Subrahmanya: ಇನ್ನೂ ಸಿಗದ ನೆರೆ ನೀರಲ್ಲಿ ಕೊಚ್ಚಿ ಹೋದ ಆನೆ ಮೃತದೇಹ
ಅರಣ್ಯ ಇಲಾಖೆಯಿಂದ ಹುಡುಕಾಟಕ್ಕೆ ಪ್ರಯತ್ನ !
Team Udayavani, Jul 17, 2024, 12:35 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರಾ ನದಿಯ ನೆರೆ ನೀರಿನಲ್ಲಿ ಆನೆ ಮೃತದೇಹ ತೇಲಿ ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ನಿರಂತರ ಮಳೆಯಿಂದ ಕುಮಾರ ಧಾರಾ ನದಿ ತುಂಬಿ ಹರಿಯುತ್ತಿದ್ದು, ನೀರಿನ ಮಟ್ಟವನ್ನು ವೀಕ್ಷಿಸಲು ಸೋಮ ವಾರ ತಡ ರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ಏನೋ ತೇಲಿಬರುತ್ತಿರುವುದು ಕಂಡುಬಂದಿತ್ತು.
ಸೂಕ್ಷ್ಮವಾಗಿ ಗಮನಿಸಿದಾಗ ಆನೆಯ ಮೃತದೇಹ ಎಂಬುದು ತಿಳಿದು ಬಂದಿದೆ. ಆನೆ ಕೆಲವು ದಿನಗಳ ಹಿಂದೆಯೇ ಸತ್ತು ಈ ಭಾಗಕ್ಕೆ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಪತ್ತೆಯಾಗಿಲ್ಲ.
ಹುಡುಕಾಟದ ಪ್ರಯತ್ನ
ಆನೆ ಮೃತದೇಹವನ್ನು ಅರಣ್ಯ ಇಲಾಖೆ ವತಿಯಿಂದ ಪತ್ತೆ ಹಚ್ಚುವ ಕಾರ್ಯಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರು ವುದರಿಂದ ಹುಡುಕಾಟಕ್ಕೆ ಹಿನ್ನೆಡೆಯಾಗಿದೆ. ಮಂಗಳವಾರ ಸಂಜೆವರೆಗೂ ಪತ್ತೆಯಾಗಿರಲಿಲ್ಲ. ನೀರಿನ ಮಟ್ಟ ಇಳಿಕೆ ಆದ ಬಳಿಕ ಮೃತ ದೇಹ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady: ಮುಂದಿನ ಸೆಪ್ಟಂಬರ್ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ
B C Road: ಬ್ಯಾಂಕ್ ಶಾಖೆಯಿಂದ 1.30 ಲಕ್ಷ ರೂ. ನಗದಿದ್ದ ಬ್ಯಾಗ್ ಕಳವು
Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್ ಕಳವು
Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ
Belthangady: ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್ ನಿಲುಗಡೆ; ಸಂಚಾರ ನಿಯಮ ಉಲ್ಲಂಘನೆ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.