Kambala ; ಹಲವು ಮೆಡಲ್ ಗೆದ್ದಿದ್ದ ಕೋಣ ‘ಲಕ್ಕಿ’ ಇನ್ನಿಲ್ಲ
Team Udayavani, Jul 17, 2024, 4:35 PM IST
ಮಂಗಳೂರು/ಕಿನ್ನಿಗೋಳಿ: ಹಲವು ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಕೋಣ ಬುಧವಾರ ಸಾವನ್ನಪ್ಪಿದೆ.
ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ “ಲಕ್ಕಿ’ಗೆ 6 ವರ್ಷ ಪ್ರಾಯವಾಗಿದ್ದು, ಉದರ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಡೆದಿದ್ದ ಕಂಬಳದಲ್ಲಿ ಸಹಿತ ಕಳೆದ ಸೀಸನ್ನಲ್ಲಿ 5 ಪದಕ ಗೆದ್ದಿತ್ತು. ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದಿದ್ದ ಕಂಬಳದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ಎರಡನೇ ಬಹುಮಾನ ಲಕ್ಕಿ ಪಡೆದಿತ್ತು. ಕಕ್ಯಪದವು, ನರಿಂಗಾನ, ಐಕಳ ಮತ್ತು ಜಪ್ಪು ಕಂಬಳಗಳಲ್ಲೂ ಲಕ್ಕಿ ಬಹುಮಾನ ಗೆದ್ದಿತ್ತು. ಬುಧವಾರ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದರು.
ಕಳೆದ ಏಳೆಂಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಕಿಗೆ ಜು.16ರಂದು ಕಾರ್ಕಳದಲ್ಲಿ ಖ್ಯಾತ ವೈದ್ಯ ವಾಸುದೇವ ಪೈ ಅಪರೇಷನ್ ನಡೆಸಿದ್ದರು. ಬುಧವಾರ ಮತ್ತೆ ಚಿಕಿತ್ಸೆಗೆಂದು ಕಾರ್ಕಳಕ್ಕೆ ಕರೆತರಲಾಗಿದ್ದು, ಅಲ್ಲಿ ಕೊನೆಯುಸಿರೆಳೆದಿದೆ.
ಐಕಳ ಪಂಚಾಯತ್ ಅಧ್ಯಕ್ಷ ದಿವಾಕರ ಚೌಟ ಅವರು ಎರಡು ವರ್ಷಗಳ ಹಿಂದೆ ಲಕ್ಕಿಯನ್ನು ಭಟ್ಕಳದ ಎಚ್. ಎನ್. ನಿವಾಸದಿಂದ ತಂದಿದ್ದರು. ಕೊಂಡೊಟ್ಟು ಬೊಲ್ಲ, ತೆಗ್ಗರ್ಸೆ ಪಾಂಡು, ನಾವುಂದ ಪುಟ್ಟ, ಮಳವೂರು ರಾಜೆ ಲಕ್ಕಿಯ ಅತ್ಯಂತ ಯಶಸ್ವೀ ಜೋಡಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Uppinangady: ಮುಂದಿನ ಸೆಪ್ಟಂಬರ್ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ
Surathkal-B.C.Road Highway: ಶಾಶ್ವತ ನಿರ್ವಹಣೆ, ಬೈಪಾಸ್ ರಸ್ತೆ ಪ್ರಸ್ತಾವನೆ ಸಲ್ಲಿಸಿ
Demonstration of divine worship: ಚರ್ಚೆ ಹುಟ್ಟುಹಾಕಿದ ದೈವಾರಾಧನೆಯ ಕಲ್ಜಿಗ ಸಿನೆಮಾ!
B C Road: ಬ್ಯಾಂಕ್ ಶಾಖೆಯಿಂದ 1.30 ಲಕ್ಷ ರೂ. ನಗದಿದ್ದ ಬ್ಯಾಗ್ ಕಳವು
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.