Rescue: ಕೇರಳದ ಬೆಟ್ಟದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಬೆಂಗಳೂರಿನ 10 ಮಹಿಳೆಯರ ರಕ್ಷಣೆ
Team Udayavani, Jul 15, 2024, 11:58 AM IST
ಕೊಚ್ಚಿ: ಕೇರಳದ ಇಡುಕ್ಕಿ ಜಿಲ್ಲೆಯ ನಲುಮಾಲ ವ್ಯೂ ಪಾಯಿಂಟ್ಗೆ ತೆರಳಿ ಮಳೆಯಿಂದಾಗಿ ಸಿಕ್ಕಿ ಹಾಕಿಕೊಂಡಿದ್ದ ಬೆಂಗಳೂರಿನ 10 ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಶುಕ್ರವಾರ (ಜು.19) ಬೆಂಗಳೂರಿನ 10 ಮಹಿಳೆಯರು ಸೇರಿದಂತೆ ಒಟ್ಟು 38 ಮಂದಿ ಬೆಟ್ಟಕ್ಕೆ 22 ವಾಹನಗಳಲ್ಲಿ ನೆಡುಂಕಂದಂ ಬೆಟ್ಟ ಸಮೀಪ ಇರುವ ನಲುಮಾಲ ವ್ಯೂ ಪಾಯಿಂಟ್ಗೆ ಅವರೆಲ್ಲರೂ ಆಗಮಿಸಿದ್ದರು. ಆಗ ಧಾರಾಕಾರ ಮಳೆ ಸುರಿಯಲಾರಂಭಿಸಿತ್ತು. ಹೀಗಾಗಿ, ಮಳೆಯಿಂದಾಗಿ ಮಂಜು ಕೂಡ ಮುಸುಕಲು ಆರಂಭವಾಗಿತ್ತು. ಇದರಿಂದಾಗಿ ವ್ಯೂ ಪಾಯಿಂಟ್ಗೆ ಆಗಮಿಸಿದ್ದವರು ವಾಹನಗಳ ಮೂಲಕ ವಾಪಸ್ ತೆರಳಲು ಅಸಾಧ್ಯವಾಗಿತ್ತು. ಇದರ ಜತೆಗೆ ಕಡಿದಾಗಿರುವ ರಸ್ತೆಯಲ್ಲಿ ಮಣ್ಣು ಸಹಿತ ನೀರು ಧಾರಾಕಾರವಾಗಿ ಹರಿಯಲಾರಂಭಿಸಿತ್ತು. ಹೀಗಾಗಿ, ರಾತ್ರಿಯಿಡೀ ಗುಡ್ಡದ ಮೇಲೆ ಅವರು ಕಾಲ ಕಳೆಯುವಂತಾಗಿತ್ತು. ಹೀಗಾಗಿ, ಪ್ರವಾಸಿಗರ ಪೈಕಿ ಕೆಲವರು ಗುಡ್ಡದ ಮೇಲಿನಿಂದ ನಡೆಯುತ್ತಾ ನೆಡುಮಕಂದಂಗೆ ತೆರಳಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಅವರು ಪೊಲೀಸರು, ಸಾರಿಗೆ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಜತೆಗೂಡಿ ಶನಿವಾರ ಮಧ್ಯಾಹ್ನ 2 ಗಂಟೆಗೆ ವ್ಯೂ ಪಾಯಿಂಟ್ಗೆ ತೆರಳಿ, ಸಿಕ್ಕಿ ಹಾಕಿಕೊಂಡಿರುವವರನ್ನು ರಕ್ಷಿಸಿದ್ದಾರೆ. ಮಳೆಗಾಲದಲ್ಲಿ ವ್ಯೂ ಪಾಯಿಂಟ್ಗೆ ವಾಹನದಲ್ಲಿ ತೆರಳಲು ನಿಷೇಧ ಹೇರಲಾಗಿದೆ. ಹೀಗಿದ್ದರೂ, ಪ್ರವಾಸಿಗರು ಅಲ್ಲಿಗೆ ತೆರಳಿದ್ದರಿಂದ ಅವರ ಮೇಲೆ ಕೇಸು ದಾಖಲಿಸಲಾಗಿದೆ.
ವಾಹನಗಳನ್ನು ವಶಪಡಿಸಿಕೊಂಡಿದ್ದರೂ, ಅವುಗಳನ್ನು ಮಾಲೀಕರಿಗೆ ಬಿಟ್ಟುಕೊಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಲುಮಾಲ ವ್ಯೂ ಪಾಯಿಂಟ್ ಬಗ್ಗೆ ತಿಳಿದು ಬಂದಿದ್ದರಿಂದ ಅಲ್ಲಿಗೆ ತೆರಳಿದ್ದರು. ಸದ್ಯ ಮಹಿಳೆಯರು ನಿಟ್ಟುಸಿರು ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.