Mangaluru: ಲವ್ ಜಿಹಾದ್ ವಿರುದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ ; ಆಕ್ರೋಶ
Team Udayavani, Jul 15, 2024, 5:12 PM IST
ಮಂಗಳೂರು: ಲವ್ ಜಿಹಾದ್ ಪ್ರಕರಣಗಳನ್ನು ಖಂಡಿಸಿ, ಲವ್ ಜಿಹಾದ್ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಇಂದು ಅಪರಾಹ್ನ ನಿಗದಿಯಾಗಿದ್ದ ಪ್ರತಿಭಟನಾ ಸಭೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಪೊಲೀಸರು ಒತ್ತಡಕ್ಕೆ ಮಣಿದು ಅನುಮತಿ ನಿರಾಕರಿಸಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ಕಿತ್ತು ಕೊಂಡಿದ್ದಾರೆ. ಲವ್ ಜಿಹಾದ್ ಗೆ ಮುಗ್ದ ಹಿಂದೂ ಹೆಣ್ಮಕ್ಕಳು ಬಲಿಯಾಗುತ್ತಿದ್ದು ಹಿಂದೂ ಸಮಾಜ ಆತಂಕಕ್ಕೊಳಗಾಗಿದೆ. ಮೊನ್ನೆಯಷ್ಟೆ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಇದರ ಬಗ್ಗೆ ಜಾಗೃತಿ ಮೂಡಿಸಲು ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ ಪೊಲೀಸರು ಸಾರಾ ಸಗಟಾಗಿ ನಿರಾಕರಿಸಿದ್ದಾರೆ ಎಂದು ಹಿಂದೂ ಮಹಿಳಾ ಸುರಕ್ಷಾ ಸಮಿತಿಯ ಪ್ರಮುಖರಾದ ಶ್ರೀಲಕ್ಷ್ಮೀ ಮಠದ ಮೂಲೆ, ಸುಕನ್ಯಾ ರಾವ್ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯವಾದಿ ಹರೀಶ್ ಕುಮಾರ್ ಅವರು ಮಾತನಾಡಿ, ಈಗ ಉಂಟಾಗಿರುವ ಲವ್ ಜಿಹಾದ್ ಸಮಸ್ಯೆ ಪರಿಹಾರಕ್ಕೆ ಮುಂದಾಗಿರಬೇಕೇ ಹೊರತು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಬಾರದು. ಸಾರ್ವಜನಿಕ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸುವಾಗ ಪೊಲೀಸರು ಅಡ್ಡಿ ಪಡಿಸಬಾರದು. ಸಂವಿಧಾನ ನೀಡಿರುವ ಹಕ್ಕನ್ನು ಪೊಲೀಸರು ಕಸಿದುಕೊಂಡಿದ್ದಾರೆ ಎಂದು ಹೇಳಿದರು.
ಪ್ರಮುಖರಾದ ರೂಪಾ ಡಿ.ಬಂಗೇರ, ಪುನೀತ್ ಅತ್ತಾವರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: Heavy Rain: ಸಾಗರದಲ್ಲಿ ಭಾರಿ ಮಳೆ: ಹಲವೆಡೆ ಹಾನಿ… ಮಂಗಳವಾರ (ಜುಲೈ16) ಶಾಲೆಗಳಿಗೆ ರಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.