Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ
Team Udayavani, Jul 16, 2024, 5:41 PM IST
ವಿಜಯಪುರ: ಸನ್ಮಾನ ಸ್ವೀಕರಿಸಿದ ವೇದಿಕೆಯಲ್ಲಿ ಪಕ್ಷದ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದ ಸಂಸದ ರಮೇಶ್ ಜಿಗಜಿಣಗಿ, ವೇದಿಕೆ ಇಳಿಯುತ್ತಲೇ ಯೂಟರ್ನ್ ಹೊಡೆದಿದ್ದಾರೆ.
ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗಿದ ಬಗ್ಗೆ ಏನನ್ನೂ ಹೇಳಲ್ಲ, ಈಗ ಅದನ್ನು ಬಿಟ್ಟು ಬೇರೆ ಏನನ್ನಾದರೂ ಕೇಳಿ ಎಂದಿದ್ದಾರೆ.
ತಮಗೆ ಪಕ್ಷ ನೀಡಿದ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಾ, ಕೇಂದ್ರದಲ್ಲಿ ಸಂಪುಟ ರಚನೆ ಸಂದರ್ಭದಲ್ಲಿ ಸತತ 7 ಬಾರಿ ಗೆದ್ದಿರುವ ನನ್ನ ಹೆಸರನ್ನು ಹೇಳಲಿಲ್ಲ. ತಮ್ಮ ಹಿರಿತನ ಹಾಗೂ ಅನುಭವ ಪಕ್ಷ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಇದರಿಂದ ನನಗೆ ನಷ್ಟವಿಲ್ಲ, ಪಕ್ಷಕ್ಕೆ ನಷ್ಟವಿದೆ ಎಂದಿದ್ದರು.
ಕೆಲವೇ ಕ್ಷಣಗಳಲ್ಲಿ ವೇದಿಕೆಯಿಂದ ಕೆಳಗಿದಾಗ ಎದುರಾದ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸದಾದ ರಮೇಶ ಜಿಗಜಿಣಗಿ, ಅದನ್ನು ಬಿಟ್ಟು ಬಿಡಿ, ಬೇರೆ ಏನನ್ನಾದರೂ ಕೇಳಿ. ಕೇಂದ್ರದ ನಾಯಕರು ಫೋನ್ ಮಾಡಿದ್ದಾರೆ, ಇಷ್ಟು ಮಾತ್ರ ಹೇಳಬಲ್ಲೆ ಎಂದು ಯೂಟರ್ನ್ ಹೊಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.