Tripura ಭಾರೀ ಹಿಂಸಾಚಾರ; ಇದು ‘ನೈಜ ಸಂವಿಧಾನ ಹತ್ಯೆ’ ಎಂದು ಕಾಂಗ್ರೆಸ್ ಆಕ್ರೋಶ
ಡಬಲ್ ಎಂಜಿನ್ ಸರ್ಕಾರವು ಮಾಸ್ಟರ್ ಮೈಂಡ್ ಮಾಡುತ್ತಿದೆ...
Team Udayavani, Jul 15, 2024, 5:45 PM IST
ಹೊಸದಿಲ್ಲಿ: ಪಂಚಾಯತ್ ಚುನಾವಣೆಯ ಘೋಷಣೆಯ ನಂತರ ತ್ರಿಪುರಾದಲ್ಲಿ ನಡೆದ ಹಿಂಸಾಚಾರದ ಘಟನೆಗಳ ಬಗ್ಗೆ ಕಾಂಗ್ರೆಸ್ ಸೋಮವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಈಶಾನ್ಯ ರಾಜ್ಯಗಳಲ್ಲಿ ಹಾಡ ಹಗಲಿನಲ್ಲೇ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಇದು “ನೈಜ ಸಂವಿಧಾನ ಹತ್ಯೆ” ಎಂದು ಆಕ್ರೋಶ ಹೊರ ಹಾಕಿದೆ.
ಹಿಂಸಾಚಾರ “ಸ್ವಯಂ-ಶೈಲಿಯ ಡಬಲ್ ಎಂಜಿನ್ ಸರ್ಕಾರವು ಮಾಸ್ಟರ್ ಮೈಂಡ್ ಮಾಡುತ್ತಿದೆ” ಎಂಬುದರಲ್ಲಿ ಸಂದೇಹವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.
“ತ್ರಿಪುರಾದಲ್ಲಿ ಹಗಲು ಹೊತ್ತಿನಲ್ಲೇ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದು ‘ಎಕ್ಸ್’ ನಲ್ಲಿ ಕಾಂಗ್ರೆಸ್ನ ತ್ರಿಪುರಾ ಉಸ್ತುವಾರಿ ಗಿರೀಶ್ ಚೋಡಂಕರ್ ಅವರ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ.
ತ್ರಿಪುರಾದಲ್ಲಿ ಆಗಸ್ಟ್ 8 ರಂದು ಪಂಚಾಯತ್ ಚುನಾವಣೆ ನಡೆಯಲಿದ್ದು, ಆಗಸ್ಟ್ 10 ರಂದು ಮತ ಎಣಿಕೆ ನಡೆಯಲಿದೆ.
ಚುನಾವಣೆ ದಿನಾಂಕವನ್ನು ಘೋಷಿಸಿದಾಗಿನಿಂದ, ಬಿಜೆಪಿ ಬೆಂಬಲಿತ ಕಿಡಿಗೇಡಿಗಳು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮನೆ ಮನೆಗೆ ದಾಳಿ ಮತ್ತು ಬೆದರಿಕೆಗಳನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್ನಿಂದ ಚುನಾವಣೆಗೆ ಸ್ಪರ್ಧಿಸಲು ಬಯಸುವವರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಗಿರೀಶ್ ಆರೋಪಿಸಿದ್ದಾರೆ.
ಜುಲೈ 11 ರಂದು ಪಂಚಾಯತ್ ಚುನಾವಣೆ ಘೋಷಣೆಯಾದಒಂದು ದಿನದ ನಂತರ, ಕಲ್ಯಾಣ್ಪುರ ಆರ್ಡಿ ಬ್ಲಾಕ್, ಮೋಹನ್ಪುರ ಆರ್ಡಿ ಬ್ಲಾಕ್, ಸತ್ಚಂಡ್ ಆರ್ಡಿ ಬ್ಲಾಕ್, ತೆಪಾನಿಯಾ ಆರ್ಡಿ ಬ್ಲಾಕ್, ಡುಕ್ಲಿ ಆರ್ಡಿ ಬ್ಲಾಕ್, ಸಲೇಮಾ ಬ್ಲಾಕ್, ಬಿಶಾಲ್ಗಢ ಬ್ಲಾಕ್ಗಳಲ್ಲಿ ಹಿಂಸಾಚಾರ ನಡೆದಿದ್ದು ಹಲವು ಮನೆಗಳನ್ನು ಅಂಗಡಿಗಳನ್ನು ಸುಟ್ಟು ಹಾಕಲಾಗಿದೆ. ಬಿಜೆಪಿ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ ಎಂದು ಚೋಡಂಕರ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.