Kota: ವಿವಿಧೆಡೆ ವ್ಯಾಪಕ ಹಾನಿ; ಧರೆಗುರುಳಿದ ಮನೆಗಳು, ರಸ್ತೆ ಸಂಚಾರ ಸ್ಥಗಿತ

ಹಲವು ಮನೆಗಳಿಗೆ ಜಲದಿಗ್ಬಂಧನ; ಅಗ್ನಿಶಾಮಕದಳ; ಶೌರ್ಯ ತಂಡದಿಂದ ರಕ್ಷಣಾ ಕಾರ್ಯಾಚರಣೆ

Team Udayavani, Jul 16, 2024, 6:31 PM IST

8-kota

ಕೋಟ: ಹೋಬಳಿಯ ವಿವಿಧ ಕಡೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಸುರಿದ ಭಾರೀ ಮಳೆಗೆ ವ್ಯಾಪಕ ಮಳೆ ಹಾನಿ ಸಂಭವಿಸಿದೆ.

ಕಾವಡಿಯ ಸಂಕಾಡಿ ರತ್ನಾ ರಾಜೀವ ಮರಕಾಲ ಅವರ ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಯಜಮಾನ ರಾಜೀವ ಮರಕಾಲ ಹಾಗೂ ಅವರ ಪುತ್ರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.  ಕುಂದಾಪುರ ಸಹಾಯಕ ಕಮಿಷನರ್ ಅವರು ಸ್ಥಳಪರಿಶೀಲನೆ ನಡೆಸಿದ್ದಾರೆ.

ಸಾಲಿಗ್ರಾಮ ಬೆಟ್ಲಕ್ಕಿ  ಲಚ್ಚು ಗಾಣಿಗ ಎಂಬವರ ಮನೆ ಗೋಡೆ ಕುಸಿದು ಅಪಾರ ಹಾನಿಯುಂಟಾಗಿದೆ. ಯಡ್ತಾಡಿ ಶಂಕರ ಮರಕಾಲ ಅವರ ಮನೆಯ ಗೋಡೆ ಸಂಪೂರ್ಣ ಕುಸಿದು ಲಕ್ಷಾಂತರ ಹಾನಿ ಸಂಭವಿಸಿದೆ.

ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಬೆಟ್ಲಕ್ಕಿ, ಹೊಳೆಕೆರೆ, ಚಿತ್ರಪಾಡಿ ಭಾಗದಲ್ಲಿ ನೆರೆಯಿಂದಾಗಿ ಸುಮಾರು ನೂರಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಕೋಟ ಗೋಳಿಯಂಗಡಿ ಜಿಲ್ಲಾ ಮುಖ್ಯ ರಸ್ತೆ ಬೆಳಗ್ಗೆ 9 ಗಂಟೆಯಿಂದ ಸಂಜೆ ತನಕ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಈ ಸಂದರ್ಭ ಕಾವಡಿ ರಸ್ತೆ ಮೂಲಕ ಬಸ್ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಯಿತು. ಕೋಟ- ಗಿಳಿಯಾರು ರಸ್ತೆ, ಮಣೂರು ಕೊಕೂರು- ಬೇಳೂರು ರಸ್ತೆಯಲ್ಲೂ ನೀರು ಆವರಿಸಿ ರಸ್ತೆ ಸಂಪರ್ಕ ಕಡಿತಗೊಂಡಿತು.

ಕಾರ್ಕಡದಲ್ಲಿ 8 ಮನೆಗಳಿಗೆ ನೀರು ನುಗ್ಗಿದ್ದು ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ವಡ್ಡರ್ಸೆ ಗ್ರಾ.ಪಂ. ವ್ಯಾಪ್ತಿಯ ಕುದ್ರುಮನೆ, ಉಪ್ಲಾಡಿ ತೆಂಕಬೆಟ್ಟು, ಬನ್ನಾಡಿ, ಅಚ್ಲಾಡಿಯ ಬಲ್ಮನೆ ಪ್ರದೇಶ, ಕಾವಡಿ ಗ್ರಾಮದ ಹೊಳೆಬದಿ ಪ್ರದೇಶ ಸಂಪೂರ್ಣ ಮುಳುಗಡೆಯಾಗಿದ್ದು ಇಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು.   ಸಂಕಾದಿ ರತ್ನಾ ರಾಜೀವ ಮರಕಾಲ ಅವರ ಮನೆ ಮೇಲೆ ಮರಬಿದ್ದು ಸಂಪೂರ್ಣ ಮನೆ ಜಖಂ ಆಗಿದೆ.

ಗಿಳಿಯಾರು ಗ್ರಾಮದಲ್ಲೂ ಮನೆಗಳು ಜಲಾವೃತಗೊಂಡಿತು. ಶಿರಿಯಾರ ಗ್ರಾ.ಪಂ. ವ್ಯಾಪ್ತಿಯ ಹಲವು ಪ್ರದೇಶ ಜಲಾವೃತವಾಯಿತು.

ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಸಹಾಯಕ ಕಮಿಷನರ್ ರಶ್ಮಿ, ಜಿ.ಪಂ. ಸಿ.ಇ.ಒ. ಪ್ರಥಿಕ್ ಬಾಯಲ್  ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಂಟಿಯಾಗಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು.

ಟಾಪ್ ನ್ಯೂಸ್

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

10-uv-fusion

Mother: ತಾಯಿಯ ಮಡಿಲು ನೆಮ್ಮದಿಯ ನೆರಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.