Valmiki Nigama Scam; ಮುಂದುವರಿದ ನಾಗೇಂದ್ರ ವಿಚಾರಣೆ

ಆಪ್ತ ಸಹಾಯಕರಿಂದ ಮಾಹಿತಿ ಸಂಗ್ರಹ, ಮುಂದುವರಿಸಿದ ಗೊಂದಲದ ಹೇಳಿಕೆ

Team Udayavani, Jul 17, 2024, 7:16 AM IST

Nagendra

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಜಾರಿ ನಿರ್ದೇಶನಾಲಯ (ಇಡಿ)ದಿಂದ ವಿಚಾರಣೆ ಮುಂದುವರಿದಿದ್ದು ಅವರ ಆಪ್ತ ಸಹಾಯಕರಾದ ಹರೀಶ್‌ ಹಾಗೂ ದೇವೇಂದ್ರಪ್ಪ ಅವರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗಿದೆ.

ಇಡಿ ಅಧಿಕಾರಿಗಳು ಜಪ್ತಿ ಮಾಡಿರುವ ದಾಖಲೆಗಳು ಹಾಗೂ ಸಾಕ್ಷ್ಯ ಮುಂದಿಟ್ಟು ನಾಗೇಂದ್ರ ಅವರನ್ನು ಮಂಗಳವಾರ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಆದರೆ ನಾಗೇಂದ್ರ ಗೊಂದಲದ ಹೇಳಿಕೆ ಮುಂದುವರಿಸಿದ್ದಾರೆ.

ಮತ್ತೂಂದೆಡೆ ನಾಗೇಂದ್ರ ಪರ ವಕೀಲ ಶ್ಯಾಮ್‌ಸುಂದರ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದು ನಾಗೇಂದ್ರ ಅವರ ಇಚ್ಛೆಯಂತೆ ಅವರು ನೀಡುವ ಹೇಳಿಕೆಯನ್ನೇ ಇ.ಡಿ. ವೀಡಿಯೋ ರೆಕಾರ್ಡ್‌ ಮಾಡಬೇಕು. ಇ.ಡಿ. ತಮ್ಮ ಇಷ್ಟದಂತೆ ಬಲವಂತವಾಗಿ ಅವರ ಹೇಳಿಕೆ ದಾಖಲಿಸಿಕೊಳ್ಳಬಾರದು. ವಕೀಲರ ಜತೆಗೆ ಚರ್ಚಿಸಲು ಅವಕಾಶ ನೀಡಲು ಅನುಮತಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೋರ್ಟ್‌, ಹೇಳಿಕೆ ವೀಡಿಯೋ ಮಾಡುವುದು ತನಿಖಾಧಿಕಾರಿಗಳಿಗೆ ಬಿಟ್ಟ ವಿಚಾರ ಎಂದಿದೆ.

ವಾದ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜುಲೈ 18ಕ್ಕೆ ಮುಂದೂಡಿದೆ.

ವಾದ-ಪ್ರತಿವಾದ ಹೇಗಿತ್ತು ?

ಸರಿಯಾದ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಆಗಬೇಕು: ನಾಗೇಂದ್ರ ಪರ ವಕೀಲರು
ನಾಗೇಂದ್ರ ಪರ ವಕೀಲ ಶ್ಯಾಮ್‌ ಸುಂದರ್‌ ವಾದ ಮಂಡಿಸಿ, ನಾಗೇಂದ್ರ ಅವರಿಗೆ ವಕೀಲರೊಂದಿಗೆ ಚರ್ಚೆ ನಡೆಸಲು ಖಾಸಗಿ ಸ್ಥಳಾವಕಾಶ ವ್ಯವಸ್ಥೆ ಮಾಡಬೇಕು. ಈಗಾಗಲೇ ನಾಗೇಂದ್ರ ಅವರಿಗೆ ಸ್ಟಂಟ್‌ ಹಾಕಿಸಲಾಗಿದೆ. ಹೀಗಾಗಿ ಸರಿಯಾದ ರೀತಿಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗಿದೆ. ಸಾಕ್ಷಿ ದಾಖಲಿಸುವಾಗ, ಸಾಕ್ಷಿ ಕಲೆ ಹಾಕುವಾಗ ಒತ್ತಡ ಹಾಕುವಂತಿಲ್ಲ.

