Heavy Rain ಮನೆಯ ಮೇಲ್ಛಾವಣಿ ಕುಸಿತ; ಪ್ರಾಣಾಪಾಯದಿಂದ ಪಾರಾದ ಕುಟುಂಬ
Team Udayavani, Jul 17, 2024, 5:21 PM IST
ಆನಂದಪುರ : ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ(Anandapura) ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ.
ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮೈದ್ದೀನ್ ಸಾಬ್ ಎಂಬುವರ ವಾಸದ ಮನೆಯ ಮೇಲ್ಛಾವಣಿ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮೂರು ಮಕ್ಕಳು ಸೇರಿದಂತೆ, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.
ಮೇಲ್ಛಾವಣಿ ಕುಸಿತ ಸಂದರ್ಭದಲ್ಲಿ ಕುಟುಂಬದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಧ್ಯರಾತ್ರಿ ಮನೆ ಕುಸಿದ ತಕ್ಷಣ ವಿಷಯ ತಿಳಿದ ಗ್ರಾಮಸ್ಥರು ಧಾವಿಸಿದ್ದು. ಮನೆಯೊಳಗಿದ್ದ ಕುಟುಂಬದವರನ್ನು ಹೊರಗಡೆ ಕರೆತಂದು ಬೇರೆ ಮನೆಯಲ್ಲಿ ಆಶಯ ನೀಡಲಾಯಿತು. ಮನೆಯ ಯಜಮಾನ ಮೈದ್ದೀನ್ ಸಾಬ್ ಎಂಬುವರ ಮೇಲೆ ಹಂಚುಗಳು ಬಿದ್ದಿದ್ದು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ವಿಷಯ ತಿಳಿದ ಕಂದಾಯ ಇಲಾಖೆಯ ಪ್ರಭಾರಿ ಉಪ ತಹಸಿಲ್ದಾರ್ ಕವಿರಾಜ್, ಗ್ರಾಮ ಲೆಕ್ಕಾಧಿಕಾರಿ ಚಂದ್ರಮೌಳಿ, ಗ್ರಾಮ ಪಂಚಾಯತ್ ಅಧ್ಯಕ್ಷ ಕಲೀಮುಲ್ಲಾ ಖಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್
Udupi ಶಾಸಕರ ವಿರುದ್ಧ ಕೇಸ್ ದಾಖಲಿಸಿದ್ದು ಖಂಡನೀಯ: ಡಾ| ಸರ್ಜಿ
Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!
Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.