Ankola: ಮಳೆ ಮಾರಣ: ಶಿರೂರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು 8 ಸಾವು

ಅನಿಲ ಸೋರಿಕೆ ಭೀತಿ: ಒಲೆ ಹಚ್ಚದಂತೆ ಸುತ್ತಲಿನ ಜನರಿಗೆ ಸೂಚನೆ ರಾಜ್ಯದಲ್ಲಿ ಮಳೆ ಅವಘಡಗಳಿಂದ 10 ಸಾವು

Team Udayavani, Jul 16, 2024, 4:29 PM IST

3-ankola

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅಂಕೋಲಾ ತಾ|ನ ಶಿರೂರು ಬಳಿ ಗಂಗಾವಳಿ ನದಿ ದಡದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರ ಸಹಿತ 8 ಮಂದಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

ಮಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ ಯಲ್ಲಿರುವ ಈ ಗುಡ್ಡ ಏಕಾಏಕಿ ಜರಿದ ಪರಿಣಾಮ ಇನ್ನೊಂದು ದಿಕ್ಕಿನಲ್ಲಿ ನದಿ ದಂಡೆಯ ಅಂಚಿನಲ್ಲಿದ್ದ ಚಹಾ ಅಂಗಡಿಗಳ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದು ಬಿದ್ದು, ಅಲ್ಲಿದ್ದ ಆರು ಮಂದಿ ಹಾಗೂ ಚಹಾ ಕುಡಿಯುತ್ತಿದ್ದ ಗ್ಯಾಸ್‌ ಟ್ಯಾಂಕರ್‌ ಡ್ರೈವರ್‌ ಮತ್ತು ಕ್ಲೀನರ್‌ ನದಿಗೆ ಜಾರಿದ ಮಣ್ಣಲ್ಲಿ ಸೇರಿ ಕೊಚ್ಚಿ ಹೋದರು. ಅಲ್ಲದೆ ಅಲ್ಲೇ ನಿಲ್ಲಿಸಿದ್ದ ಅನಿಲ ಟ್ಯಾಂಕರ್‌ ಹಾಗೂ ಲಾರಿ ಕೂಡ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದವು ಎಂದು ಹೇಳಲಾಗಿದೆ.

ಈ ಘಟನೆಯಲ್ಲಿ ಚಹಾ ಅಂಗಡಿ ಮಾಲಕ ಲಕ್ಷ್ಮಣ ಬೊಮ್ಮಯ್ಯ ನಾಯ್ಕ (47), ಅವರ ಪತ್ನಿ ಶಾಂತಿ (36), ಮಕ್ಕಳಾದ ರೋಶನ್‌ (11), ಅವಂತಿಕಾ (6) ಹಾಗೂ ಅಲ್ಲಿದ್ದ ಜಗನ್ನಾಥ (55), ಉಪೇಂದ್ರ ಮತ್ತು ಉಳುವರೆ ಗ್ರಾಮದ ಸಣ್ಣು ಹನುಮಂತ ಗೌಡ, ಟ್ಯಾಂಕರ್‌ ಚಾಲಕ ತಮಿಳುನಾಡು ಮೂಲದ ಸಿನಿವಣ್ಣನ್‌ ಸೇರಿ 8 ಜನರು ನೀರುಪಾಲಾಗಿದ್ದರು. ನಾಲ್ವರ ಮೃತದೇಹ ಸಿಕ್ಕಿದೆ.

ಸಂಜೆ ವೇಳೆಗೆ ಘಟನೆ ನಡೆದ ಆರು ಕಿ.ಮೀ. ದೂರದ ನದಿಯ ಮತ್ತೊಂದು ತುದಿಯ ದುಬ್ಬನಶಶಿ ಹಾಗೂ ಗಂಗೇಕೊಳ್ಳದಲ್ಲಿ ಲಕ್ಷ್ಮಣ, ಶಾಂತಿ, ರೋಶನ್‌ ಹಾಗೂ ಸಿನಿವಣ್ಣನ್‌ ಶವಗಳು ಪತ್ತೆಯಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆ (ಎನ್‌ಡಿಆರ್‌ಎಫ್‌) ಹಾಗೂ ಕಾರವಾರ ನೌಕಾಪಡೆಯ ಮುಳುಗು ತಜ್ಞರು ಶೋಧ ಕಾರ್ಯ ಕೈಗೊಂಡರು.

ತಲಾ 5 ಲಕ್ಷ ರೂ. ಪರಿಹಾರ: ಗುಡ್ಡ ಕುಸಿತದಲ್ಲಿ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಕೊಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದೂ ಕಾರ್ಯಾಚರಣೆ: ಭಾರೀ ಮಳೆಯಿಂದಾಗಿ ಬರೆಯ ಮಣ್ಣು ಜಾರುತ್ತಿದ್ದ ಕಾರಣ ಹೆದ್ದಾರಿ ತೆರವು ಹಾಗೂ ರಕ್ಷಣ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗಿದ್ದು, ಬುಧವಾರವೂ ಮುಂದುವರಿಯಲಿದೆ.ರಾಷ್ಟ್ರೀಯ ಹೆದ್ದಾರಿ ಕುಮಟಾ ಅಂಕೋಲಾ ಮಧ್ಯೆ ರಸ್ತೆ ಸಂಚಾರ ಸ್ಥಗಿತವಾಗಿದೆ. ಹೆದ್ದಾರಿಯ ಎರಡೂ ದಿಕ್ಕಿನಲ್ಲೂ ಸಾಲುಗಟ್ಟಿ ನಿಂತಿದ್ದ ವಾಹನಗಳಿಗೆ ಪರ್ಯಾಯ ಮಾರ್ಗ ಮೂಲಕ ಸಂಚರಿಸಲು ಸೂಚಿಸಲಾಯಿತು.

