Ekadashi ಪ್ರಥಮನ ಏಕಾದಶಿ: ಭಕ್ತರಿಗೆ ತಪ್ತಮುದ್ರಾಧಾರಣೆ


Team Udayavani, Jul 17, 2024, 11:43 PM IST

Ekadashi ಪ್ರಥಮನ ಏಕಾದಶಿ: ಭಕ್ತರಿಗೆ ತಪ್ತಮುದ್ರಾಧಾರಣೆ

ಉಡುಪಿ/ಮಂಗಳೂರು: ಉಡುಪಿ ಶ್ರೀಕೃಷ್ಣಮಠ ಮತ್ತಿತರ ಕಡೆ ವಿವಿಧ ಮಠಾಧೀಶರು ಬುಧವಾರ ಪ್ರಥಮನ ಏಕಾದಶಿಯಂದು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು.

ಶ್ರೀಕೃಷ್ಣ ಮಠದಲ್ಲಿ ಪರ್ಯಾಯ  ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಬೆಳಗ್ಗಿನಿಂದ ಅಪರಾಹ್ನದ ವರೆಗೆ ಮತ್ತು ಸಂಜೆ ವೇಳೆ ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನಡೆಸಿದರು.

ಜನನಿಬಿಡತೆ ಹಿನ್ನೆಲೆಯಲ್ಲಿ ಭೋಜನ ಶಾಲೆಯಲ್ಲಿ ಮುದ್ರಾಧಾರಣೆಯನ್ನು ನಡೆಸಲಾಯಿತು. ಮುದ್ರಾಧಾರಣೆ ಮಾಡುವ ಮುನ್ನ ವೈದಿಕರು ಸುದರ್ಶನ ಹೋಮ ನಡೆಸಿದರು. ಅದರಲ್ಲಿ ಬಿಸಿ ಮಾಡಿದ ಶಂಖ ಚಕ್ರಗಳ ಚಿಹ್ನೆಗಳನ್ನು ಮಠಾಧೀಶರು ಭಕ್ತರ ತೋಳಿನಲ್ಲಿ ಮುದ್ರಿಸಿದರು. ಈ ಪ್ರಯುಕ್ತ ಬೆಳಗ್ಗೆ 8 ಗಂಟೆಯೊಳಗೆ ಮಹಾಪೂಜೆಯನ್ನು ನೆರವೇರಿಸಲಾಯಿತು.

ಶಯನಿ ಏಕಾದಶಿ ಪ್ರಯುಕ್ತ ಹಲವು ದೇವಸ್ಥಾನಗಳಲ್ಲಿ ನಿರಂತರ ಭಜನೆ, ಪೂಜಾದಿಗಳು ನಡೆದವು. ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ತಮ್ಮ ಮಠಗಳಲ್ಲಿ, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅದ ಮಾರು ಮೂಲಮಠ, ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಸುಬ್ರಹ್ಮಣ್ಯ ಮಠಾಧೀಶರು ಉಜಿರೆ ಜನಾ ರ್ದನ ದೇವ ಸ್ಥಾನ, ಕೆಮ್ಮಾಯಿ ವಿಷ್ಣುಮೂರ್ತಿ ದೇವಸ್ಥಾನ, ಮಜಲು ಮಾರು ಉಮಾಮಹೇಶ್ವರ ದೇವಸ್ಥಾನ, ಸುಬ್ರಹ್ಮಣ್ಯ ಮಠ, ಸುಳ್ಯದ ರಾಘವೇಂದ್ರ ಮಠದಲ್ಲಿ, ಚಿತ್ರಾಪುರ ಮಠಾಧೀಶರು ಸುರತ್ಕಲ್‌ ಸಮೀಪದ ಚಿತ್ರಾಪುರ ಮಠ, ಎಲ್ಲೂರು ಕೆಮುಂಡೇಲು ಪಾಂಡುರಂಗ ಭಜನ ಮಂಡಳಿಯಲ್ಲಿ, ಗೃಹಸ್ಥರು ಮುದ್ರಾಧಾರಣೆ ನಡೆಸುವ ಏಕೈಕ ಸ್ಥಳವಾದ ಉಪ್ಪಿನಂಗಡಿ ಸಮೀಪದ ಎರ್ಕಿ ಮಠದಲ್ಲಿ ಅರ್ಚಕ ನರಹರಿ ಉಪಾಧ್ಯಾಯರು ಮುದ್ರಾಧಾರಣೆ ನಡೆಸಿದರು.

ಕಾಣಿಯೂರು ಶ್ರೀಗಳು ತಿರುವನಂತಪುರ, ತ್ರಿಶೂರ್‌ನಲ್ಲಿ, ಅದಮಾರು ಹಿರಿಯ ಶ್ರೀಗಳು ಬೆಂಗಳೂರಿನ ಬಸವನಗುಡಿ ಪುತ್ತಿಗೆ ಮಠದಲ್ಲಿ, ಸಂಜೆ ಬಳ್ಳಾರಿಯಲ್ಲಿ, ಸೋದೆ ಶ್ರೀಗಳು ಬೆಂಗಳೂರಿನ ಶ್ರೀಕೃಷ್ಣವಾದಿರಾಜ ಮಂದಿರದಲ್ಲಿ, ಪೇಜಾವರ ಶ್ರೀಗಳು ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ, ಚೆನ್ನೈ ಟಿ. ನಗರ ರಾಘವೇಂದ್ರ ಮಠ, ಪಲಿಮಾರು ಉಭಯ ಮಠಾಧೀಶರು ಬೆಂಗಳೂರು ಮಲ್ಲೇಶ್ವರದ ಪಲಿಮಾರು ಮಠ, ಮೈಸೂರು, ಕೆ.ಆರ್‌. ನಗರದಲ್ಲಿ, ಭಂಡಾರಕೇರಿ ಶ್ರೀಗಳು ಹುಬ್ಬಳ್ಳಿ ರಾಘವೇಂದ್ರ ಮಠದಲ್ಲಿ ಮುದ್ರಾಧಾರಣೆ ನಡೆಸಿದರು.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Padubidri: ಸ್ಕೂಟಿಗೆ ವ್ಯಾಗನಾರ್‌ ಕಾರು ಢಿಕ್ಕಿ: ಸವಾರನಿಗೆ ಗಾಯ

10

Udupi: ಟಿಕೆಟ್‌ ರಹಿತ ಪ್ರಯಾಣ; ಇಬ್ಬರು ಅಪ್ರಾಪ್ತರು ವಶಕ್ಕೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

20-shirva

Shirva ಹಿಂದೂ ಜೂನಿಯರ್‌ ಕಾಲೇಜು; ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿವೇತನ ವಿತರಣೆ

Udupi: ಮೂರೂವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ; ಸಮರ್ಪಕ ಮಾಹಿತಿ ನೀಡದ ತಾಯಿ!

Udupi: ಮೂರೂವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ; ಸಮರ್ಪಕ ಮಾಹಿತಿ ನೀಡದ ತಾಯಿ!

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

12

Arrested: ನಿಷೇಧಿತ ಇ-ಸಿಗರೆಟ್‌ ಮಾರಾಟ: ನಾಲ್ವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.