Davanagere; ಕೊಲೆ ನಡೆದು ಆರು ಗಂಟೆಯೊಳಗೆ ಆರೋಪಿ ಬಂಧನ; ತಪ್ಪಿತು ಮತ್ತೊಂದು ಹತ್ಯೆ!


Team Udayavani, Jul 16, 2024, 9:44 PM IST

Davanagere; ಕೊಲೆ ನಡೆದು ಆರು ಗಂಟೆಯೊಳಗೆ ಆರೋಪಿ ಬಂಧನ; ತಪ್ಪಿತು ಮತ್ತೊಂದು ಹತ್ಯೆ!

ದಾವಣಗೆರೆ: ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ಕೊಲೆ ನಡೆದ ಆರು ಗಂಟೆಯೊಳಗಾಗಿ ಆರೋಪಿಗಳನ್ನು ಬಂಧಿಸುವ ಜೊತೆಗೆ ಇನ್ನೊಂದು ಕೊಲೆ ತಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂತೇಬೆನ್ನೂರು ಗ್ರಾಮದ ಗಾರೆ ಕೆಲಸ ಮಾಡುತ್ತಿದ್ದ ಸಂತೋಷ್ (36) ಎಂಬಾತನನ್ನು ಸೋಮವಾರ ತಡರಾತ್ರಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಸಂತೇಬೆನ್ನೂರು ಪೊಲೀಸರು ಆರು ಗಂಟೆಯಲ್ಲೇ ಚನ್ನಗಿರಿ ತಾಲೂಕಿನ ಚನ್ನಾಪುರ ಗ್ರಾಮದ ರಂಗಸ್ವಾಮಿ (32) ಎಂಬವನನ್ನು ಬಂಧಿಸಿದ್ದಾರೆ.

ಸುರಿಯುತ್ತಿದ್ದ ಧಾರಾಕಾರ ಮಳೆಯಲ್ಲೂ ಪೊಲೀಸ್ ಇಲಾಖೆಯ ಶ್ವಾನ ತುಂಗಾ-2 ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಆಗಿದ್ದೇನು?

ಸಂತೇಬೆನ್ನೂರು-ದಾವಣಗೆರೆ ಮುಖ್ಯರಸ್ತೆಯ ಪೆಟ್ರೋಲ್ ಬಂಕ್ ಎದುರಿನ ರಸ್ತೆಯಲ್ಲಿ ಸಂತೋಷನನ್ನು ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಕೊಲೆ ಪ್ರಕರಣ ಕೆಲವು ಗಂಟೆಗಳ ಕಾಲ ಜನರಲ್ಲಿ ಭಯದ ವಾತಾವರಣ ಮೂಡಿಸಿತ್ತು.

ಕೊಲೆ ಪ್ರಕರಣದ ಆರೋಪಿತರ ಪತ್ತೆಗಾಗಿ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ ಕುಮಾರ್ ಎಂ. ಸಂತೋಷ್,ಜಿ. ಮಂಜುನಾಥ್,ಚನ್ನಗಿರಿ ಉಪಾಧೀಕ್ಷಕ ರುದ್ರಪ್ಪ ಎಸ್. ಉಜ್ಜನಕೊಪ್ಪ ಮಾರ್ಗದರ್ಶನದಲ್ಲಿ ಸಂತೇಬೆನ್ನೂರು ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ಅಪರಾಧ ಪತ್ತೆ ಶ್ವಾನ (ಕ್ರೈಂ ಡಾಗ್) ತುಂಗಾ-2 ದೊಂದಿಗೆ ಶ್ವಾನದಳ ಹಾಗೂ ಸುಕೋ ತಂಡದೊಂದಿಗೆ ಲಭ್ಯವಿರುವ ಸಾಕ್ಷಾಧಾರದಲ್ಲಿ ಕಾರ್ಯಪ್ರವೃತ್ತರಾಗಿ ಕೆಲವೇ ಗಂಟೆಯಲ್ಲಿಯೇ ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿ ರಂಗಸ್ವಾಮಿಯನ್ನು ಬಂಧಿಸಿದ್ದಾರೆ.

ಕೊಲೆಗೀಡಾದ ಸಂತೋಷ್ ಆರೋಪಿತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರಿಂದ ಕೋಪಗೊಂಡು ಕೊಲೆ ಮಾಡಿದ್ದಾನೆ. ಸಂತೋಷನನ್ನು ಕೊಲೆ ಮಾಡಿದ ನಂತರ ಹೆಂಡತಿಯ ಕೊಲೆಗೂ ಸಂಚು ರೂಪಿಸಿದ್ದ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಧಾರಕಾರವಾಗಿ ಸುರಿಯುತ್ತಿರುವ ಮಳೆಯ ಮಧ್ಯೆಯು ದಾವಣಗೆರೆ ಜಿಲ್ಲಾ ಪೊಲೀಸ್ ಮತ್ತು ತುಂಗಾ ಶ್ವಾನ ದಳದ ಸಿಬ್ಬಂದಿಗಳಾಗಿರುವ ಶಫಿವುಲ್ಲಾ, ದರ್ಗಾನಾಯ್ಕ ರವರೊಂದಿಗೆ ಆರೋಪಿತನ ಚಲನವಲನ ಗುರುತಿಸುವಲ್ಲಿ ಮಾಡಿದ ಕಾರ್ಯಶ್ಲಾಘನೀಯವಾಗಿದೆ

ಕ್ಲಪ್ತ ಕಾಲದಲ್ಲಿ ಕೊಲೆ ಆರೋಪಿಯನ್ನು ಬಂಧಿಸಿ, ಸಂಭವಿಸಬಹುದಾಗಿದ್ದ ಇನ್ನೊಂದು ಕೊಲೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.