Sagara ಹಳವಗೋಡು; ಸೇತುವೆಯ ತಡೆಗೋಡೆ ಕುಸಿತ
Team Udayavani, Jul 17, 2024, 4:32 PM IST
ಸಾಗರ: ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳವಗೋಡು ಗ್ರಾಮದಲ್ಲಿ ನಾಗರಾಜ ಗೌಡ ಎಂಬವರ ಮನೆಯ ಸಮೀಪದ ಸೇತುವೆ ಕೆಳಭಾಗದಲ್ಲಿ ತಡೆಗೋಡೆ ಕುಸಿದಿದ್ದು ಸೇತುವೆ ಕೊಚ್ಚಿಕೊಂಡು ಹೋಗುವ ಸ್ಥಿತಿ ಎದುರಾಗಿದೆ.
ಈ ಭಾಗದಲ್ಲಿ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಸೇತುವೆ ಕುಸಿಯುತ್ತಿರುವುದು ಓಡಾಡುವ ಜನರಿಗೆ ಅಪಾಯದ ಭೀತಿ ಎದುರಾಗಿದೆ.
ಈ ಹಿಂದೆ ಈ ಸೇತುವೆಯನ್ನು ನಾಗರಾಜ ಗೌಡ ಸರ್ಕಾರದಿಂದ ಯಾವುದೇ ಅನುದಾನ ಪಡೆಯದೇ ತಮ್ಮ ಜಮೀನಿನಲ್ಲಿ ಹಾದುಹೋಗುವ ಹಳ್ಳಕ್ಕೆ ನಿರ್ಮಾಣ ಮಾಡಿದ್ದರು. ಇದು ಸ್ಥಳೀಯರಿಗೆ ಅನುಕೂಲಕರವಾಗಿತ್ತು. ಆದರೆ ಈಗ ಸೇತುವೆಯ ಒಂದು ಪಕ್ಕದ ಬಲಗೋಡೆ ಕೊಚ್ಚಿಹೋಗಿದೆ.
ಇದರಿಂದ ಸೇತುವೆ ಕುಸಿಯುತ್ತಿದ್ದು ಮತ್ತೆ ಇದರ ದುರಸ್ತಿಗೆ ಹಣ ಹೊಂದಿಸಲು ಕಷ್ಟವಾಗಿರುವುದರಿಂದ ತಕ್ಷಣ ಬದಲೀ ವ್ಯವಸ್ಥೆ ಕಲ್ಪಿಸಲು ಸ್ಥಳೀಯ ಆಡಳಿತದ ಮೊರೆ ಹೋಗಿದ್ದಾರೆ.
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ನಾಗರಾಜ್ ಗೌಡ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.