ವಾಮಚಾರಕ್ಕೆ ಇಟ್ಟ ತೆಂಗಿನಕಾಯಿ ತಿಂದು ಮೌಢ್ಯತೆ ಜಾಗೃತಿ ಮೂಡಿಸಿದ ಸರ್ಕಾರಿ ಕಾಲೇಜು ಉಪನ್ಯಾಸಕ

ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಾದ ವಾಮಚಾರ ಕಾಟ

Team Udayavani, Jul 17, 2024, 3:06 PM IST

6-maski

ಮಸ್ಕಿ: ವಾಮಚಾರಕ್ಕೆ ಬಳಸುವ ವಸ್ತುಗಳನ್ನು ನೋಡಿ ಭಯಪಡುವ ಕಾಲದಲ್ಲಿ ಇಲ್ಲಿನ ಕಾಲೇಜಿನ ಉಪನ್ಯಾಸಕರೊಬ್ಬರು ವಾಮಚಾರಕ್ಕೆ ಇಟ್ಟಿದ್ದ ವಸ್ತುಗಳನ್ನು ತಿಂದು ಮೌಢ್ಯತೆ ಕುರಿತು ಜಾಗೃತಿ ಮೂಡಿಸಿದರು.

ಹೌದು ಪಟ್ಟಣದ ಮುದಗಲ್ಲ ರಸ್ತೆಯಲ್ಲಿನ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗೇಟಿನಲ್ಲಿ ತೆಂಗಿನಕಾಯಿ, ನಿಂಬೆ ಹಣ್ಣು, ಕುಂಕುಮವನ್ನಿಟ್ಟು ಹೋಗಿದ್ದರು.

ಕಾಲೇಜಿನ ಸಮಯದಲ್ಲಿ ಆಗಮಿಸಿದ ಉಪನ್ಯಾಸಕರು ಅದನ್ನು ದಾಟಿ ಸುಮ್ಮನೆ ಹೋಗಲಿಲ್ಲ. ಬದಲಾಗಿ ನಿಂಬೆಹಣ್ಣು ಕತ್ತರಿಸಿ ಅದರ ರಸ ಸವಿದರು. ತೆಂಗಿನಕಾಯಿ ಹೊಡೆದು ಎಲ್ಲಾ ಉಪನ್ಯಾಸಕ ಹಾಗೂ ಪ್ರಾಂಶುಪಾಲರು ತಿಂದು ಮೌಢ್ಯತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕಡಿವಾಣ ಬೇಕು: ವಾಮಾಚಾರ ಮಾಡುವ ಪರಿಕರಗಳು ಎಲ್ಲೆಡೆ ಸಾರ್ವಜನಿಕ ಸ್ಥಳದಲ್ಲಿ ಬಿಸಾಕಿದ್ದು ಕಂಡು ಬಂದಿವೆ. ಮೂರು ರಸ್ತೆ ಕೂಡುವ ರಸ್ತೆಗಳಲ್ಲಿ ಕೋಳಿ ಮೊಟ್ಟೆ, ತೆಂಗಿನಕಾಯಿ, ಎಲೆ, ಅಡಿಕೆ, ಮೆನಸಿನಕಾಯಿ, ನಿಂಬೆ ಹಣ್ಣು, ಮಣ್ಣಿನ ಗೊಂಬೆ ಎಸೆದಿರುತ್ತಾರೆ.

ಅದರಲ್ಲಿ ಮುದಗಲ್ಲ ರಸ್ತೆಗಳಲ್ಲಿ ಹೆಚ್ಚಾಗಿದ್ದು, ಮುಂಜಾನೆ ವಾಯುವಿಹಾರಕ್ಕೆ ತೆರಳುವ ಜನರು, ಯುವಕರು ಭಯಭೀತರಗಿದ್ದಾರೆ. ಕೆಲವೊಮ್ಮೆ ಶಾಲಾ-ಕಾಲೇಜಿನ ತೆರಳುವ ರಸ್ತೆಗಳಲ್ಲಿ ಎಸೆದಿರುತ್ತಾರೆ. ಪಟ್ಟಣದಲ್ಲಿ ದಿನೇ ದಿನೇ ವಾಮಾಚಾರಗಳಂತಹ ಕೃತ್ಯಗಳು ಹೆಚ್ಚಾಗುತ್ತಿದೆ.

ಸಾರ್ವಜನಿಕ ಸ್ಥಳದಲ್ಲಿ ಮೌಡ್ಯಚರಣೆ ಮಾಡುವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕು ಹಾಗೂ ಮೌಢ್ಯತೆಯ ವಿರುದ್ಧ ತಾಲೂಕ ಆಡಳಿತ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಟಕ್ಕೆ ಬಳಸುವ ಪರಿಕರಗಳನ್ನು ಇಟ್ಟು ಹೋಗುತ್ತಿದ್ದು, ಪಟ್ಟಣದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಅದರಲ್ಲಿ ಮುದಗಲ್ಲ ರಸ್ತೆಗಳಲ್ಲಿ ಹೆಚ್ಚಾಗಿದ್ದು, ಈಚೆಗೆ ದೇವನಾಂಪ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗೇಟ್ ಮುಂಭಾಗದಲ್ಲಿ ಲಿಂಬೆಹಣ್ಣು, ತೆಂಗಿನಕಾಯಿ, ಕುಂಕುಮ ಬಿಸಾಕಿ ಹೋಗಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ಮಹಾಂತಗೌಡ ಪಾಟೀಲ ಹಾಗೂ ಉಪನ್ಯಾಸ ತಂಡ ಡಾ,ಪಂಪಾಪತಿ ನಾಯಕ, ಡಾ,ವೀರೇಶ, ಪ್ರಭುದೇವ ಸಾಲಿಮಠ, ಚನ್ನನಗೌಡ, ಹುಚ್ಚೇಶ ನಾಗಲೀಕರ್, ಮಂಜುನಾಥ, ಚಿದಾನಂದ, ಸುರೇಶ ಬಳಗಾನೂರು ಅವರು ಮಾಟಕ್ಕೆ ಇಟ್ಟಿದ್ದ ತೆಂಗಿನಕಾಯಿ ಲಿಂಬೆಹಣ್ಣು ತಿಂದು ಮೌಢ್ಯತೆಯ ವಿರುದ್ಧ ಜಾಗೃತಿ ಮೂಡಿಸಿದ್ದು ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮೌಢ್ಯದ ಹೆಸರಿನಲ್ಲಿ ಶೋಷಣೆ ಮಾಡಿ ಮಗ್ದ ಜನರ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುವ ವಾಮಚಾರ, ಪವಾಡ, ಜ್ಯೋತಿಷ್ಯ ಇವೆಲ್ಲಕ್ಕೆ ಕಡಿವಾಣ ಬೀಳಬೇಕು- ಡಾ. ಮಹಾಂತಗೌಡ. ಪ್ರಿನ್ಸಿಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಕಿ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

2-manvi

Manvi: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

1-reeee

Low BP ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾ*ವು!

18-

Sindhanur: ಗುಂಪುಗಳ ನಡುವೆ ಘರ್ಷಣೆ; ಓರ್ವ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.