Kedarnath ದೇವಾಲಯದ 238 ಕೆಜಿ ಚಿನ್ನ ನಾಪತ್ತೆ: ಶಂಕರಾಚಾರ್ಯ ಆರೋಪಕ್ಕೆ ಟ್ರಸ್ಟ್ ಕಿಡಿ
ಅವಿಮುಕ್ತೇಶ್ವರಾನಂದ ಅವರಿ ಕೇದಾರನಾಥ್ ಧಾಮ್ ನ ಪಾವಿತ್ರ್ಯತೆಗೆ ಧಕ್ಕೆ ತರುವ ಹಕ್ಕಿಲ್ಲ
Team Udayavani, Jul 17, 2024, 12:59 PM IST
ಡೆಹ್ರಾಡೂನ್: ಐತಿಹಾಸಿಕ ಕೇದಾರನಾಥ ದೇವಸ್ಥಾನದ 228 ಕೆಜಿ ಬಂಗಾರ ನಾಪತ್ತೆಯಾಗಿರುವುದಾಗಿ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರ ಆರೋಪಕ್ಕೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಬುಧವಾರ (ಜುಲೈ 17) ಪ್ರತಿಕ್ರಿಯೆ ನೀಡಿದ್ದು, ಆರೋಪವನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾರೆ.
ಎಎನ್ ಐ ಜೊತೆ ಮಾತನಾಡಿದ ಅಜಯ್ ಅವರು, ಸ್ವಾಮಿ ಅವಿಮುಕ್ತೇಶ್ವರಾನಂದ ಅವರ ಆರೋಪದಂತೆ ಕೇದಾರನಾಥ ದೇವಾಲಯದಲ್ಲಿನ ಚಿನ್ನ ನಾಪತ್ತೆಯಾಗಿರುವುದು ತುಂಬಾ ದುರದೃಷ್ಟಕರ ಸಂಗತಿಯಾಗಿದೆ. ಈ ಬಗ್ಗೆ ಅವರ ಸತ್ಯವನ್ನು ಬಯಲಿಗೆಳೆಯಲಿ ಎಂದು ಆಗ್ರಹಿಸಿದ್ದಾರೆ.
ಚಿನ್ನ ನಾಪತ್ತೆಯಾಗಿರುವ ವಿಷಯವನ್ನು ಹೀಗೆ ಹೇಳಿಕೆ ನೀಡುವ ಬದಲು ಅವಿಮುಕ್ತೇಶ್ವರಾನಂದ ಸ್ವಾಮಿ ಅವರು ಆಡಳಿತ ಮಂಡಳಿಗೆ ದೂರು ನೀಡಿ, ತನಿಖೆ ನಡೆಸಲು ಒತ್ತಾಯಿಸಲಿ. ಅಲ್ಲದೇ ಅವರ ಬಳಿ ಸಾಕ್ಷ್ಯಗಳಿದ್ದರೆ ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿ ಎಂದು ಅಜೇಂದ್ರ ತಿಳಿಸಿದ್ದಾರೆ.
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಅವರಿ ಕೇದಾರನಾಥ್ ಧಾಮ್ ನ ಪಾವಿತ್ರ್ಯತೆಗೆ ಧಕ್ಕೆ ತರುವ ಹಕ್ಕಿಲ್ಲ ಎಂದು ಅಜೇಂದ್ರ ತಿರುಗೇಟು ನೀಡಿದ್ದು, ಒಂದು ವೇಳೆ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ರಾಜಕೀಯ ಅಜೆಂಡಾ ಇಟ್ಟುಕೊಂಡಿದ್ದರೆ, ಇದು ತುಂಬಾ ದುರಾದೃಷ್ಟಕರ ಎಂದು ಅಜೇಂದ್ರಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.