Sandalwood: ʼಹೆಜ್ಜಾರುʼ ನಂಬಿದ ತಂಡ.. ಹೊಸ ಅನುಭವ ನೀಡುವ ಸಿನಿಮಾವಿದು


Team Udayavani, Jul 16, 2024, 10:40 AM IST

10

ಕನ್ನಡ ಚಿತ್ರರಂಗದಲ್ಲಿ ಹೊಸದನ್ನು ನೀಡಬೇಕು, ಈ ಮೂಲಕ ಸಿನಿಪ್ರಿಯರನ್ನು ಸೆಳೆಯಬೇಕು ಎಂಬ ಹಂಬಲದಿಂದ ಬರುವ ನಿರ್ದೇಶಕರ ಸಂಖ್ಯೆ ಹೆಚ್ಚುತ್ತಲೇ ಇದೆ.

ಈ ಸಾಲಿಗೆ ಸೇರುವ ಹೊಸ ಹೆಸರು ಹರ್ಷಪ್ರಿಯ. ಯಾರು ಈ ಹರ್ಷಪ್ರಿಯ ಎಂದರೆ “ಹೆಜ್ಜಾರು’ ಸಿನಿಮಾ ಬಗ್ಗೆ ಹೇಳಬೇಕು. ಅನೇಕ ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ “ಹೆಜ್ಜಾರು’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜು.19ರಂದು ತೆರೆಕಾಣುತ್ತಿದೆ. ಈ ಸಿನಿಮಾ ಮೂಲಕ ಹರ್ಷಪ್ರಿಯ ಅವರ ಕನಸು ಈಡೇರುತ್ತಿದೆ.

ಕಿರುತೆರೆಯಲ್ಲಿ ಹಾಡು, ಸಂಭಾಷಣೆ, ರಿಯಾಲಿಟಿ ಶೋಗಳಲ್ಲಿ ಅನುಭವ ಪಡೆದಿರುವ ಹರ್ಷಪ್ರಿಯ ಆ ಅನುಭವದೊಂದಿಗೆ ನಿರ್ದೇಶಿಸಿರುವ ಸಿನಿಮಾ “ಹೆಜ್ಜಾರು’. ತಮ್ಮ ಮೊದಲ ನಿರ್ದೇಶನದಲ್ಲೇ ಒಂದು ಹೊಸ ಬಗೆಯ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅದು ಪ್ಯಾರಲಲ್‌ ಲೈಫ್ ಸ್ಟೋರಿ. ಕನ್ನಡ ಚಿತ್ರರಂಗದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಎಂಬುದು ತಂಡದ ಮಾತು.

ಇತ್ತೀಚೆಗೆ ಮಾಧ್ಯಮ ಮುಂದೆ ಬಂದಿದ್ದ ತಂಡ ತಮ್ಮ ಕನಸಿನ ಬಗ್ಗೆ ಮಾತನಾಡಿತು. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಹರ್ಷಪ್ರಿಯ, ಮೊದಲು ತಮಗೆ ಅವಕಾಶ ಕೊಟ್ಟ ರವಿ ಗರಣಿ, ರಾಮ್‌ ಜೀ ಅವರಿಗೆ ಥ್ಯಾಂಕ್ಸ್‌ ಹೇಳುತ್ತಲೇ ಮಾತಿಗಿಳಿದರು.

