
Bageshwar; ಉತ್ತರಾಖಂಡದ ಪರ್ವತದಲ್ಲಿ ಅಕ್ರಮ ದೇಗುಲ ನಿರ್ಮಾಣ!
ಭಗವತಿ ಆದೇಶ ಹಿನ್ನೆಲೆಯಲ್ಲಿ ಈ ತೀರ್ಮಾನ: ಬಾಬಾ ಚೈತನ್ಯ
Team Udayavani, Jul 17, 2024, 6:06 AM IST

ಡೆಹ್ರಾಡೂನ್: ಪರ್ವತ ಪ್ರದೇಶದ 16500 ಅಡಿ ಎತ್ತರದಲ್ಲಿ ಸ್ವಯಂ ಘೋಷಿತ ದೇವಮಾನವನೊಬ್ಬ ಸ್ಥಳೀಯ ಆಡಳಿತದ ಗಮನಕ್ಕೂ ಬರದಂತೆ ಅಕ್ರಮವಾಗಿ ದೇಗುಲ ನಿರ್ಮಿಸಿರುವ ಘಟನೆ ಉತ್ತರಾಖಂಡದ ಬಾಗೇಶ್ವರ್ ಜಿಲ್ಲೆಯಲ್ಲಿ ನಡೆದಿದೆ.
ಸುಂದರದುಂಗ ಪರ್ವತ ಪ್ರದೇಶದಲ್ಲಿರುವ “ದೇವಿ ಕುಂಡ’ದ ಬಳಿ ಬಾಬಾ ಯೋಗಿ ಚೈತನ್ಯ ಆಕಾಶ್ ದೇಗುಲ ನಿರ್ಮಿಸಿದ್ದಾರೆ. ತನ್ನ ಕನಸಿನಲ್ಲಿ ದೇವಿ ಭಗವತಿ ಪ್ರತ್ಯಕ್ಷಳಾಗಿ ಕುಂಡದ ಬಳಿ ದೇಗುಲ ನಿರ್ಮಾಣಕ್ಕೆ ಆದೇಶಿಸಿದ್ದಾಳೆಂದು ಪರ್ವತ ಪ್ರದೇಶದಲ್ಲಿರುವ ಗ್ರಾಮಸ್ಥರಿಗೆ ಯೋಗಿ ಹೇಳಿದ್ದಾರೆ.
ಬಳಿಕ ಗ್ರಾಮಸ್ಥರ ನೆರವನ್ನೇ ಪಡೆದು ಸೂಕ್ಷ್ಮ ಪ್ರದೇಶದಲ್ಲಿ ದೇಗುಲ ನಿರ್ಮಿಸಿದ್ದಾರೆ. ಪ್ರತಿ 12 ವರ್ಷಕ್ಕೊಮ್ಮೆ ದೇವಿ ಕುಂಡದಲ್ಲಿ ನಂದರಾಜ ಯಾತ್ರೆ ನಡೆಯುತ್ತದೆ. ಆ ಸಂದರ್ಭದಲ್ಲಿ ಗ್ರಾಮಸ್ಥರು ಅಲ್ಲಿನ ಪುಣ್ಯ ನದಿಗೆ ಪೂಜೆ ಸಲ್ಲಿಸುತ್ತಿದ್ದರು. ಆದರೆ, ಸ್ವಯಂ ಘೋಷಿತ ದೇವಮಾನವ ಅದನ್ನು ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡು ಅಪವಿತ್ರಗೊಳಿಸಿದ್ದಾನೆಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಳಿಕ ವಿಚಾರ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಬಳಿಕ ಈ ಕುರಿತು ತನಿಖೆ ಆರಂಭಿಸಿದೆ. ಅಕ್ರಮ ಕಟ್ಟಡವನ್ನು ತೆರವುಗೊಳಿಸಿ, ಬಾಬಾ ಚೈತನ್ಯ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?

Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.