Bageshwar; ಉತ್ತರಾಖಂಡದ ಪರ್ವತದಲ್ಲಿ ಅಕ್ರಮ ದೇಗುಲ ನಿರ್ಮಾಣ!
ಭಗವತಿ ಆದೇಶ ಹಿನ್ನೆಲೆಯಲ್ಲಿ ಈ ತೀರ್ಮಾನ: ಬಾಬಾ ಚೈತನ್ಯ
Team Udayavani, Jul 17, 2024, 6:06 AM IST
ಡೆಹ್ರಾಡೂನ್: ಪರ್ವತ ಪ್ರದೇಶದ 16500 ಅಡಿ ಎತ್ತರದಲ್ಲಿ ಸ್ವಯಂ ಘೋಷಿತ ದೇವಮಾನವನೊಬ್ಬ ಸ್ಥಳೀಯ ಆಡಳಿತದ ಗಮನಕ್ಕೂ ಬರದಂತೆ ಅಕ್ರಮವಾಗಿ ದೇಗುಲ ನಿರ್ಮಿಸಿರುವ ಘಟನೆ ಉತ್ತರಾಖಂಡದ ಬಾಗೇಶ್ವರ್ ಜಿಲ್ಲೆಯಲ್ಲಿ ನಡೆದಿದೆ.
ಸುಂದರದುಂಗ ಪರ್ವತ ಪ್ರದೇಶದಲ್ಲಿರುವ “ದೇವಿ ಕುಂಡ’ದ ಬಳಿ ಬಾಬಾ ಯೋಗಿ ಚೈತನ್ಯ ಆಕಾಶ್ ದೇಗುಲ ನಿರ್ಮಿಸಿದ್ದಾರೆ. ತನ್ನ ಕನಸಿನಲ್ಲಿ ದೇವಿ ಭಗವತಿ ಪ್ರತ್ಯಕ್ಷಳಾಗಿ ಕುಂಡದ ಬಳಿ ದೇಗುಲ ನಿರ್ಮಾಣಕ್ಕೆ ಆದೇಶಿಸಿದ್ದಾಳೆಂದು ಪರ್ವತ ಪ್ರದೇಶದಲ್ಲಿರುವ ಗ್ರಾಮಸ್ಥರಿಗೆ ಯೋಗಿ ಹೇಳಿದ್ದಾರೆ.
ಬಳಿಕ ಗ್ರಾಮಸ್ಥರ ನೆರವನ್ನೇ ಪಡೆದು ಸೂಕ್ಷ್ಮ ಪ್ರದೇಶದಲ್ಲಿ ದೇಗುಲ ನಿರ್ಮಿಸಿದ್ದಾರೆ. ಪ್ರತಿ 12 ವರ್ಷಕ್ಕೊಮ್ಮೆ ದೇವಿ ಕುಂಡದಲ್ಲಿ ನಂದರಾಜ ಯಾತ್ರೆ ನಡೆಯುತ್ತದೆ. ಆ ಸಂದರ್ಭದಲ್ಲಿ ಗ್ರಾಮಸ್ಥರು ಅಲ್ಲಿನ ಪುಣ್ಯ ನದಿಗೆ ಪೂಜೆ ಸಲ್ಲಿಸುತ್ತಿದ್ದರು. ಆದರೆ, ಸ್ವಯಂ ಘೋಷಿತ ದೇವಮಾನವ ಅದನ್ನು ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡು ಅಪವಿತ್ರಗೊಳಿಸಿದ್ದಾನೆಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಳಿಕ ವಿಚಾರ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಬಳಿಕ ಈ ಕುರಿತು ತನಿಖೆ ಆರಂಭಿಸಿದೆ. ಅಕ್ರಮ ಕಟ್ಟಡವನ್ನು ತೆರವುಗೊಳಿಸಿ, ಬಾಬಾ ಚೈತನ್ಯ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು
Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ
Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.