BMTC: ಕಚೇರಿಯಲ್ಲೇ ಬಿಎಂಟಿಸಿ ಉದ್ಯೋಗಿ ನೇಣಿಗೆ ಶರಣು
Team Udayavani, Jul 17, 2024, 10:53 AM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಬಿಎಂಟಿಸಿ ನೌಕರನೊಬ್ಬ ಕಚೇರಿಯಲ್ಲೇ ನೇಣುಬಿಗಿ ದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿಯ ಅಥಣಿ ಮೂಲದ ಮಹೇಶ್ ಹುಕ್ಕಲಿ (40) ಆತ್ಮಹತ್ಯೆ ಮಾಡಿಕೊಂಡ ನೌಕರ. ಕೆಲ ವರ್ಷಗ ಳಿಂದ ಮಹೇಶ್ ಬಿಂಎಂಟಿಸಿ ಕಚೇರಿ ಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷ ಅವರ ತಾಯಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಅದರಿಂದ ಮಾನಸಿಕವಾಗಿ ನೊಂದಿ ದ್ದರು. ಜತೆಗೆ ಮದ್ಯದ ಚಟ ಅಂಟಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸೋಮವಾರ ಬೆಳಗ್ಗೆ ಸೆಕ್ಯೂರಿಟಿ ಗಾರ್ಡ್ನಿಂದ ರೆಕಾರ್ಡ್ ರೂಂ ಕೀ ಪಡೆದ ಮಹೇಶ್, ಸಂಜೆ ವೇಳೆ ಯಾರೂ ಇಲ್ಲದಿ ರುವಾಗ ರೆಕಾರ್ಡ್ ರೂಮ್ನ ಕೀ ಪಡೆದು ವೈಯರ್ ಬಳಸಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳ ವಾರ ಮುಂಜಾನೆ ರೆಕಾರ್ಡ್ ರೂಮ್ನ ಕೋಣೆ ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಕೌಟುಂಬಿಕ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.