Kannada Cinema: ವಿಭಿನ್ನ ಕಥಾನಕದ ‘ಸಾಂಕೇತ್’ ಚಿತ್ರ ಜು.26ಕ್ಕೆ ತೆರೆಗೆ


Team Udayavani, Jul 15, 2024, 8:21 PM IST

Sanketh-Film

ಮಂಗಳೂರು : ವ್ಯಕ್ತಿಗಳು ಎದುರಿಸುವ ಸಾಮಾಜಿಕ ಹಾಗೂ ಮಾನಸಿಕ ಒತ್ತಡಗಳ ಆಧಾರವಾಗಿರಿಸಿ, ಒಬ್ಬ ವ್ಯಕ್ತಿಯ ಮದುವೆ-ಮಕ್ಕಳ ವಿಷಯದ ತೊಳಲಾಟವನ್ನು ಬಿಂಬಿಸುವ ವಿಭಿನ್ನ ಶೈಲಿಯ ‘ಸಾಂಕೇತ್’ ಕನ್ನಡ ಸಿನೆಮಾ ಜು.26ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಪತ್ರಿಕಾಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿನೆಮಾದ ನಿರ್ದೇಶಕಿ ಜ್ಯೋತ್ಸ್ನಾ ಕೆ.ರಾಜ್ ಅವರು, ತನ್ನ ಜೀವನವು ಮದುವೆ ಆಗಿ ಮಕ್ಕಳನ್ನು ಹೊಂದಿದಾಗ ಮಾತ್ರ ಪೂರ್ಣವಾಗುತ್ತದೆ ಎಂದು ಒಬ್ಬ ಯುವಕ ನಂಬಿರುತ್ತಾನೆ. ಆದರೆ ಮದುವೆಯ ಕೆಲವು ವರ್ಷಗಳ ನಂತರ ಮಕ್ಕಳನ್ನು ಹೊಂದುವ ಯಾವುದೇ ವಿಧಾನ ಫಲ ನೀಡದಾಗ ತಲ್ಲಣಗೊಂಡ ವ್ಯಕ್ತಿ ಅಸಾಂಪ್ರದಾಯಿಕ ವಿಧಾನ ಪರಿಶೀಲಿಸಲು ಹೊರಡುತ್ತಾನೆ. ತನ್ನ ಸುತ್ತಲಿನ ಪ್ರತಿಯೊಬ್ಬರ ಜೀವನವನ್ನು ಯಾವ ರೀತಿ ಅಪಾಯಕ್ಕೆ ಸಿಲುಕಿಸುತ್ತಾನೆ ಎಂಬುದನ್ನು ಆಧಾರವಾಗಿಸಿ ಸಿನಿಮಾ ಮಾಡಲಾಗಿದೆ. ಇದೊಂದು ಕನ್ನಡದ ವಿಭಿನ್ನ ಪ್ರಯತ್ನ ಎಂದರು.

ನಟಿ ಚೈತ್ರಾ ಶೆಟ್ಟಿ ಮಾತನಾಡಿ, ಸ್ವತಃ ಸಂಪಾದನೆ, ಧ್ವನಿ ವಿನ್ಯಾಸ ಹಾಗೂ ನಿರ್ದೇಶನವನ್ನು ಜ್ಯೋತ್ಸ್ನಾ ಕೆ.ರಾಜ್ ನಿಭಾಯಿಸಿದ್ದಾರೆ. ವಿಕ್ಕಿ ರಾವ್, ಮೋಹಣ್ ಶೇಣಿ, ರೂಪಾಶ್ರೀ ವರ್ಕಾಡಿ, ರಾಹುಲ್ ಅಮೀನ್, ನಿರೀಕ್ಷಾ ಶೆಟ್ಟಿ, ಸದಾಶಿವ ಅಮೀನ್, ನಿರೀಕ್ಷಾ ರಾಣಿ, ರಜೀತ್ ಕದ್ರಿ, ಮೇಘನಾ ರಕ್ಷಿತಾ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದ ಟ್ರೈಲರ್ ಈಗಾಗಲೇ ಸಾಕಷ್ಟು ಗಮನಸೆಳೆದಿದೆ. ಹೀಗಾಗಿ ಸಿನೆಮಾದ ಬಗ್ಗೆ ಭಾರೀ ನಿರೀಕ್ಷೆ ಇದೆ ಎನ್ನುತ್ತಾರೆ.

ನಿರ್ದೇಶಕಿ ಜ್ಯೋತ್ಸ್ನಾ ಕೆ.ರಾಜ್ ಅವರು ಸಂಕಲನಕಾರ ಹಾಗೂ ಧ್ವನಿ ವಿನ್ಯಾಸಕಿಯಾಗಿ ಸಾಧನೆ ಮಾಡಿದ್ದು ಕೇರಳದ ಕುಂಬಳೆಯವರು. 2018ರಲ್ಲಿ ನಾಟಕ ತಂಡವನ್ನು ಕಟ್ಟುವ ಪ್ರಯತ್ನ ನಡೆಸಿದ್ದರು. ಸಿನಿಮಾ ಕುರಿತಾದ ವಿಶೇಷ ಅನುಭವ ಪಡೆದಿದ್ದಾರೆ. ರಾಜ್ ಕಾರ್ತಿಕ್ ಅವರು ಸಿನೆಮಾಟೊಗ್ರಫಿ ನಡೆಸಿದ್ದಾರೆ. ಪ್ರಕಾಶ್ ವಿ.ರಾವ್ ಸಾಹಿತ್ಯ ಬರೆದಿದ್ದು, ವಿವಿಧ ಯುವ ತಂಡವೇ ಸಿನೆಮಾ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.