ವಕೀಲರು ಇಡಿ ವಶದಲ್ಲಿರುವ ನಾಗೇಂದ್ರ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಸಂದರ್ಭದಲ್ಲಿ ಅಧಿಕಾರಿಗಳು ಪಕ್ಕದಲ್ಲಿ ಬಂದು ನಿಲ್ಲುತ್ತಾರೆ. ಏನೇ ಮಾತನಾಡಿದರೂ ನಮ್ಮ ಮುಂದೆಯೇ ಮಾತನಾಡಬೇಕೆಂದು ಹೇಳುತ್ತಾರೆ. ಇನ್ನು ಅರ್ಜಿದಾರರಿಂದ ವಶಕ್ಕೆ ಪಡಿಸಿಕೊಂಡಿರುವ ಮೊಬೈಲ್‌ ಅನ್ನು ಮಿರರ್‌ ಇಮೇಜ್‌ ಮಾಡುವುದಕ್ಕೆ ಅವಕಾಶ ನೀಡಬಾರದು. ತನಿಖಾಧಿಕಾರಿಗಳು ಕಾನೂನು ಉಲ್ಲಂ ಸುತ್ತಿದ್ದಾರೆ ಎಂದು ವಾದಿಸಿದರು.

ಆಧಾರ ರಹಿತವಾಗಿ ಏನನ್ನೂ ಹೇಳಬಾರದು: ಇಡಿ ಪರ ವಕೀಲರು
ಇಡಿ ಪರ ವಕೀಲ ಪ್ರಸನ್ನ ಕುಮಾರ್‌ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕಾನೂನಿನಲ್ಲಿ ಇರುವ ಅಂಶಗಳು ಹಾಗೂ ನ್ಯಾಯಾಲಯದ ಆದೇಶಗಳನ್ನು ಸ್ಪಷ್ಟವಾಗಿ ತಿಳಿಸಿ ವಾದ ಮಂಡಿಸಬೇಕೇ ಹೊರತು ಅರ್ಜಿದಾರರ ಪರ ವಕೀಲರು ಆಧಾರ ರಹಿತವಾಗಿ ಏನನ್ನೂ ಹೇಳಬಾರದು. ಆರೋಪಿ ವೀಡಿಯೋ ಗ್ರಾಫ್ಗೆ ರೆಡಿ ಇದ್ದರೂ ಮಾಡಲು ಅವಕಾಶ ಇಲ್ಲ. ಆರೋಪಿಗೆ ಲಾಭದ ರೀತಿಯಲ್ಲಿ ಪ್ರಾಸಿಕ್ಯೂಷನ್‌ ಕೆಲಸ ಮಾಡಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಪರಿಣಾಮಕಾರಿ ವಿಚಾರಣೆ ನಡೆಸಬೇಕಾಗಿದೆ ಎಂದರು.

ಇಡಿ ವಿಚಾರಣೆಗೆ ಹಾಜರಾಗದ ದದ್ದಲ್‌
ಬೆಂಗಳೂರು: ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್‌ ಜಾರಿ ನಿರ್ದೇಶನಾಲಯ (ಇಡಿ) ಬಂಧನ ಭೀತಿಗೆ ಸಿಲುಕಿದ್ದು, ಇಡಿ ನೋಟಿಸ್‌ ಕೊಟ್ಟರೂ ಹಾಜರಾಗಿಲ್ಲ. ವಿಧಾನಸಭೆ ಅಧಿವೇಶನಕ್ಕೆ ಹಾಜರಾಗಿರುವ ದದ್ದಲ್‌ ಇಡಿ ಗಾಳಕ್ಕೆ ಸಿಗದಂತೆ ಭಾರೀ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಸದ್ಯ ಅಧಿವೇಶನವಿರುವ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗಿಲ್ಲ ಎಂದು ಕಾರಣ ಕೊಡುವ ಸಾಧ್ಯತೆಗಳಿವೆ. ಶೀಘ್ರದಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.