Sullia ಕಾಲು ಜಾರಿ ಕೆರೆಗೆ ಬಿದ್ದು ವೃದ್ಧೆ ಸಾವು
Team Udayavani, Jul 15, 2024, 11:58 PM IST
ಸುಳ್ಯ: ತೋಟದ ಕೆರೆಗೆ ಕಾಲು ಜಾರಿ ಬಿದ್ದು ವೃದ್ಧೆ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಸೋಮ ವಾರ ಬೆಳಗ್ಗೆ ಸಂಭವಿಸಿದೆ. ಸೋಣಂಗೇರಿ ದಿ| ಮಂಜಪ್ಪ ಶೆಟ್ಟಿ ಅವರ ಪತ್ನಿ ಮೋನಕ್ಕ (82) ಮೃತಪಟ್ಟವರು.
ಅಜ್ಜಾವರ: ಕುಸಿದು ಬಿದ್ದು ಸಾವು
ಅರಂತೋಡು:ಅಜ್ಜಾವರ ಗ್ರಾಮದ ಕರಿಯ ಮೂಲೆಯಲ್ಲಿ ನಡೆದ ವಾಹನ ಅಪಘಾತವೊಂದರ ಬಗ್ಗೆ ಸ್ಥಳ ಮಹಜರು ನಡೆಯುವ ಸಂದರ್ಭದಲ್ಲಿ ಸಾಕ್ಷಿ ಹೇಳಲು ಬಂದಿದ್ದ ಐವರ್ನಾಡಿನ ವೆಂಕಟ್ರಮಣ ಎಂಬವರು ಕುಸಿದುಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಕರಿಯಮೂಲೆಯಲ್ಲಿ ಶನಿವಾರ ಪಿಕಪ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿ ಅವರು ಸಾಕ್ಷ್ಯ ನುಡಿಯಲು ಆಗಮಿಸಿದ್ದರು ಎಂದುತಿಳಿದು ಬಂದಿದೆ.ಸುಳ್ಯ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಬಸ್ ನಿಲ್ದಾಣದಲ್ಲಿ ಶವ ಪತ್ತೆ
ಪುತ್ತೂರು: ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ಗಣೇಶ (38) ಅವರ ಮೃತದೇಹವು ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾಗಿದೆ. ನಿಲ್ದಾಣದ ಮೇಲಿನ ಮಹಡಿಗೆ ತೆರಳುವ ಮೆಟ್ಟಿಲುಗಳ ಕೆಳಗೆ ವ್ಯಕ್ತಿಯೊಬ್ಬರು ಶವ ಪತ್ತೆಯಾಗಿದ್ದು, ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.