![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 16, 2024, 5:54 PM IST
ಮಂಗಳೂರು: ದೇವಾಲಯಗಳನ್ನು ಮೊದಲು ಸ್ವಾಯತ್ತಗೊಳಿಸುವ ಅಗತ್ಯವಿದೆ. ಸರಕಾರ ಕೈಯಿಂದ ವಿಮುಕ್ತಗೊಳಿಸಬೇಕು ಎಂದು ಈ ಹಿಂದೆ ಹಲವು ಬಾರಿ ದೇವಾಲಯಗಳನ್ನು ಆಗ್ರಹಸಿದ್ದೇವೆ. ಸರಕಾರ ತನ್ನ ಕೈಯಲ್ಲಿ ಇಟ್ಟುಕೊಂಡು ದೇವಸ್ಥಾನಗಳಲ್ಲಿ ಸಮಾಜಮುಖಿ ಕೆಲಸ ಆಗುತ್ತಿಲ್ಲ ಎನ್ನುವುದು ದೊಡ್ಡ ತಪ್ಪು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಮಂಗಳೂರಿನದಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಈ ವಿಚಾರವಾಗಿ ಸರಕಾರಗಳು ಸರ್ವೋಚ್ಚ ನ್ಯಾಯಲಯದ ನಿರ್ದೇಶನವನ್ನು ಅನುಷ್ಟಾನಕ್ಕೆ ತರಬೇಕು. ದೇವಸ್ಥಾನಗಳಿಗೆ ಭಕ್ತರೇ ನೀಡಿರುವ ಸಂಪತ್ತು ಭಕ್ತರಿಗೇ ಪುನಃ ಸಿಗಬೇಕು. ಹಾಗಾದಾಗ ಮಾತ್ರ ಪ್ರತಿ ದೇವಾಲಯದಲ್ಲೂ ಶಿಕ್ಷಣ -ವೈದ್ಯಕೀಯ ಸಂಸ್ಥೆ ನಿರ್ಮಾಣ ಮಾಡಲು ಸಾಧ್ಯವಿದೆ. ಆ ಮೂಲಕ ಸಮಾಜದ ಉದ್ಧಾರವೂ ಸಾಧ್ಯವಿದೆ ಎಂದರು.
ಅಯೋಧ್ಯೆಯಲ್ಲಿ ಕಾಮಗಾರಿ ಆರಂಭ
ಅಯೋಧ್ಯೆಯಲ್ಲಿ ಕಾಮಗಾರಿಗಳು ಮತ್ತೆ ಪ್ರಾರಂಭವಾಗಿವೆ. ಪ್ರಾಣ ಪ್ರತಿಷ್ಠಯ ಮರುದಿನದಿಂದಲೇ ಬೇಕಾದ ತಯಾರಿಗಳನ್ನು ಮಾಡಿಕೊಂಡು ಕಾಮಗಾರಿಯ ಮುಂದುವರಿದ ಭಾಗ ನಡೆಯುತ್ತಲೇ ಇದೆ. ನಾಲ್ಕೈದು ದಿನದ ಹಿಂದೆ ಅಯೊಧ್ಯೆಗೆ ಹೋಗಿ ಬಂದಿದ್ದೇವೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.