“ಹೊಸದೇನೋ ಮಾಡಬೇಕೆಂಬ ಕನಸಿನೊಂದಿಗೆ ಮಾಡಿದ ಸಿನಿಮಾ ಹೆಜ್ಜಾರು. ಪ್ಯಾರಲಲ್‌ ಲೈಫ್ ಕಥೆಯೊಂದಿಗೆ ಚಿತ್ರ ಸಾಗುತ್ತದೆ. ಇಬ್ಬರ ಬದುಕಿನಲ್ಲಿ ಒಂದೇ ರೀತಿಯ ಘಟನೆಗಳು ನಡೆಯುತ್ತಿರುತ್ತವೆ. ಚಿತ್ರದ ಕಥೆ 1965 ಹಾಗೂ 1995ರ ಕಾಲಘಟ್ಟದಲ್ಲಿದ್ದು, ಪ್ರೇಕ್ಷಕರಿಗೆ ಕುತೂಹಲದ ಜೊತೆಗೆ ಒಂದಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿಕೊಂಡು ಈ ಚಿತ್ರ ಸಾಗುತ್ತದೆ. ಇದು ಗಂಭೀರ ಕಥಾಹಂದರವೊಂದಿರುವ ಸಿನಿಮಾ ಆಗಿರುವುದರಿಂದ ಇಲ್ಲಿ ಕಾಮಿಡಿಗೆ ಜಾಗವಿಲ್ಲ. ಮಲೆನಾಡಿನ ಹಿನ್ನೆಲೆಯಲ್ಲಿ ಸಿನಿಮಾ ಸಾಗುವುದರಿಂದ ದಕ್ಷಿಣ ಕನ್ನಡದ ಮಡಂತ್ಯಾರು, ಉಜಿರೆ, ಬಂಟ್ವಾಳ, ಕಾರಿಂಜದಲ್ಲಿ ಚಿತ್ರೀಕರಣ ಮಾಡಲಾಗಿದೆ’ ಎಂದರು.

ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ರಾಮ್‌ಜೀ ಈ ಸಿನಿಮಾದ ನಿರ್ಮಾಪಕರು. ನಿರ್ದೇಶಕ ಹರ್ಷಪ್ರಿಯ ಅವರ ವ್ಯಕ್ತಿತ್ವ ಹಾಗೂ ಅವರು ಮಾಡಿಕೊಂಡಿರುವ ಕಥೆ ಎರಡೂ ಇಷ್ಟವಾಗಿ ಈ ಸಿನಿಮಾ ನಿರ್ಮಿಸಿದ್ದಾಗಿ ಹೇಳಿದ ಅವರು, “ತಾನು ಈ ಸಿನಿಮಾದ ನಿರ್ಮಾಣದಲ್ಲಿ ಬಿಟ್ಟರೆ ಮಿಕ್ಕಂತೆ ಯಾವುದರಲ್ಲೂ ತೊಡಗಿಕೊಂಡಿಲ್ಲ. ಮೊದಲ ದಿನ ಹರ್ಷಪ್ರಿಯ “ಆ್ಯಕ್ಷನ್‌’ ಎಂದಾಗ ಅವರ ಧ್ವನಿಯಲ್ಲಿದ್ದ ವಿಶ್ವಾಸ ನೋಡಿ, “ಮುಂದೆ ಇವರು ಎಲ್ಲವನ್ನು ಮಾಡುತ್ತಾರೆ’ ಎಂಬ ನಂಬಿಕೆ ಬಂತು ಎನ್ನುವುದು ರಾಮ್‌ ಜೀ ಮಾತು. ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ಸ್ವತಃ ರಾಮ್‌ಜೀ ಅವರೇ ವಹಿಸಿಕೊಂಡಿದ್ದಾರೆ. ಚಿತ್ರದಲ್ಲಿ ಭಗತ್‌ ಆಳ್ವ ನಾಯಕ. ಇದು ಇವರ ಚೊಚ್ಚಲ ಚಿತ್ರ. ಮೊದಲ ಚಿತ್ರದಲ್ಲಿ ಒಂದು ಹೊಸ ಬಗೆಯ ಪಾತ್ರ ಸಿಕ್ಕ ಬಗ್ಗೆ ಹಾಗೂ ಅದರ ಹಿಂದಿನ ತಯಾರಿಯ ಬಗ್ಗೆ ಮಾತನಾಡಿದರು.

ಶ್ವೇತಾ ಈ ಸಿನಿಮಾದ ನಾಯಕಿ. ಚಿತ್ರದಲ್ಲಿ ಜಾನಕಿ ಎಂಬ ಪಾತ್ರ ಮಾಡಿದ್ದಾರೆ. ರೆಗ್ಯುಲರ್‌ ಶೈಲಿ ಬಿಟ್ಟ ಪಾತ್ರ ಎಂಬ ಖುಷಿ ಅವರದು. ಉಳಿದಂತೆ ಚಿತ್ರದಲ್ಲಿ ನವೀನ್‌ ಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.