Union Budget 2024: ಕೇಂದ್ರ ಬಜೆಟ್ಗೆ ಅಂತಿಮ ಸಿದ್ಧತೆ; ಸಿಬ್ಬಂದಿಗೆ ಹಲ್ವ ವಿತರಣೆ
ಏನಿದು ಹಲ್ವ ವಿತರಣೆ, ವಿಶೇಷತೆ ಏನು? ಇಲ್ಲಿ ಓದಿ...
Team Udayavani, Jul 16, 2024, 8:40 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.O ಸರ್ಕಾರದ ಮೊದಲ ಕೇಂದ್ರ ಬಜೆಟ್ಗೆ ಅಂತಿಮ ಹಂತದ ಸಿದ್ಧತೆಗಳು ಗುರುವಾರ ಸಾಂಪ್ರದಾಯಿಕ ಹಲ್ವ ವಿತರಣೆ ಕಾರ್ಯಕ್ರಮದೊಂದಿಗೆ ಶುರುವಾಗಿದೆ.
ನಾರ್ತ್ ಬ್ಲಾಕ್ನ ಬಜೆಟ್ ಪ್ರೆಸ್ ಕಚೇರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಡಾಯಿಯಲ್ಲಿ ತಯಾರಿಸಿದ ಹಲ್ವವನ್ನು ಬಜೆಟ್ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳುವ ಸಿಬ್ಬಂದಿಗೆ ವಿತರಿಸಿದರು. ಇದಾದ ಬಳಿಕವೇ ಬಜೆಟ್ ದಾಖಲೆಗಳ ಮುದ್ರಣ ಪ್ರಕ್ರಿಯೆ ಆರಂಭವಾಗುತ್ತದೆ. ಇದರ ಗೌಪ್ಯತೆಯ ಕಾಪಾಡಲಾಗುತ್ತದೆ. ಹಲ್ವ ವಿತರಣೆ ಕಾರ್ಯಕ್ರಮ ವೇಳೆ ಕೇಂದ್ರ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಹಾಗೂ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು, ಅಧಿಕಾರಿಗಳು, ಸಿಬ್ಬಂದಿ ಈ ವೇಳೆ ಉಪಸ್ಥಿತರಿದ್ದರು.
The final stage of the Budget preparation process for Union Budget 2024-25 commenced with the customary Halwa ceremony in the presence of Union Minister for Finance and Corporate Affairs Smt. @nsitharaman, in New Delhi, today. (1/4) pic.twitter.com/X1ywbQx70A
— Ministry of Finance (@FinMinIndia) July 16, 2024
ಏನಿದು ಹಲ್ವ ವಿತರಣೆ ಕಾರ್ಯಕ್ರಮ? ಏನಿದರ ವಿಶೇಷತೆ?
ಬಜೆಟ್ ಮಂಡನೆಗೆ ಕೆಲವು ದಿನಗಳಿರುವಾಗ ಸಾಂಪ್ರದಾಯಿಕ ಹಲ್ವ ಕಾರ್ಯಕ್ರಮ ನಡೆಯುತ್ತದೆ. ಹಲವಾರು ದಶಕಗಳಿಂದಲೂ ಇದು ಚಾಲ್ತಿಯಲ್ಲಿರುವ ಸಂಪ್ರದಾಯ. ಕೋವಿಡ್ ಬಿಕ್ಕಟ್ಟಿನ ಸಂದರ್ಭ ಮಾತ್ರ ಮಾಡಿರಲಿಲ್ಲ. ಗೌಪ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ನಾರ್ತ್ ಬ್ಲಾಕ್ನ ಬೇಸ್ಮೆಂಟ್ ಭದ್ರಕೋಟೆಯಾಗುತ್ತದೆ.
ಬಜೆಟ್ ಪ್ರತಿಗಳ ಮುದ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಸುಮಾರು 100 ಸಿಬ್ಬಂದಿ ಬಜೆಟ್ ಮಂಡನೆಯಾಗುವ ತನಕ ಕಚೇರಿಯಲ್ಲಿಯೇ ತಂಗಬೇಕಾಗುತ್ತದೆ. ಹೊರ ಜಗತ್ತಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗುತ್ತದೆ. ಈ ದಿನಗಳಲ್ಲಿ ತುರ್ತು ಪರಿಸ್ಥಿತಿ ಇದ್ದರೆ ಮಾತ್ರ ಸಿಬ್ಬಂದಿ ಫೋನ್ ಕರೆ ಮಾಡಬಹುದು. ಅದೂ ಮೇಲ್ವಿಚಾರಣೆಯಲ್ಲಿ ನಡೆಯುತ್ತದೆ. ಸಿಸಿಟಿವಿಗಳ ನೆಟ್ ವರ್ಕ್ ಇರುತ್ತದೆ. ಬೇಸ್ಮೆಂಟ್ನಲ್ಲಿ ಸಚಿವರಿಗೂ ಮೊಬೈಲ್ ಕರೆ ಮಾಡಲು ನಿರ್ಬಂಧ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.