Air India Loaders 600 ಹುದ್ದೆಗೆ 25,000 ಅಭ್ಯರ್ಥಿಗಳು, ನೂಕುನುಗ್ಗಲು:ಕಾಲ್ತುಳಿತದ ಭೀತಿ!

ಪ್ರತಿ ತಿಂಗಳ ಸಂಬಳ 20,000 ರಿಂದ 25 ಸಾವಿರ ರೂಪಾಯಿ ಇದೆ.

Team Udayavani, Jul 17, 2024, 11:38 AM IST

Air India Loaders 600 ಹುದ್ದೆಗೆ 25,000 ಅಭ್ಯರ್ಥಿಗಳು, ನೂಕುನುಗ್ಗಲು:ಕಾಲ್ತುಳಿತದ ಭೀತಿ!

ಮುಂಬೈ: 600 ಉದ್ಯೋಗಾವಕಾಶಕ್ಕಾಗಿ(Airport Loaders) ಬರೋಬ್ಬರಿ 25,000 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಆಗಮಿಸಿದ ಪರಿಣಾಮ ಏರ್‌ ಇಂಡಿಯಾ ಸಿಬಂದಿಗಳು ಜನರನ್ನು ನಿಯಂತ್ರಿಸಲು ಹರಸಾಹಸಪಟ್ಟ ಘಟನೆ ನಡೆದಿದ್ದು, ಒಂದು ಹಂತದಲ್ಲಿ ಕಾಲ್ತುಳಿತದ ಭೀತಿ ಹುಟ್ಟಿಸಿರುವುದಾಗಿ ವರದಿ ತಿಳಿಸಿದೆ.

ವಿಮಾನ ನಿಲ್ದಾಣದ ಲೋಡರ್ಸ್ ಉದ್ಯೋಗದ ಅರ್ಜಿ ಪಡೆಯಲು ಅಭ್ಯರ್ಥಿಗಳು ಒಬ್ಬರನ್ನೊಬ್ಬರು ತಳ್ಳಾಡುತ್ತಾ ಕೌಂಟರ್‌ ನತ್ತ‌ ನುಗ್ಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಅಭ್ಯರ್ಥಿಗಳು ಊಟೋಪಚಾರ ಇಲ್ಲದೇ ಗಂಟೆಗಟ್ಟಲೇ ಸಾಲಿನಲ್ಲಿ ನಿಂತ ಪರಿಣಾಮ ಹಲವಾರು ಮಂದಿ ಅಸ್ವಸ್ಥರಾದಂತೆ ಕಂಡು ಬಂದಿರುವುದಾಗಿ ವರದಿಯಾಗಿದೆ.

ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಲಗೇಜ್‌ ಲೋಡಿಂಗ್‌ ಮತ್ತು ಅನ್‌ ಲೋಡಿಂಗ್‌ (ಲಗೇಜ್‌ ಇಳಿಸುವ) ಮಾಡುವ ಕೆಲಸಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಪ್ರತಿ ಕಾರ್ಗೋ ಮತ್ತು ಫುಡ್‌ ಸರಬರಾಜು ವಿಮಾನಗಳಿಗೆ ಕನಿಷ್ಠ ಐವರು ಲೋಡರ್ಸ್‌ ಗಳ ಅಗತ್ಯವಿದೆ ಎಂದು ವರದಿ ತಿಳಿಸಿದೆ.

ವಿಮಾನ ನಿಲ್ದಾಣ ಲೋಡರ್ಸ್‌ ಗಳ ಪ್ರತಿ ತಿಂಗಳ ಸಂಬಳ 20,000 ರಿಂದ 25 ಸಾವಿರ ರೂಪಾಯಿ ಇದೆ. ಆದರೆ ಓವರ್‌ ಟೈಮ್‌ ಭತ್ಯೆ ಮೂಲಕ 30,000ಕ್ಕೂ ಅಧಿಕ ಸಂಬಳ ಪಡೆಯುವವರು ಇದ್ದಾರೆ. ಈ ಕೆಲಸಕ್ಕೆ ಪ್ರಾಥಮಿಕ ಶಿಕ್ಷಣದ ಅರ್ಹತೆ ಇದ್ದು, ಅಭ್ಯರ್ಥಿಗಳು ದೈಹಿಕವಾಗಿ ಬಲಾಢ್ಯರಾಗಿರಬೇಕು.


400 ಕಿಲೋ ಮೀಟರ್‌ ದೂರದ ಬುಲ್ದಾನಾ ಜಿಲ್ಲೆಯಿಂದ ಮುಂಬೈಗೆ ಸಂದರ್ಶನಕ್ಕಾಗಿ ಆಗಮಿಸಿದ್ದ ಉದ್ಯೋಗದ ಆಕಾಂಕ್ಷಿ ಪ್ರಥಮೇಶ್ವರ್‌, ನಾನು ವಿಮಾನ ನಿಲ್ದಾಣದ ಹಮಾಲಿ ಕೆಲಸಕ್ಕಾಗಿ ಅರ್ಜಿ ಹಾಕಿದ್ದೆ. ತಿಂಗಳಿಗೆ 22,500 ರೂ. ಸಂಬಳ ನೀಡುವುದಾಗಿ ಹೇಳಿರುವುದಾಗಿ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ನಾನು ವಿದ್ಯಾಭ್ಯಾಸವನ್ನು ಬಿಟ್ಟರೂ ಕೂಡಾ ನನಗೆ ಉದ್ಯೋಗ ದೊರೆಯುತ್ತದೆ. ಬೇರೆ ದಾರಿ ಇಲ್ಲ ನಿರುದ್ಯೋಗ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಕೆಲಸ ಸಿಕ್ಕಿದ್ದೆ ದೊಡ್ಡ ಭಾಗ್ಯ ಎಂದು ಪ್ರಥಮೇಶ್‌ ತಿಳಿಸಿದ್ದಾನೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.