ಮತ್ತೊಬ್ಬ ಮಹಿಳೆ ಕಾಣೆ: ಗುಡ್ಡ ಕುಸಿದ ಪರಿಣಾಮ ಗಂಗಾವಳಿ ನದಿಯ ಮತ್ತೂಂದು ದಡದಲ್ಲಿರುವ ಮೂರು ಮನೆಗಳು ಹಾನಿಗೊಳಗಾಗಿವೆ. ಒಟ್ಟು 12 ಮಂದಿಗೆ ಗಾಯಗಳಾಗಿವೆ. ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಭಾರೀ ಗಾತ್ರದ ಕಲ್ಲುಬಂಡೆ ನದಿಯಲ್ಲಿ ಬಿದ್ದ ಪರಿಣಾಮ ನದಿ ಸುತ್ತಲಿನ ಮನೆಯ ಬಳಿ ಭಾರೀ ಗಾತ್ರದಲ್ಲಿ ಸುನಾಮಿಯಂತೆ ನೀರು ಹರಿದು ಬಂದಿದೆ.

ಸುಮಾರು 25 ಅಡಿ ಆಳದ ನದಿ ಮಧ್ಯೆ ಬಂಡೆ ಬಿದ್ದಿದ್ದು, ಬಂಡೆಯ ಮೇಲ್ಭಾಗ ಸುಮಾರು ಐದು ಅಡಿಯಷ್ಟು ನೀರಿನ ಹೊರಗೆ ಕಾಣುತ್ತಿದೆ.

20 ಅಡಿಗಳಷ್ಟು ಮಣ್ಣು: ಬರೆ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ 20 ಅಡಿಗಳಷ್ಟು ಎತ್ತರದ ಮಣ್ಣಿನ ರಾಶಿ ಸಂಗ್ರಹವಾಗಿದೆ. ಈ ಮಣ್ಣಿನಲ್ಲಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಸಹಿತ ಮತ್ತಷ್ಟು ವಾಹನ ಹಾಗೂ ಜನರು ಸಿಲುಕಿರುವ ಬಗ್ಗೆ ಸ್ಥಳದಲ್ಲಿ ಮಾತುಗಳು ಕೇಳಿಬಂದವು.

ಕಾರವಾರ ಬಳಿ ಗುಡ್ಡ ಕುಸಿದು ಓರ್ವ ಸಾವು
ಉತ್ತರಕನ್ನಡ ಜಿಲ್ಲೆ ಕಾರವಾರ ಬಳಿಯ ಕಿನ್ನರ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ತಿಕರ್ಸ ಗುರವ್‌ ಅವರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ನಡೆಸಿ ಕಲ್ಲು ಮಣ್ಣು ತೆರವುಗೊಳಿಸಿ ಶವ ಹೊರತೆಗೆಯಲಾಗಿದೆ. ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಗೋಕರ್ಣದ ಶ್ರೀರಾಮ ಮಂದಿರ (ರಾಮತೀರ್ಥ) ಹಿಂಭಾಗದ ಗುಡ್ಡ ಕುಸಿದಿದ್ದು, ದೇವಸ್ಥಾನ ಹಾಗೂ ಅಕ್ಕಪಕ್ಕದ ಪ್ರಮುಖ ಸ್ಥಳಗಳಲ್ಲಿ ಹಾನಿಯಾಗಿದೆ.

ನದಿಯಲ್ಲಿ ತೇಲಿಹೋದ ಟ್ಯಾಂಕರ್‌
ಈ ಘಟನೆಯಲ್ಲಿ ಮಂಗಳೂರಿನಿಂದ ಧಾರವಾಡಕ್ಕೆ ಸಾಗುತ್ತಿದ್ದ ಬುಲೆಟ್‌ ಗ್ಯಾಸ್‌ ಟ್ಯಾಂಕರ್‌ ಗಂಗಾವತಿ ನದಿ ಪಾಲಾಗಿದ್ದು, ಏಳು ಕಿ.ಮೀ.ಗಳಷ್ಟು ದೂರ ತೇಲಿ ಹೋಗಿ ಸಗಡಗೇರಿ ಎಂಬಲ್ಲಿ ವಾಲಿ ನಿಂತಿದೆ. ಈ ಟ್ಯಾಂಕರ್‌ನಲ್ಲಿ ಸುಮಾರು 30 ಟನ್‌ ಅನಿಲವಿದ್ದು, ಸೋರಿಕೆ ಭೀತಿ ಕಾರಣ ಪರಿಸರದ ನಿವಾಸಿಗಳಿಗೆ ಒಲೆ ಹಾಗೂ ವಿದ್ಯುತ್‌ ದೀಪಗಳನ್ನು ಹಚ್ಚದಂತೆ ಜಿಲ್ಲಾಡಳಿತ ಸೂಚಿಸಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳಲು ಹೇಳಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.