![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 17, 2024, 5:33 PM IST
ಚಿಕ್ಕೋಡಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ ಮತ್ತು ಪಂಚಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.
ಇದರಿಂದ ಗಡಿಭಾಗದ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತ ಮಂದಿರ ಜಲಾವೃತಗೊಂಡಿದೆ.
ಕೃಷ್ಣಾ ನದಿ ಮತ್ತು ಪಂಚಗಂಗಾ ನದಿ ಸಂಗಮ ಕ್ಷೇತ್ರವಾದ ನರಸಿಂಹವಾಡಿ ಶ್ರೀ ದತ್ತ ದೇವಸ್ಥಾನಕ್ಕೆ ಮಂಗಳವಾರ ನೀರು ನುಗ್ಗಿದೆ. ದೇವವಸ್ಥಾನ ಅರ್ಧ ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಹೀಗಾಗಿ ದೇವಸ್ಥಾನ ಅರ್ಚಕರು ನೀರಿನಲ್ಲಿ ಶ್ರೀ ದತ್ತನ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಬೇರೆ ಕಡೆ ಸ್ಥಳಾಂತರಿಸಿದರು.
ಮಹಾರಾಷ್ಟ್ರ, ಕರ್ನಾಟಕ ಮತ್ತು ನೆರೆಯ ಗೋವಾ ರಾಜ್ಯದಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ದತ್ತನ ದರ್ಶನ ಪಡೆಯಲು ಆಗಮೀಸುತ್ತಾರೆ. ಆದರೆ ಮಂಗಳವಾರ ದೇವಸ್ಥಾನ ಮುಳುಗಡೆ ಆಗಿರುವುದರಿಂದ ದರ್ಶನ ಮಾಡಲು ಭಕ್ತರು ಪರದಾಡಿದರು.
ಮಧ್ಯಾಹ್ನದ ನಂತರ ಶ್ರೀ ದತ್ತನ ಮೂರ್ತಿಯನ್ನು ಅರ್ಚಕರು ಸುರಕ್ಷಿತ ಸ್ಥಳಕ್ಕೆ ಪ್ರತಿಷ್ಠಾಪನೆ ಮಾಡಿ ಭಕ್ತರ ದರ್ಶನಕ್ಕೆ ಅನುಕೂಲ ಕಲ್ಪಿಸಿದರು.
ಮಹಾರಾಷ್ಟ್ರದ ಕೊಂಕಣ ಭಾಗದ ಮಹಾಬಳೇಶ್ವರ, ಕೋಯ್ನಾ, ನವಜಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ರಾಜ್ಯದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ. ಚಿಕ್ಕೋಡಿ ಉಪವಿಭಾಗದ ಕೆಳಹಂತದ ಐದು ಸೇತುವೆ ಜಲಾವೃತಗೊಂಡು ಸಂಚಾರ ಕಡಿತವಾಗಿವೆ.
ಕೃಷ್ಣಾ ನದಿಗೆ ಮಹಾರಾಷ್ಟçದಿಂದ ಅಧಿಕ ನೀರು ಹರಿದು ಬರಲಾರಂಭಿಸಿದೆ. ಒಂದೇ ದಿನ ಕೃಷ್ಣಾ ನದಿ ಮೂರು ಅಡಿಯಷ್ಟು ನೀರು ಹೆಚ್ಚಳವಾಗಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ದೂಧಗಂಗಾ ಮತ್ತು ವೇಧಗಂಗಾ ನದಿಯೂ ಕೂಡಾ ಅಪಾಯ ಮಟ್ಟ ಹರಿಯುತ್ತಿದೆ.
ದೂಧಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ವೇಧಗಂಗಾ ನದಿಯ ಬಾರವಾಡ-ಕುನ್ನೂರ, ಭೋಜವಾಡಿ-ಕುನ್ನೂರ, ಕೃಷ್ಣಾ ನದಿಯ ಮಾಂಜರಿ-ಬಾ.ಸವದತ್ತಿ ಸೇತುವೆ ಜಲಾವೃತಗೊಂಡಿವೆ. ರ್ಯಾಯ ರಸ್ತೆ ಇರುವುದರಿಂದ ಪ್ರಯಾಣಿಕರು ಸುತ್ತುಬಳಿಸಿ ಪ್ರಯಾಣ ಮಾಡುತ್ತಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜದಿಂದ ಕೃಷ್ಣಾ ನದಿಗೆ 60 ಸಾವಿರ ಅಧಿಕ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.