರಮ್ಯಾ, ಸಾಫ್ಟ್ ವೇರ್ ಎಂಜಿನಿಯರ್ ಶ್ರೀಧರ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಅವರದ್ದು ಅಂತರ್ಜಾತಿ ವಿವಾಹ. ದಂಪತಿ ಭಾರ್ಗವ್ ಹಾಗೂ ಪುತ್ರಿಯೊಂದಿಗೆ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿದ್ದರು. ಮೊದಲ ಪುತ್ರಿ ಪಿಜಿಯಲ್ಲಿ ಉಳಿದುಕೊಂಡು ಓದುತ್ತಿದ್ದರು. ಶ್ರೀಧರ್ಗೆ ಕ್ಯಾನ್ಸರ್ನಿಂದ 3 ತಿಂಗಳ ಹಿಂದೆ ಮೃತಪಟ್ಟಿದ್ದರು. ಅದ್ದರಿಂದ ರಮ್ಯಾಗೆ ಮನೆ ನಿರ್ವಹಣೆ ಕಷ್ಟವಾಗಿತ್ತು. ಫ್ಲ್ಯಾಟ್ ಬಾಡಿಗೆ, ಮಕ್ಕಳ ಶುಲ್ಕ, ಮನೆ ನಿರ್ವಹಣೆಗೆ ಹಣ ಹೊಂದಿಸಲು ಕಷ್ಟವಾಗಿ ಖನ್ನತೆಗೊಳಗಾಗಿದ್ದರು. ಮಕ್ಕಳೊಂದಿಗೆ ಸಾಯುವುದಾಗಿ ತನ್ನ ಸಂಬಂಧಿಕರ ಬಳಿ ಹೇಳಿಕೊಳ್ಳುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರ್ಥಿಕ, ಮಾನಸಿಕವಾಗಿ ಕುಗ್ಗಿದ್ದ ತಾಯಿ ರಮ್ಯಾ
19 ವರ್ಷದ ಪುತ್ರಿ ಪೇಯಿಂಗ್ ಗೆಸ್ಟ್ (ಪಿಜಿ)ಯಲ್ಲಿ ವಾಸವಾಗಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು. 2 ದಿನಕ್ಕೊಮ್ಮೆ ತಾಯಿಗೆ ಕರೆ ಮಾಡಿ ಮಾತಾಡುತ್ತಿದ್ದರು. ಜುಲೈ 9ರಂದು ರಾತ್ರಿ ಕರೆ ಮಾಡಿದ್ದರು. ಆಗಲೂ ತಾಯಿ ಮತ್ತು ಸಹೋದರ ಸಾಯುವ ಮಾತಾಡಿದ್ದರು ಎಂದು ಆಕೆ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಅಂದೇ ರಾತ್ರಿ ಸಹೋದರಿಯ ಜತೆ ಮಾತಾಡಿದ ಭಾರ್ಗವ್ ಬಳಿಕ ಕೋಣೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಆತನ ಕೋಣೆಗೆ ಹೋದ ತಾಯಿ, ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿ ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ರಮ್ಯಾರ ಪುತ್ರಿ ನೀಡಿದ ದೂರಿನ ಮೇರೆಗೆ ಯಲಹಂಕ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಿಜಿಯಲ್ಲಿದ್ದ ಪುತ್ರಿ ಮನೆಗೆ ಬಂದಾಗ ಬೆಳಕಿಗೆ
ಜು. 9ರಂದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮನೆಯಿಂದ ಕರೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪುತ್ರಿ ಶುಕ್ರವಾರ ಸಂಜೆ ಮನೆಗೆ ಬಂದಿದ್ದರು. ಬಾಗಿಲು ಬಡಿದರೂ ಪ್ರತಿಕ್ರಿಯೆ ಬಾರದಿದ್ದಾಗ ತನ್ನ ಬಳಿಯಿದ್ದ ಮತ್ತೂಂದು ಕೀಲಿಕೈ ಬಳಸಿ ಬಾಗಿಲು ತೆರೆದಾಗ ತಾಯಿ ಮತ್ತು ಸಹೋದರ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.