Bengaluru: ಆ್ಯಂಬುಲೆನ್ಸ್ಗೆ ದಾರಿ ಬಿಟ್ಟ ವಾಹನಗಳಿಗಿಲ್ಲ ದಂಡ
Team Udayavani, Jul 16, 2024, 10:16 AM IST
ಬೆಂಗಳೂರು: ತುರ್ತು ವಾಹನಗಳಿಗೆ ದಾರಿ ಬಿಡುವ ಸಂದರ್ಭದಲ್ಲಿ ಸಿಗ್ನಲ್ ಜಂಪ್ ಮಾಡಿ ದಂಡಕ್ಕೆ ಸಿಲುಕಿರುವ ವಾಹನ ಸವಾರರಿಗೆ ಸಂಚಾರ ಪೊಲೀಸರು ದಂಡದಿಂದ ವಿನಾಯಿತಿ ನೀಡಲು ನಿರ್ಧರಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್, ನಗರದ ಪ್ರಮುಖ ರಸ್ತೆ ಜಂಕ್ಷನ್, ಸಿಗ್ನಲ್ಗಳಲ್ಲಿ ತುರ್ತು ವಾಹನ ಆ್ಯಂಬುಲೆನ್ಸ್ಗಳಿಗೆ ಜಾಗ ಮಾಡಿಕೊಡುವುದ್ದಾಗಿ ಸಿಗ್ನಲ್ ಜಂಪ್ ಮಾಡಿದ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ವನ್ನು ಮನ್ನಾ ಮಾಡಲಾಗುತ್ತದೆ ಎಂದರು.
ವಾಹನ ಚಾಲಕರು ಆ್ಯಂಬುಲೆನ್ಸ್ಗಳಿಗೆ ಜಾಗ ಬಿಡಲು ಪ್ರಯತ್ನಿಸುವಾಗ ಸಿಗ್ನಲ್ಗಳನ್ನು ಜಂಪ್ ಮಾಡಿರುತ್ತಾರೆ. ಈ ವೇಳೆ ಟ್ರಾಫಿಕ್ ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗಿ ದಂಡ ವಿಧಿಸಲಾಗಿರುತ್ತದೆ. ಅದರಿಂದ ವಾಹನ ಸವಾರರು ಅನಗತ್ಯವಾಗಿ ದಂಡಕ್ಕೆ ಸಿಲುಕಿರುತ್ತಾರೆ. ಆದರೆ, ಇದನ್ನು ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಂಪೂರ್ಣವಾಗಿ ಕ್ಯಾಮೆರಾ ಗಳನ್ನು ಪರಿಶೀಲಿಸಿ ಆ್ಯಂಬುಲೆನ್ಸ್ಗಳಿಗೆ ದಾರಿ ಬಿಡಲು ಸಿಗ್ನಲ್ ಜಂಪ್ ಮಾಡಿದ ವಾಹನಗಳಿಗೆ ವಿಧಿಸಲಾಗಿದ್ದ ದಂಡವನ್ನು ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.