Bidar: ಮದರಸಾಗಳಲ್ಲಿ ಕನ್ನಡ ಕಲಿಕೆಗಾಗಿ ಪ್ರಾಧಿಕಾರದಿಂದ ಯೋಜನೆ: ಬಿಳಿಮಲೆ
Team Udayavani, Jul 15, 2024, 3:30 PM IST
ಬೀದರ್: ರಾಜ್ಯದ ಮದರಸಾಗಳಲ್ಲಿ ಕನ್ನಡ ಕಲಿಕೆಗಾಗಿ ಪ್ರಾಧಿಕಾರದಿಂದ ಯೋಜನೆ ರೂಪಿಸಿರುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾದ ಅದ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಅದರಂತೆ ವಾರದಲ್ಲಿ ಮೂರು ದಿನ ಕನ್ನಡ ಪಾಠ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದು ಆಗಸ್ಟ್ ಎರಡನೇ ವಾರದಲ್ಲಿ ಚಾಲನೆ ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಾಯೋಗಿಕ ಜಿಲ್ಲೆಗಳಾಗಿ ಕಲ್ಬುರ್ಗಿ, ವಿಜಯನಗರ, ರಾಯಸೂರು ಮತ್ತು ಕಲಾಸಿಪಾಳ್ಯದ ಮದರಸಾಗಳಲ್ಲಿ ಆರಂಭ ಮಾಡಲಾಗುತ್ತಿದ್ದು. ಸುಲಭ ಕನ್ನಡದ ಪಠ್ಯವನ್ನೇ ನಾನು ಸಿದ್ಧಪಡಿಸಿದ್ದೇನೆ. ಮುಸ್ಲಿಮ್ ಬಾಂಧವರಲ್ಲೇ ಇರುವ ಒಳ್ಳೆಯ ಬರಹಗಾರರಿಗೆ ತರಬೇತಿ ಕೊಟ್ಟು, ಅವರಿಂದ ತರಗತಿ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿರುವ ಶತಮಾನ ಕಂಡ ಖಾಸಗಿ ಶಾಲೆಗಳ ಅಭಿವೃದ್ಧಿಗೆ ಪ್ರಾಧಿಕಾರ ಯೋಜನೆ ಸಿದ್ಧಪಡಿಸುತ್ತಿದೆ. 150ಕ್ಕಿಂತ ಹೆಚ್ಚು ಶಾಲೆಗಳಿದ್ದು, ಸರ್ಕಾರ ಸಿಆರ್.ಎಸ್ ಅನುದಾನ, ಸ್ಥಳೀಯ ದಾನಿಗಳಿಂದ ಆರ್ಥಿಕ ಸಂಪನ್ಮೂಲ ಕ್ರೂಢೀಕರಿಸಿ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಜಾರಿಗೆ ತಂದಿರುವ 371 (ಜೆ) ಕಾಯ್ದೆಯಿಂದ ಈ ಪ್ರದೇಶ ಸಾಕಷ್ಟು ಅಭಿವೃದ್ಧಿಯಾಗುತ್ತದೆ. ಗಡಿಯಾಚೆಗಿರುವ ಕನ್ನಡಿಗರಿಗೂ ಕಾಯ್ದೆಯ ಸವಲತ್ತುಗಳು ಸಿಗಬೇಕು. ಈ ದಿಸೆಯಲ್ಲಿ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಇಲ್ಲವಾದರೆ ಗಡಿ ರಾಜ್ಯಗಳಲ್ಲಿ ನೆಲೆಸಿರುವ ಕನ್ನಡಿಗರು ಅನಾಥರಾಗುತ್ತಾರೆ ಎಂದರು.
ಇದನ್ನೂ ಓದಿ: Belagavi: ನೀಟ್ ಹಗರಣದ ಮತ್ತೊಂದು ಪ್ರಕರಣ ಬೆಳಕಿಗೆ: ಆರೋಪಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.