J&K; ಚಿನಾಬ್ ನದಿಗೆ ಜಿಗಿದು ಆತ್ಮಹತ್ಯೆ: ಯುವಕನ ಶವ ಪಾಕಿಸ್ಥಾನದಲ್ಲಿ ಪತ್ತೆ
ಮೃತದೇಹ ಮರಳಿ ಪಡೆಯಲು ಪ್ರಧಾನಿ ಮೋದಿಯವರ ಸಹಾಯ ಕೋರಿದ ಸಂಬಂಧಿಕರು
Team Udayavani, Jul 14, 2024, 6:47 PM IST
ಜಮ್ಮು: ಕಳೆದ ತಿಂಗಳು ಚೀನಾಬ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪಾಕಿಸ್ಥಾನದ ವಶದಲ್ಲಿದ್ದು, ಕುಟುಂಬವು ಅಂತಿಮ ವಿಧಿಗಳಿಗಾಗಿ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಯನ್ನು ಕೋರಿದೆ.
ಅಖ್ನೂರ್ ವಲಯದ ಗಡಿ ಗ್ರಾಮದ ನಿವಾಸಿ ಹರಶ್ ನಗೋತ್ರಾ ಜೂನ್ 11 ರಂದು ನಾಪತ್ತೆಯಾಗಿದ್ದು, ಅವರ ಮೋಟಾರ್ ಸೈಕಲ್ ನದಿಯ ದಡದಲ್ಲಿ ಪತ್ತೆಯಾಗಿತ್ತು. ಮರುದಿನ ನಾಗೋತ್ರಾ ಕುಟುಂಬದಿಂದ ಕಾಣೆಯಾದ ವರದಿಯನ್ನು ದಾಖಲಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ನಲ್ಲಿ 80,000 ರೂ.ಗೂ ಹೆಚ್ಚು ನಷ್ಟ ಅನುಭವಿಸಿದ ನಂತರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆ ಸೂಚಿಸಿದೆ.
ಖಾಸಗಿ ದೂರಸಂಪರ್ಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗನ ಸಿಮ್ ಕಾರ್ಡ್ ಅನ್ನು ಪೋಷಕರು ಪುನಃ ಸಕ್ರಿಯಗೊಳಿಸಿದ ನಂತರ ಪಾಕಿಸ್ಥಾನಿ ಅಧಿಕಾರಿಯಿಂದ ವಾಟ್ಸಾಪ್ ಸಂದೇಶದ ಮೂಲಕ ನಗೋತ್ರಾ ಸಾವಿನ ಬಗ್ಗೆ ಕುಟುಂಬಕ್ಕೆ ದೃಢೀಕರಣ ಸಿಕ್ಕಿದೆ.
ಜೂನ್ 13 ರಂದು ಪಂಜಾಬ್ ಪ್ರಾಂತ್ಯದ ಸಿಯಾಲ್ಕೋಟ್ನ ಕಾಲುವೆಯಿಂದ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮರಣೋತ್ತರ ಪರೀಕ್ಷೆ ವಿಭಾಗದಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಪಾಕ್ ಅಧಿಕಾರಿಯ ವಾಟ್ಸಾಪ್ ಸಂದೇಶ ತಿಳಿಸಿದೆ ಎಂದು ನಾಗೋತ್ರಾ ತಂದೆ ಸುಭಾಷ್ ಶರ್ಮ ಹೇಳಿದ್ದಾರೆ.
ಮೃತದೇಹವನ್ನು ಸಮಾಧಿ ಮಾಡಲಾಗಿದೆ ಎಂದು ಅಧಿಕಾರಿಯು ಮೃತನ ತಂದೆಗೆ ತಿಳಿಸಿದ್ದರು. ಅವರು ನಗೋತ್ರಾ ಅವರ ಗುರುತಿನ ಚೀಟಿಯನ್ನು ವಾಟ್ಸಾಪ್ ಮೂಲಕ ದುಃಖಿತ ಕುಟುಂಬಕ್ಕೆ ಕಳುಹಿಸಲಾಗಿದ್ದು, ದೇಹವು ಅವರ ಮಗನದ್ದೇ ಎಂದು ಖಚಿತಪಡಿಸಿದ್ದಾರೆ.
“ನನ್ನ ಮಗನ ಶವವನ್ನು ಅಂತಿಮ ಸಂಸ್ಕಾರಕ್ಕಾಗಿ ಮರಳಿ ಪಡೆಯಲು ನಮಗೆ ಸಹಾಯ ಮಾಡುವಂತೆ ನಾವು ನಮ್ಮ ಪ್ರಧಾನಿಯನ್ನು ಕೋರುತ್ತೇವೆ. ನಮ್ಮ ಧರ್ಮದ ಪ್ರಕಾರ ಅವರ ಅಂತಿಮ ಸಂಸ್ಕಾರವನ್ನು ಮಾಡಲು ನಾವು ಬಯಸುತ್ತೇವೆ ಎಂದು ಶರ್ಮ ಹೇಳಿದ್ದಾರೆ.
ನಗೋತ್ರಾ ಅವರ ಸಂಬಂಧಿ ಅಮೃತ್ ಭೂಷಣ್ ಅವರು ಈ ವಿಷಯದ ಬಗ್ಗೆ ಈಗಾಗಲೇ ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದಾರೆ.”ನಾವು ಆಘಾತ ಮತ್ತು ದುಃಖದ ಸ್ಥಿತಿಯಲ್ಲಿದ್ದು, ಮೃತ ದೇಹವನ್ನು ಮರಳಿ ಬಯಸುತ್ತೇವೆ. ದೇಹವನ್ನು ಹಸ್ತಾಂತರಿಸುವಂತೆ ನಾವು ಪಾಕಿಸ್ಥಾನದ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದು ಭೂಷಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.